Sunday, May 3, 2026
Sunday, May 3, 2026

ದಿನೇಶ್ ಕಾರ್ತೀಕ್ ಕ್ಷಿಪ್ರಗತಿಯ ಬ್ಯಾಟಿಂಗ್;ಜಯಸಾಧಿಸಿದ ಭಾರತ

Date:

14ನೇ ಓವರ್​ನ ನಾಲ್ಕನೇ ಎಸೆತದಲ್ಲಿ ಯಾನ್ಸನ್ ಎಸೆತವನ್ನು ಪಾಯಿಂಟ್​ ಕಡೆಗೆ ಕಾರ್ತಿಕ್ ಹೊಡೆದರು. ನಂತರ ಕಾರ್ತಿಕ್ ಇದಕ್ಕೆ ಸಿಂಗಲ್ ತೆಗೆದುಕೊಳ್ಳಲು ಬಯಸಿದ್ದರು. ಆದರೆ ಅವರಿಗೆ ಇನ್ನೊಂದು ತುದಿಯಿಂದ ಪಾಂಡ್ಯರ ಬೆಂಬಲ ಸಿಗಲಿಲ್ಲ.

ಐಪಿಎಲ್ ನಲ್ಲಿ ಸೂಪರ್‌ಹಿಟ್ ಪ್ರದರ್ಶನ ನೀಡುವ ಮೂಲಕ ಸುದೀರ್ಘ ಕಾಯುವಿಕೆಯ ನಂತರ ಭಾರತ ತಂಡಕ್ಕೆ ಮರಳಿದ ದಿನೇಶ್ ಕಾರ್ತಿಕ್, ದಕ್ಷಿಣ ಆಫ್ರಿಕಾ ವಿರುದ್ಧದ ನಾಲ್ಕನೇ ಟಿ 20 ಪಂದ್ಯದಲ್ಲಿ ಅದ್ಭುತ ಆಟ ಪ್ರದರ್ಶಿಸಿದರು.
ತತ್ತರಿಸುತ್ತಿದ್ದ ಟೀಂ ಇಂಡಿಯಾದ ಇನ್ನಿಂಗ್ಸ್‌ ನಿಭಾಯಿಸಿದ ಕಾರ್ತಿಕ್ ಹಾರ್ದಿಕ್ ಪಾಂಡ್ಯ ಎದುರು ದೊಡ್ಡ ಅಬ್ಬರ ಮಾಡಿದರು.
ನಂತರ ಕಾರ್ತಿಕ್ ಇದಕ್ಕೆ ಸಿಂಗಲ್ ತೆಗೆದುಕೊಳ್ಳಲು ಬಯಸಿದ್ದರು.

ಆದರೆ ಅವರಿಗೆ ಇನ್ನೊಂದು ತುದಿಯಿಂದ ಪಾಂಡ್ಯರ ಬೆಂಬಲ ಸಿಗಲಿಲ್ಲ. ಹಾರ್ದಿಕ್​ಗೆ ಸಿಂಗಲ್ ತೆಗೆದುಕೊಳ್ಳುವ ಮೂಡ್ ಇರಲಿಲ್ಲ.
ನಾಯಕ ರಿಷಬ್ ಪಂತ್ ಔಟಾದ ನಂತರ, ಕಾರ್ತಿಕ್ ಕ್ರೀಸ್‌ನಲ್ಲಿ ಪಾಂಡ್ಯಗೆ ಬೆಂಬಲ ನೀಡಲು ಬಂದರು. 14ನೇ ಓವರ್​ನ ನಾಲ್ಕನೇ ಎಸೆತದಲ್ಲಿ ಯಾನ್ಸನ್ ಎಸೆತವನ್ನು ಪಾಯಿಂಟ್​ ಕಡೆಗೆ ಕಾರ್ತಿಕ್ ಹೊಡೆದರು.

ಕಾರ್ತಿಕ್ ಬಿರುಗಾಳಿ ಆಟ
ನಾಲ್ಕನೇ ಟಿ20 ಪಂದ್ಯದಲ್ಲಿ ಕಾರ್ತಿಕ್ 27 ಎಸೆತಗಳಲ್ಲಿ 55 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡಿದರು. ಕಾರ್ತಿಕ್ ತಮ್ಮ ಇನ್ನಿಂಗ್ಸ್‌ನಲ್ಲಿ 9 ಬೌಂಡರಿ ಮತ್ತು 2 ಸಿಕ್ಸರ್‌ಗಳನ್ನು ಹೊಡೆದರು.

ಅದೇ ಸಮಯದಲ್ಲಿ, ಪಾಂಡ್ಯ 31 ಎಸೆತಗಳಲ್ಲಿ 46 ರನ್ ಗಳಿಸಿದರು.
ಕೇವಲ 4 ರನ್‌ಗಳಿಂದ ಅರ್ಧಶತಕ ವಂಚಿತರಾದರು. ಕಾರ್ತಿಕ್ ಮತ್ತು ಪಾಂಡ್ಯ ಅವರ ವೇಗದ ಇನ್ನಿಂಗ್ಸ್‌ನ ಆಧಾರದ ಮೇಲೆ ಭಾರತ ನಿಗದಿತ ಓವರ್‌ನಲ್ಲಿ 6 ವಿಕೆಟ್‌ಗೆ 169 ರನ್ ಗಳಿಸಿತು. ಒಂದು ಹಂತದಲ್ಲಿ ಭಾರತ ಕೇವಲ 81 ರನ್‌ಗಳಿಗೆ ತನ್ನ 4 ವಿಕೆಟ್‌ಗಳನ್ನು ಕಳೆದುಕೊಂಡಿತ್ತು.

ಭಾರತಕ್ಕೆ ಜಯ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ರಿಷಬ್ ಪಂತ್ ನೇತೃತ್ವದ ಟೀಂ ಇಂಡಿಯಾ ನಿಗದಿತ ಓವರ್‌ನಲ್ಲಿ 6 ವಿಕೆಟ್‌ಗೆ 169 ರನ್ ಗಳಿಸಿತು. ಇದಕ್ಕುತ್ತರವಾಗಿ ದಕ್ಷಿಣ ಆಫ್ರಿಕಾ ತಂಡ 87 ರನ್‌ಗಳಿಗೆ ಕುಸಿಯಿತು. 170 ರನ್​ಗಳ ಗುರಿ ಬೆನ್ನತ್ತಿದ ದಕ್ಷಿಣ ಆಫ್ರಿಕಾ ತಂಡ ಭಾರತದ ಬೌಲರ್​ಗಳ ಎದುರು ನಿಲ್ಲಲು ಸಾಧ್ಯವಾಗಲಿಲ್ಲ. ಅವೇಶ್ ಖಾನ್ ದಕ್ಷಿಣ ಆಫ್ರಿಕಾ ತಂಡದ ಬ್ಯಾಟರ್​ಗಳಿಗೆ ಸಿಂಹಸ್ವಪ್ನರಾದರು.
ಬೆಂಗಳೂರಿನಲ್ಲಿ ನಡೆಯುವ ಕೊನೆಯ ಪಂದ್ಯ ರೋಚಕ ಫಲಿತಾಂಶ ನೀಡುತ್ತದೆ ಎಂದು ಕ್ರಿಕೆಟ್ ಪ್ರಿಯರು ನಿರೀಕ್ಷಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...