Friday, October 4, 2024
Friday, October 4, 2024

ಪದವೀಧರರು ದೇಶದ ಹಿತಕ್ಕಾಗಿ ಕೆಲಸಮಾಡಬೇಕು-ತ್ಯಾವರಚಂದ್ ಗೆಹ್ಲೂಟ್

Date:

ಹೊಸ ಶಿಕ್ಷಣ ನೀತಿಯಲ್ಲಿ ಕ್ರೀಡೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಭಾರತ ಕ್ರೀಡಾ ಕ್ಷೇತ್ರದಲ್ಲಿ ಹೆಚ್ಚಿನ ಸಾಧನೆ ಮಾಡಲು ಇದು ಪೂರಕವಾಗಿದೆ ಎಂದು ರಾಜ್ಯಪಾಲ ತ್ಯಾವರಚಂದ್ ಗೆಹ್ಲೂಟ್ ಅವರು ಹೇಳಿದ್ದಾರೆ.

ಕುವೆಂಪು ವಿವಿ ಜ್ಞಾನ ಸಹ್ಯಾದ್ರಿಯಲ್ಲಿ ಆಯೋಜಿಸಿದ್ದ 31 ಮತ್ತು 32 ನೇ ಘಟಿಕೋತ್ಸವದಲ್ಲಿ ಅಭ್ಯರ್ಥಿಗಳಿಗೆ ವಿವಿಧ ಪದವಿ ಪ್ರಧಾನ ಮಾಡಿ ಮಾತನಾಡಿದರು.

ಪ್ರಸ್ತುತ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಭಾರತದ ಸಾಧನೆ ತೃಪ್ತಿಕರವಾಗಿಲ್ಲ. ಈ ಬಾರಿ ಒಲಂಪಿಕ್ ಕ್ರೀಡಾಕೂಟದಲ್ಲಿ ಹೆಚ್ಚಿನ ಪದಕಗಳು ಬಂದಿಲ್ಲ. ಆದರೆ, ದಿವ್ಯಾಂಗರ ಒಲಂಪಿಕ್ ನಲ್ಲಿ ಹೆಚ್ಚಿನ ಪದಕಗಳು ಬಂದಿರುವುದು ಶ್ಲಾಘನೀಯ ಎಂದು ತಿಳಿಸಿದ್ದಾರೆ.

ಪದವಿ ಪಡೆದ ವಿದ್ಯಾರ್ಥಿಗಳುಗಳು ದೇಶದ ಹಿತಕ್ಕಾಗಿ ಕೆಲಸ ಮಾಡಬೇಕು. ರಾಷ್ಟ್ರ ಕವಿ ಕುವೆಂಪು ಹೆಸರೇ ವಿವಿ ಗೆ ಪ್ರೇರಣಾದಾಯಕವಾಗಿದೆ. ವಿವಿ ಕೂಡ ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವುದರಿಂದ ಇಲ್ಲಿ ಕಲಿಯುವುದೇ ಒಂದು ಹೆಮ್ಮೆ ಎಂದು ಹೇಳಿದ್ದಾರೆ.

ಡಿಗ್ರಿ ಆದ ನಂತರ ಕೇವಲ ಕೆಲಸಕ್ಕಾಗಿ ಹುಡುಕಾಟ ನಡೆಸದೆ ಅಧ್ಯಯನ ನಡೆಸುವ ಮೂಲಕ ದೇಶಕ್ಕೆ ಕೊಡುಗೆ ನೀಡುವಂತಾಗಬೇಕು.ಗುಣಮಟ್ಟದ ನೈತಿಕ ಶಿಕ್ಷಣದಿಂದ ದೇಶದ ಅಭಿವೃದ್ಧಿ ಸಾಧ್ಯವಾಗಲಿದೆ. ದೇಶದ ಉಜ್ವಲ ಭವಿಷ್ಯಕ್ಕೆ ಸರ್ಕಾರ ಜಾರಿಗೆ ತರುವ ಯೋಜನೆಗಳಲ್ಲಿ ನಿಮ್ಮ ಸಹಭಾಗಿತ್ವ ಇರಬೇಕು ಎಂದು ತಿಳಿಸಿದ್ದಾರೆ.

ಗೌರವ ಡಾಕ್ಟರೇಟ್ ಪದವಿ ಪಡೆದವರು ಅವರವರ ಕ್ಷೇತ್ರದಲ್ಲಿ ಅತ್ಯುತಮ ಸಾಧನೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿಯೂ ಇನ್ನಷ್ಟು ಸಾಧನೆ ಮಾದುವಂತಾಗಲಿ. ನಿಮ್ಮ ಜ್ಞಾನ ಯುವ ಪೀಳಿಗೆಗೆ ಹೆಚ್ಚು ಪ್ರೇರಣಾದಾಯಕವಾಗಿರಲಿ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N.Chennabasappa ಬನ್ನಿ ಪೂಜೆಗೆ ಶಾಸಕ ಚೆನ್ನಿ ಅವರಿಂದ ಪೂರ್ವೋಚಿತ ಸಿದ್ಧತೆ

S.N.Chennabasappa ನವರಾತ್ರಿ ಉತ್ಸವದ ಕಡೆಯ ದಿನದಂದು ನಗರದ ಅಲ್ಲಮಪ್ರಭು ಮೈದಾನದಲ್ಲಿ (ಫ್ರೀಡಂ...

Shree Sigandur Chowdeshwari Temple ಸಿಗಂದೂರು ದೇವಿ ವೈಭವದ ನವರಾತ್ರಿ ಉತ್ಸವ

Shree Sigandur Chowdeshwari Temple ಶ್ರೀ ಕ್ಷೇತ್ರ ಸಿಗಂದೂರಿನಲ್ಲಿ...

Madhu Bangarappa ಸಾರ್ವಜನಿಕರ ಅಹವಾಲುಗಳಿಗೆ ಸಕಾಲದಲ್ಲಿ ಅಗತ್ಯ ಸೌಲಭ್ಯ ಒದಗಿಸಿ- ಮಧು ಬಂಗಾರಪ್ಪ

Madhu Bangarappa ಸೌಲಭ್ಯ ಅರಸಿ ಕಚೇರಿಗೆ ಆಗಮಿಸುವ ಗ್ರಾಮೀಣ ಮತ್ತು...

CM Siddharamaiah ಚಾಮುಂಡೇಶ್ವರಿ ಆಶೀರ್ವಾದದಿಂದಲೇ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದೇನೆ- ಸಿದ್ಧರಾಮಯ್ಯ

CM Siddharamaiah ತಾಯಿ ಚಾಮುಂಡೇಶ್ವರಿ ಹಾಗೂ ಇಲ್ಲಿನ ಜನರ ಆಶೀರ್ವಾದದಿಂದಲೇ ಎರಡನೇ...