Wednesday, February 4, 2026
Wednesday, February 4, 2026

ಒಂದು ಭಾರತ ಶ್ರೇಷ್ಠ ಭಾರತ ಪ್ರವಾಸ ಕಾರ್ಯಕ್ರಮ: ವಿವಾದ ಗ್ರಸ್ತ

Date:

ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಪ್ರಯುಕ್ತ ಒಂದು ಭಾರತ ಶ್ರೇಷ್ಟ ಭಾರತ ಕಾರ್ಯಕ್ರಮದಡಿ ಪ್ರೌಢ ಶಾಲೆ ಮತ್ತು ಪಿಯು ವಿದ್ಯಾರ್ಥಿ ಗಳಿಗೆ‌ ಹೊರ ರಾಜ್ಯಕ್ಕೆ ಪ್ರವಾಸಕ್ಕೆ ಕರೆದೊಯ್ಯುವ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ.

ಆದರೆ, ಹಿಂದಿ ಭಾಷೆ ತಿಳಿದಿರುವ ವಿದ್ಯಾರ್ಥಿಗಳಿಗೆ ಮಾತ್ರ ಈ ಪ್ರವಾಸದಲ್ಲಿ ಪಾಲ್ಗೊಳ್ಳುವ ಅವಕಾಶವಿದೆ.
ಆದರೆ ಈ ಯೋಜನೆಯೇ ಇದೀಗ ವಿವಾದಕ್ಕೆ ಕಾರಣವಾಗಿದೆ.

ಹಿಂದಿ ಬಲ್ಲ ವಿದ್ಯಾರ್ಥಿಗಳಿಗೆ ಮಾತ್ರ ಪ್ರವಾಸ ಭಾಗ್ಯ ಕಲ್ಪಿಸಿರುವುದು ಇದೀಗ ಕನ್ನಡ ಪರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದೆ. ಕೇಂದ್ರ ಸರ್ಕಾರ ಈ ಸೂಚನೆ ನೀಡದೆ ಹೋದರೂ ರಾಜ್ಯ ಸರ್ಕಾರ ಯಾಕೆ ಈ ನಿರ್ಧಾರ ತೆಗೆದುಕೊಂಡಿದೆ ಎನ್ನುವ ಪ್ರಶ್ನೆ ಎದ್ದಿದೆ. ರಾಜ್ಯ ಸರ್ಕಾರದ ನಿರ್ಧಾರಕ್ಕೆ ಕನ್ನಡ ಪರ ಸಂಘಟನೆಗಳು ಕಿಡಿ ಕಾರಿವೆ.

ಈ ಪ್ರವಾಸದಲ್ಲಿ ಪಾಲ್ಗೊಳ್ಳಬೇಕಾದರೆ ವಿದ್ಯಾರ್ಥಿ ಗಳಿಗೆ ಹಿಂದಿ ಭಾಷೆ ಗೊತ್ತಿರಬೇಕು ಎನ್ನಲಾಗಿದೆ. ಹಿಂದಿ ಬರುವ ವಿದ್ಯಾರ್ಥಿಗಳಿಗೆ ಮಾತ್ರ ಆದ್ಯತೆ ಎಂದು ಅಧಿಕಾರಿಗಳಿಗೆ ಸೂಚನೆ ಕೊಟ್ಟಿರುವು ವಿವಾದಕ್ಕೆ ಕಾರಣವಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Narayana Super Specialty Hospital ನಾರಾಯಣ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೂಳೆ ಸಾಂದ್ರತೆ ಉಚಿತ ತಪಾಸಣೆ ಶಿಬಿರ

Narayana Super Specialty Hospital ಸಾರ್ವಜನಿಕರಲ್ಲಿ ಮೂಳೆ ಆರೋಗ್ಯದ ಬಗ್ಗೆ ಜಾಗೃತಿ...