Tuesday, August 25, 2026
Tuesday, August 25, 2026

ಆರೋಗ್ಯ ಕೇಂದ್ರಗಳಲ್ಲಿಯೇ ಮಲ್ಟಿ ಸ್ಪೆಷಾಲಿಟಿ ಸಲಹಾ ಸೌಲಭ್ಯ

Date:

ಎಲ್ಲರಿಗೂ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸುವ ಪ್ರಯತ್ನದಲ್ಲಿ, ಬೃಹತ್ ಬೆಂಗಳೂರು ಮಹಾನಗರಪಾಲಿಕೆಯು ತನ್ನ ಸ್ಮಾರ್ಟ್ ಸಿಟಿ ಯೋಜನೆಯ ಅಡಿಯಲ್ಲಿ ಸ್ಮಾರ್ಟ್ ವರ್ಚುವಲ್ ಮಲ್ಟಿಸ್ಪೆಷಾಲಿಟಿ ಕ್ಲಿನಿಕ್‌ಗಳನ್ನು ಪ್ರಾರಂಭಿಸುತ್ತಿದೆ.

ಈ ಯೋಜನೆಯನ್ನು ಪ್ರಥಮ ಬಾರಿಗೆ ಐಡಿಯಾ ಇನ್ಫಿನಿಟಿ ಐಟಿ ಸೊಲ್ಯೂಷನ್ಸ್ ನ ತಾಂತ್ರಿಕ ಸಹಯೋಗದಲ್ಲಿ ಪರಿಚಯಿಸಲಾಗುತ್ತಿದೆ.

ಬೆಂಗಳೂರು ನಗರದಾದ್ಯಂತ 27 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ 20 ವಿಶೇಷ ವೈದ್ಯರೊಂದಿಗೆ ಕ್ಲಿನಿಕ್‌ಗಳನ್ನು ಅಳವಡಿಸಲಾಗುವುದು ಎಂದು ತಿಳಿದುಬಂದಿದೆ.

ಈ 27 ಪ್ರಾಥಮಿಕ ಆರೋಗ್ಯ ಕೇಂದ್ರದ ಸ್ಥಳಗಳಲ್ಲಿ, ಒಂದು ಪ್ರಾಯೋಗಿಕ ಸ್ಥಳವನ್ನು ಅಳವಡಿಸುವ ಯೋಜನೆಯನ್ನು ಕಾರ್ಯಗತಗೊಳಿಸಲಾಗುವುದು ಎನ್ನಲಾಗಿದೆ.

ವರ್ಚುವಲ್ ಕ್ಲಿನಿಕ್ ಪ್ರಾಥಮಿಕ ಆರೈಕೆಯ ಪರಿದೃಶ್ಯಗಳನ್ನು ಬಲಪಡಿಸಲು ಮತ್ತು ಸಮುದಾಯ ಆಸ್ಪತ್ರೆಗಳ ಮೇಲಿನ ಹೊರೆಯನ್ನು ಕಡಿಮೆ ಮಾಡಲು ಈ ವರ್ಚುವಲ್ ಮಲ್ಟಿಸ್ಪೆಷಾಲಿಟಿ ಕ್ಲಿನಿಕ್‌ಗಳು ಅತ್ಯಗತ್ಯವಾಗಿದೆ.

ಈ ವರ್ಚುವಲ್ ಮಲ್ಟಿಸ್ಪೆಷಾಲಿಟಿ ಕ್ಲಿನಿಕ್‌ಗಳು ಬಿಬಿಎಂಪಿಯ ವಿವಿಧ ನಾಗರಿಕ ಕೇಂದ್ರ ಕಾರ್ಯಕ್ರಮಗಳ ಭಾಗವಾಗಿದೆ. ಗುಣಮಟ್ಟದ ಆರೋಗ್ಯ ಸೇವೆಯು ನಗರದ ಪ್ರತಿಯೊಬ್ಬ ವ್ಯಕ್ತಿಯನ್ನು ತಲುಪಬೇಕೆಂಬ ಆಶಯದಿಂದ ನಾವು ತಂತ್ರಜ್ಞಾನ ಮತ್ತು ಡಿಜಿಟಲೀಕರಣ ಪ್ರಕ್ರಿಯೆಯನ್ನು ಬಳಸಿಕೊಳ್ಳುತ್ತೇವೆ. ನಗರದ ಬಡವರನ್ನು ಗಮನದಲ್ಲಿಟ್ಟುಕೊಂಡು ಈ ಯೋಜನೆ ಜಾರಿಗೊಳಿಸಲಾಗಿದೆ. ಅವರ ಮನೆ ಬಾಗಿಲಿಗೆ ವಿಶ್ವ ದರ್ಜೆಯ ಆರೋಗ್ಯ ಸೌಲಭ್ಯಗಳನ್ನು ಒದಗಿಸುವ ಗುರಿಯನ್ನು ನಾವು ಹೊಂದಿದ್ದೇವೆ ಎಂದು ಸ್ಮಾರ್ಟ್ ಸಿಟಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಗರ ಪ್ರದೇಶದ ಬಡವರಿಗೆ ಪ್ರಾಥಮಿಕ ಆರೋಗ್ಯ ಸೇವೆಯು ಒಂದು ಪ್ರಮುಖ ಅಂಶವಾಗಿದೆ. ಪ್ರಸ್ತುತ ಉತ್ತಮ ಮತ್ತು ಕೈಗೆಟುಕುವ ಆರೋಗ್ಯ ಸೌಲಭ್ಯಗಳ ಕೊರತೆಯಿಂದಾಗಿ, ಸಮಾಜದ ಆರ್ಥಿಕವಾಗಿ ದುರ್ಬಲ ವರ್ಗಗಳ ಜನರು ರೋಗನಿರ್ಣಯವನ್ನು ಅಪರೂಪವಾಗಿ ಪಡೆಯುತ್ತಾರೆ. ಮಲ್ಟಿಸ್ಪೆಷಾಲಿಟಿ ಚಿಕಿತ್ಸಾಲಯಗಳಿಗೆ ಹೋಗಲು ಮತ್ತು ತಮ್ಮನ್ನು ತಾವು ಸಂಪೂರ್ಣವಾಗಿ ಪರೀಕ್ಷಿಸಿಕೊಳ್ಳಲು ಸಾಧ್ಯವಾಗದ ಕಾರಣ ರೋಗಲಕ್ಷಣಗಳಿಗೆ ಚಿಕಿತ್ಸೆ ನೀಡುವ ಕಾರ್ಯವು ಮೊಟುಕುಗೊಳ್ಳುತ್ತಿದೆ.

ಆದ್ದರಿಂದ ವರ್ಚುವಲ್ ಕ್ಲಿನಿಕ್‌ನಲ್ಲಿ ರೋಗವನ್ನು ಪತ್ತೆಹಚ್ಚಲು ಮತ್ತು ನಂತರ ಚಿಕಿತ್ಸೆ ನೀಡಲು ಉನ್ನತ ತಂತ್ರಜ್ಞಾನದ ಉಪಕರಣಗಳನ್ನು ಅಳವಡಿಸಲಾಗುವುದು ಎಂದು ಬೆಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್‌ನ ಮುಖ್ಯ ಇಂಜಿನಿಯರ್ ವಿನಾಯಕ ಸುಗೂರ್ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...