Monday, April 13, 2026
Monday, April 13, 2026

ಅಡಿಕೆ ಧಾರಣೆ ಬಗ್ಗೆ ಆತಂಕ ಬೇಡ- ಆರಗ ಜ್ಞಾನೇಂದ್ರ

Date:

ಅಡಕೆಗೆ ನಿಗದಿಪಡಿಸಿರುವ ಬೆಲೆಯನ್ನು ಪರಿಷ್ಕರಿಸಿ ಹೆಚ್ಚಳ ಮಾಡುವಂತೆ ಒತ್ತಾಯಿಸಲು ಕೇಂದ್ರ ಸರ್ಕಾರಕ್ಕೆ ನಿಯೋಗ ತೆಗೆದುಕೊಂಡು ಹೋಗಲಾಗುವುದು ಎಂದು ರಾಜ್ಯ ಅಡಕೆ ಟಾಸ್ಕ್ ಫೋರ್ಸ್ ಅಧ್ಯಕ್ಷರೂ ಆದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಿಳಿಸಿದ್ದಾರೆ.

ಹಣದುಬ್ಬರ ಹಾಗೂ ಇನ್ನಿತರ ಕಾರಣಗಳಿಂದಾಗಿ ಅಡಕೆ ಬೆಳೆ ಉತ್ಪಾದನಾ ವೆಚ್ಚವೂ ಹೆಚ್ಚಿದ್ದು ಪ್ರಸ್ತುತ ಪ್ರತಿ ಕಿಲೋ ಅಡಕೆ ಅಂದಾಜು ವೆಚ್ಚ ರೂಪಾಯಿ 25 ರಷ್ಟಿದೆ. ಸುಮಾರು ಆರು ವರ್ಷಗಳ ಹಿಂದೆ ಈ ದರ ನಿಗದಿ ಪಡಿಸಲಾಗಿದೆ. ಇದನ್ನು ಸದ್ಯದ ಖರ್ಚುವೆಚ್ಚಗಳಿಗೆ ಅನುಗುಣವಾಗಿ ಪರಿಷ್ಕರಿಸುವ ಅನಿವಾರ್ಯತೆ ಸೃಷ್ಟಿಯಾಗಿದೆ ಎಂದು ಹೇಳಿದ್ದಾರೆ.

ಅಡಕೆ ಧಾರಣೆ ಸಂಬಂಧ ರೈತರು ಯಾವುದೇ ಆತಂಕ ಪಡುವುದು ಬೇಡ. ರಾಜ್ಯದ ಮಲೆನಾಡು ಭಾಗದ ಲಕ್ಷಾಂತರ ರೈತ ಹಾಗೂ ರೈತ_ಕಾರ್ಮಿಕ ಕುಟುಂಬಗಳ ಆರ್ಥಿಕ ಬೆನ್ನೆಲುಬಾಗಿರುವ ಅಡಕೆ ಬೆಳೆಗೆ ಸುಸ್ಥಿರ ಬೆಲೆ ಒದಗಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬದ್ಧವಾಗಿದ್ದು, ಈ ಕುರಿತು ರೈತ ಸಮುದಾಯ ಯಾವುದೇ ಆತಂಕ ಪಡುವುದು ಬೇಡ ಎಂದು ಮನವಿ ಮಾಡಿದ್ದಾರೆ.

ಈ ಹಿಂದೆ ಕೇಂದ್ರ ಸರಕಾರ ದೇಶಿಯ ಅಡಿಕೆ ಉತ್ಪನ್ನ ಅಂದಾಜು ವೆಚ್ಚವನ್ನು ಹೆಚ್ಚಳ ಮಾಡಿದಾಗ, ವಿದೇಶದಿಂದ ಅಮದಾಗುತ್ತಿದ್ದ ಕಡಿಮೆ ಗುಣಮಟ್ಟದ ಅಡಿಕೆ ಪ್ರಮಾಣ ಗಣನೀಯವಾಗಿ ತಗ್ಗಿತ್ತು. ವಿದೇಶದಿಂದ ಆಮದಾಗುವ ಅಡಿಕೆ, ಗುಣಮಟ್ಟದಲ್ಲಿ ಅತ್ಯಂತ ನಿಕೃಷ್ಟ ವಾಗಿದ್ದು ದೇಶಿಯ ಅಡಿಕೆ, ಗುಣಮಟ್ಟದಲ್ಲಿ ಆತ್ಯುಕೃಷ್ಟ ವಾಗಿದೆ ಎಂದು, ಪ್ರಮಾಣೀಕೃತ ವಾಗಿದೆ ಎಂದೂ ತಿಳಿಸಿದ್ದಾರೆ.

ಕೇಂದ್ರ ಕೃಷಿ ಸಚಿವರನ್ನು ರಾಜ್ಯ ಟಾಸ್ಕ್ ಫೋರ್ಸ್ ನಿಯೋಗ ಭೇಟಿಯಾಗಿ, ಅಡಿಕೆ ಉತ್ಪನ್ನ ಅಂದಾಜು ವೆಚ್ಚ ಪರಿಷ್ಕರಿಸಿ ಹೆಚ್ಚಳ ಮಾಡಲು ಮನವರಿಕೆ ಮಾಡಿ ಕೊಡಲಾಗುವುದು, ರೈತರು ಅಡಿಕೆ ಧಾರಣೆ ಬಗ್ಗೆ ಯಾವುದೇ ಆತಂಕ ಹಾಗೂ ಭಯಪಡುವುದು ಬೇಡ ಎಂದೂ ಸಚಿವರು ವಿನಂತಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಶಿಕಾರಿಪುರ ಬಸ್ ಅಫಘಾತ.ಗಾಯಾಳುಗಳ ಕ್ಷೇಮ ವಿಚಾರಿಸಿದ ಸಂಸದ ರಾಘವೇಂದ್ರ

B.Y. Raghavendra ಶಿಕಾರಿಪುರದ ಕುಮದ್ವತಿ ಕಾಲೇಜಿನ ಮುಂಭಾಗದಲ್ಲಿ ಇಂದು ಬೆಳಿಗ್ಗೆ...

U.T. Khader ದೇಶ,ಸಮಾಜ ಕಟ್ಟುವಲ್ಲಿ ಪತ್ರಕರ್ತರ ಪಾತ್ರ ಅನನ್ಯ-ಯು‌.ಟಿ‌.ಖಾದರ್

U.T. Khader ಬೀದರ್‌ನ ಝೀರಾ ಕನ್ವೆನ್ಸನ್ ಹಾಲ್‌ನಲ್ಲಿ ಕಳೆದ ಎರಡು ದಿನಗಳಿಂದ...

Asha Bhosle ಭಾರತೀಯ‌ “ಇನಿದನಿ “ಆಶಾ ಭೋಂಸ್ಲೆ ಇನ್ನಿಲ್ಲ.!

Asha Bhosle ಭಾರತದ ಜನಪ್ರಿಯ ಗಾಯಕಿ ಆಶಾ ಭೋಂಸ್ಲೆ (92). ಅವರು...

Bapuji Institute of Hi-Tech Education ಯಶಸ್ವಿ ಬದುಕಿಗೆ ಶಾಲಾ ಪಾಠಕ್ಕಿಂತ ಜೀವನ ಪಾಠವೇ ಮುಖ್ಯ- ಡಾ.ರಾಹುಲ್ ದೇವರಾಜ್

Bapuji Institute of Hi-Tech Education ಜಾಗತಿಕ ಸವಾಲುಗಳನ್ನೆದುರಿಸುತ್ತಾ ಬದುಕಿನಲ್ಲಿ ಯಶಸ್ಸು...