ರಾಜ್ಯದಲ್ಲಿ ಪಿಎಫ್ ಐ (PFI) ಎಸ್ ಡಿಪಿಐ (SDPI) ಸಂಘಟನೆಗಳ ಕಾರ್ಯಚಟುವಟಿಕೆಗಳ ಬಗ್ಗೆ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸುತ್ತಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕರ್ನಾಟಕದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಜಾರಿಯಲ್ಲಿದೆ. ಜನರು ಸಂವಿಧಾನ ಮತ್ತು ಕಾನೂನಿಗೆ ಬದ್ಧರಾಗಿದ್ದಾರೆ.ಉತ್ತರ ಪ್ರದೇಶ ರಾಜ್ಯದ ಮಾದರಿಯ ಬುಲ್ಡೋಜರ್ ಗಳನ್ನು ಬಳಸುವ ಅಗತ್ಯವು ರಾಜ್ಯದಲ್ಲಿ ಉದ್ಭವಿಸಿಲ್ಲ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಪಿಎಫ್ ಐ (PFI) ಎಸ್ ಡಿಪಿಐ (SDPI) ಸಂಘಟನೆಗಳ ಕಾರ್ಯಚಟುವಟಿಕೆಗಳ ಬಗ್ಗೆ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸುತ್ತಿದೆ.
ಆ ಸಂಘಟನೆಗಳ ವಿರುದ್ಧ ಸೂಕ್ತ ಸಮಯದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.