ರಾಷ್ಟ್ರಪತಿ ಚುನಾವಣೆಯಲ್ಲಿ ವಿಪಕ್ಷಗಳ ಅಭ್ಯರ್ಥಿಯಾಗಿ ಸ್ಪರ್ಧಿಸಲು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ನಿರಾಕರಿಸಿದ ಬೆನ್ನಲ್ಲೇ ಇದೀಗ, ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಕೂಡ ಸ್ಪರ್ಧೆಗಿಳಿಯುವುದಿಲ್ಲ ಎಂದಿದ್ದಾರೆ ಎಂದು ತಿಳಿದುಬಂದಿದೆ.
ಎಲ್ಲರೂ ನನ್ನ ಮೇಲಿಟ್ಟಿರುವ ಪ್ರೀತಿಗೆ ನಾನು ಆಭಾರಿ. ಆದರೆ ನಾನು ಸಕ್ರಿಯ ರಾಜಕೀಯದಲ್ಲಿರಲು ಬಯಸುತ್ತೇನೆ. ನಮ್ಮ ಕೇಂದ್ರಾಡಳಿತ ಪ್ರದೇಶವನ್ನು ಸೂಕ್ತ ಮಾರ್ಗದರ್ಶನದಲ್ಲಿ ನಡೆಸಲು ಬಯಸುತ್ತೇನೆ ಎಂದು ಅವರು ಹೇಳಿದ್ದಾರೆ.
ವಿಪಕ್ಷಗಳ ಅನೇಕ ನಾಯಕರು ನನಗೆ ಕರೆ ಮಾಡಿ ರಾಷ್ಟ್ರಪತಿ ಚುನಾವಣೆಯ ಅಭ್ಯರ್ಥಿಯಾಗಲು ಕೇಳಿದ್ದಾರೆ ಎಂದಿದ್ದಾರೆ.