Tuesday, March 24, 2026
Tuesday, March 24, 2026

ಭಾರತವನ್ನ ಬಿಟ್ಟರೆ ನಮಗೆ ಒಂಟಿತನ ಕಾಡುತ್ತದೆ-ಬಿಲಾವಲ್ ಬುಟ್ಟೊ

Date:

ಪಾಕಿಸ್ತಾನ ಈಗಾಗಲೇ ಜಾಗತಿಕವಾಗಿ ಒಬ್ಬಂಟಿಯಾಗಿದೆ. ಹಾಗಾಗಿ ಭಾರತದೊಂದಿಗೆ ನಮ್ಮ ಸ್ನೇಹವನ್ನು ಮತ್ತೆ ಆರಂಭಿಸಬೇಕು ಎಂದು ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್‌ ಬುಟ್ಟೋ ಜರ್ಧಾರಿ ಅವರು ತಿಳಿಸಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು ಭಾರತದ ರಾಜಕೀಯ ನೀತಿಗಳು, ಮುಸ್ಲಿಂ ವಿರೋಧಿ ನಿಲುವುಗಳಿಂದ ನಮ್ಮ ಅವರ ಸಂಬಂಧ ಕಠಿಣವಾಗಿದೆ. ಕೆಲವು ವಿಚಾರಗಳಲ್ಲಿ ನಾವು ಅವರಿಗೆ ವಿರೋಧ ವ್ಯಕ್ತಪಡಿಸಿದ್ದೇವೆ. ಆದರೆ ಅವರ ಜೊತೆಗೆ ನಾವು ಮಾತನಾಡದಿದ್ದರೆ ನಮ್ಮ ಆಸಕ್ತಿಗಳನ್ನು ಅವರ ಜೊತೆಗೆ ಹೇಗೆ ಹಂಚಿಕೊಳ್ಳಲು ಸಾಧ್ಯ ಎಂದರು.

ನಾವು ಭಾರತದೊಂದಿಗೆ ಗಂಭೀರವಾದ ಸಮಸ್ಯೆಗಳನ್ನ ಹೊಂದಿದ್ದೇವೆ.
ಇತಿಹಾಸವನ್ನು ತೆಗೆದು ನೋಡಿದರೆ ಅವರ ಜೊತೆಗೆ ಯುದ್ದಗಳೂ ಆಗಿವೆ. ಆದರೆ ಅವರ ಜೊತೆಗೆ ಸಂಬಂಧವನ್ನ ಕಳೆದು ಕೊಳ್ಳಲು ಸಾಧ್ಯವಾಗುತ್ತಾ? ಒಬ್ಬ ವಿದೇಶಾಂಗ ಸಚಿವನಾಗಿ ನಾನು ಅಲ್ಲಿನ ಜನರ ಜೊತೆಗೆ ಮಾತನಾಡದೇ ಅಲ್ಲಿನ ಸರ್ಕಾರದ ಜೊತೆ ಮಾತನಾಡದೇ ನಮ್ಮ ಹಿತಾಸಕ್ತಿಗಳನ್ನು, ನಮ್ಮ ಉದ್ದೇಶಗಳನ್ನು ಹೇಗೆ ಹಂಚಿಕೊಳ್ಳಲು ಆಗುತ್ತದೆ ಎಂದು ಪ್ರಶ್ನಿಸಿದರು.

ಇದಲ್ಲದೇ ಭಾರತದೊಂದಿಗೆ ನಾವು ವ್ಯಾಪಾರ ಮಾಡಲು ಸಾಧ್ಯವಿಲ್ಲ ಎಂದು ಕೆಲವರು ಹೇಳುತ್ತಾರೆ. ನನಗೆ ಆ ರೀತಿಯ ವಿಮರ್ಶೆಗಳೇ ತಪ್ಪು ಎಂದೆನಿಸುತ್ತದೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

N. Chaluvaraya Swamy ಎಲ್ಲಾ ಹುದ್ದೆಗಳ ನೇಮಕಾತಿ ಕೆಇಎ ಮೂಲಕ ನಡೆಸಲು ಸರ್ಕಾರದ ನಿರ್ಧಾರ- ಸಚಿವ ಎನ್.ಚಲುವರಾಯ ಸ್ವಾಮಿ

N. Chaluvaraya Swamy ನಮ್ಮ ರಾಜ್ಯದ ಸಾವಿರಾರು ನಿರುದ್ಯೋಗಿ ಯುವಜನತೆಯ ಹಾಗೂ...

University of Agricultural 2047 ರ ಹೊತ್ತಿಗೆ ನಮ್ಮ ದೇಶ ಆಹಾರ ವ್ಯವಸ್ಥೆಯಲ್ಲಿ ಜಾಗತಿಕ ಶಕ್ತಿಯಾಗಿ ಹೊಮ್ಮಲಿದೆ- ಡಾ.ಎಸ್.ಕೆ.ಮಲ್ಹೋತ್ರಾ

University of Agricultural ಅತ್ಯುತ್ತಮ ಪರಿಸರ ಸೇವೆ ನೀಡುತ್ತಿರುವ ಅಲಂಕಾರಿಕ ತೋಟಗಾರಿಕೆ...

CM Siddaramaiah ಮೌಢ್ಯತೆ ವಿರುದ್ಧ ಸಿಡಿದೆದ್ದುಸಮಸಮಾಜದ ಕನಸು ಬಿತ್ತಿದ ಶರಣ ದೇವರ ದಾಸಿಂಯ್ಯ- ಸಿದ್ಧರಾಮಯ್ಯ

CM Siddaramaiah ಮೌಢ್ಯ, ಕಂದಾಚಾರಗಳ‌ ಹೆಸರಿನಲ್ಲಿ ತಳ ಸಮುದಾಯಗಳ ಜನರನ್ನು...