Thursday, December 18, 2025
Thursday, December 18, 2025

ಭಾರತವನ್ನ ಬಿಟ್ಟರೆ ನಮಗೆ ಒಂಟಿತನ ಕಾಡುತ್ತದೆ-ಬಿಲಾವಲ್ ಬುಟ್ಟೊ

Date:

ಪಾಕಿಸ್ತಾನ ಈಗಾಗಲೇ ಜಾಗತಿಕವಾಗಿ ಒಬ್ಬಂಟಿಯಾಗಿದೆ. ಹಾಗಾಗಿ ಭಾರತದೊಂದಿಗೆ ನಮ್ಮ ಸ್ನೇಹವನ್ನು ಮತ್ತೆ ಆರಂಭಿಸಬೇಕು ಎಂದು ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್‌ ಬುಟ್ಟೋ ಜರ್ಧಾರಿ ಅವರು ತಿಳಿಸಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು ಭಾರತದ ರಾಜಕೀಯ ನೀತಿಗಳು, ಮುಸ್ಲಿಂ ವಿರೋಧಿ ನಿಲುವುಗಳಿಂದ ನಮ್ಮ ಅವರ ಸಂಬಂಧ ಕಠಿಣವಾಗಿದೆ. ಕೆಲವು ವಿಚಾರಗಳಲ್ಲಿ ನಾವು ಅವರಿಗೆ ವಿರೋಧ ವ್ಯಕ್ತಪಡಿಸಿದ್ದೇವೆ. ಆದರೆ ಅವರ ಜೊತೆಗೆ ನಾವು ಮಾತನಾಡದಿದ್ದರೆ ನಮ್ಮ ಆಸಕ್ತಿಗಳನ್ನು ಅವರ ಜೊತೆಗೆ ಹೇಗೆ ಹಂಚಿಕೊಳ್ಳಲು ಸಾಧ್ಯ ಎಂದರು.

ನಾವು ಭಾರತದೊಂದಿಗೆ ಗಂಭೀರವಾದ ಸಮಸ್ಯೆಗಳನ್ನ ಹೊಂದಿದ್ದೇವೆ.
ಇತಿಹಾಸವನ್ನು ತೆಗೆದು ನೋಡಿದರೆ ಅವರ ಜೊತೆಗೆ ಯುದ್ದಗಳೂ ಆಗಿವೆ. ಆದರೆ ಅವರ ಜೊತೆಗೆ ಸಂಬಂಧವನ್ನ ಕಳೆದು ಕೊಳ್ಳಲು ಸಾಧ್ಯವಾಗುತ್ತಾ? ಒಬ್ಬ ವಿದೇಶಾಂಗ ಸಚಿವನಾಗಿ ನಾನು ಅಲ್ಲಿನ ಜನರ ಜೊತೆಗೆ ಮಾತನಾಡದೇ ಅಲ್ಲಿನ ಸರ್ಕಾರದ ಜೊತೆ ಮಾತನಾಡದೇ ನಮ್ಮ ಹಿತಾಸಕ್ತಿಗಳನ್ನು, ನಮ್ಮ ಉದ್ದೇಶಗಳನ್ನು ಹೇಗೆ ಹಂಚಿಕೊಳ್ಳಲು ಆಗುತ್ತದೆ ಎಂದು ಪ್ರಶ್ನಿಸಿದರು.

ಇದಲ್ಲದೇ ಭಾರತದೊಂದಿಗೆ ನಾವು ವ್ಯಾಪಾರ ಮಾಡಲು ಸಾಧ್ಯವಿಲ್ಲ ಎಂದು ಕೆಲವರು ಹೇಳುತ್ತಾರೆ. ನನಗೆ ಆ ರೀತಿಯ ವಿಮರ್ಶೆಗಳೇ ತಪ್ಪು ಎಂದೆನಿಸುತ್ತದೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Interact Club ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಭವಿಷ್ಯ ರೂಪಿಸುವಲ್ಲಿ ಪೋಷಕರ ಪಾತ್ರ ಬಹಳ ಮುಖ್ಯ – ರಮೇಶ್

ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಸುವಲ್ಲಿ ಇಂಟರಾಕ್ಟ್ ಕ್ಲಬ್ ಸಹಕಾರಿ ಎಂದು ಕ್ಷೇತ್ರ...

Veereshwar Punyashram Samskruth School ವೀರೇಶ್ವರ ಪುಣ್ಯಾಶ್ರಮದಲ್ಲಿ ಗಾಯಕ ನಿಜಗುಣಿ ಮಂಗಿ ಅವರ ಹಿಂದೂಸ್ತಾನಿ ಗಾಯನ

Veereshwar Punyashram Samskruth School ಸಾಗರ ರಸ್ತೆಯ ವೀರೇಶ್ವರ ಪುಣ್ಯಾಶ್ರಮ ಸಂಸ್ಕತ...

Rotary Shivamogga ರೇಬೀಸ್ ಮಾರಣಾಂತಿಕ‌ ಕಾಯಿಲೆಯಾಗುವ ಸಾಧ್ಯತೆ ಇದೆ, ನಿರ್ಲಕ್ಷ್ಯ ಬೇಡ- ಡಾ.ಅರವಿಂದ್

Rotary Shivamogga ರೇಬೀಸ್ ಮಾರಣಾಂತಿಕ ಕಾಯಿಲೆ ಆಗುವ ಸಾಧ್ಯತೆ ಇರುತ್ತದೆ. ಆದ್ದರಿಂದ...