ವಾಯುವ್ಯ ಕರ್ನಾಟಕ ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ದಾಖಲೆಯ 8ನೇ ಬಾರಿಗೆ ಜಯ ದಾಖಲಿಸಿದ್ದಾರೆ.
ಗೆಲುವಿನ ಗುರಿಗೆ ಬೇಕಾಗಿದ್ದ ಮತಗಳನ್ನು ಸುಲಭವಾಗಿ ಪಡೆದ ಹೊರಟ್ಟಿ ಇನ್ನೂ 4 ಸಾವಿರ ಮತಗಳ ಎಣಿಕೆ ಬಾಕಿ ಇರುವಾಗಲೇ ಜಯದ ನಗೆ ಬೀರಿದ್ದಾರೆ.
ಗೆಲುವಿನ ಅಧಿಕೃತ ಘೋಷಣೆಯಷ್ಟೇ ಬಾಕಿ ಉಳಿದಿದೆ. ಈ ವೇಳೆಗೆ ಹೊರಟ್ಟಿ ಅವರು 7500 ಕ್ಕೂ ಹೆಚ್ಚು ಮತಗಳನ್ನು ಪಡೆದಿದ್ದಾರೆ.
ವಿಧಾನಪರಿಷತ್ ನ 2 ಶಿಕ್ಷಕರು, ಮತ್ತು 2 ಪದವೀಧರರ ಕ್ಷೇತ್ರಕ್ಕೆ ಸೋಮವಾರ ನಡೆದ ಚುನಾವಣೆಯ ಮತ ಎಣಿಕೆ ಇಂದು ಬೆಳಗ್ಗೆ ಆರಂಭಗೊಂಡಿದೆ. ಸಂಜೆಯೊಳಗೆ 4 ಕ್ಷೇತ್ರಗಳ ಫಲಿತಾಂಶ ಹೊರಬೀಳಲಿದೆ ಎಂದು ಮೂಲಗಳು ತಿಳಿಸಿವೆ.
ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದ, 76 ರ ಹರೆಯದ ಹಿರಿಯ ರಾಜಕಾರಣಿ ಬಸವರಾಜ ಹೊರಟ್ಟಿ ಅವರ ವಿರುದ್ಧ ಜೆಡಿಎಸ್ ನ ಶ್ರೀಶೈಲ ಗಡದಿನ್ನಿ, ಕಾಂಗ್ರೆಸ್ ಅಭ್ಯರ್ಥಿ ಬಸವರಾಜ ಗುರಿಕಾರ ಕಣದಲ್ಲಿದ್ದರು.