Monday, August 24, 2026
Monday, August 24, 2026

ಕಾಂಗ್ರೆಸ್ ಗೆ ಕಾಯಕಲ್ಪ ನೀಡಲುಹಿರಿಯ ಕಾಗೋಡು ತಿಮ್ಮಪ್ಪ ಕರೆ

Date:

ಕಾಂಗ್ರೆಸ್ ಅನೇಕ ವರ್ಷಗಳ ಕಾಲ ಆಡಳಿತ ನಡೆಸಿದ ಪರಿಣಾಮ ಕಾರ್ಯಕರ್ತರಲ್ಲಿ ಬೇಜವಾಬ್ದಾರಿತನ ಬಂದಿದೆ.‌
ಇದರಿಂದ ಪಕ್ಷವನ್ನು ಈಗ ಬೂತ್ ಮಟ್ಟದಿಂದ ಕಟ್ಟಬೇಕಿದೆ. ಪ್ರಮುಖ ಕಾರ್ಯಕರ್ತರಿಗೆ ತಿಳಿವಳಿಕೆ ಮತ್ತು ಜಾಗೃತಿ ನೀಡುವ ಉದ್ದೇಶದಿಂದ ಶಿಬಿರ ನಡೆಸಲಾಗುತ್ತಿದೆ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷ ದುರ್ಬಲವಾಗುತ್ತಿದೆ. ಇದರಿಂದ ಪಕ್ಷವನ್ನು ಸದೃಢಗೊಳಿಸಲು ನವ ಸಂಕಲ್ಪ ಚಿಂತನಾ ಶಿಬಿರವನ್ನು ನಡೆಸಲಾಗುತ್ತಿದೆ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ತಿಳಿಸಿದ್ದಾರೆ.

ಸಾಗರದಲ್ಲಿ ನಡೆದ ಜಿಲ್ಲಾಮಟ್ಟದ ನವ ಸಂಕಲ್ಪ ಚಿಂತನಾ ಶಿಬಿರದಲ್ಲಿ‌ ಭಾಗಿಯಾಗಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವನ್ನು ತೀರ ಕೆಳಮಟ್ಟದಿಂದ ಸಂಘಟಿಸುವ ಅವಶ್ಯಕತೆ ಇದೆ.‌ ಕಾಂಗ್ರೆಸ್ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ಪಕ್ಷವಾಗಿದೆ. ಸ್ವಾತಂತ್ರ್ಯದ ಬಳಿಕ ದೇಶವನ್ನು ಸದೃಢವಾಗಿ ಕಟ್ಟಿದೆ. ಆದರೆ, ಇತ್ತೀಚೆಗೆ ಪಕ್ಷ ದುರ್ಬಲವಾಗುತ್ತಿದೆ ಎಂದರು.

ಈ ಬಗ್ಗೆ ಕಾರ್ಯಕರ್ತರಲ್ಲಿ ಚಿಂತನೆಯನ್ನುಂಟು ಮಾಡಬೇಕಿದೆ.‌ ಕಾಂಗ್ರೆಸ್ ಬಹಳ ವರ್ಷಗಳ ಕಾಲ ಆಡಳಿತ ನಡೆಸಿದ ಪರಿಣಾಮ ಕಾರ್ಯಕರ್ತರಲ್ಲಿ ಬೇಜವಾಬ್ದಾರಿತನ ಬಂದಿದೆ.‌ ಇದರಿಂದ ಪಕ್ಷವನ್ನು ಈಗ ಬೂತ್ ಮಟ್ಟದಿಂದ ಕಟ್ಟಬೇಕಿದೆ. ಪ್ರಮುಖ ಕಾರ್ಯಕರ್ತರಿಗೆ ತಿಳಿವಳಿಕೆ ಮತ್ತು ಜಾಗೃತಿ ನೀಡುವ ಉದ್ದೇಶದಿಂದ ಶಿಬಿರ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ, ಮಾತನಾಡಿದ ಮಾಜಿ ಶಾಸಕ ಮಧು ಬಂಗಾರಪ್ಪ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಥಳೀಯವಾಗಿ ಪ್ರಣಾಳಿಕೆಯನ್ನು ತಯಾರು ಮಾಡುತ್ತಿದೆ. ರಾಜ್ಯದ ಪ್ರಣಾಳಿಕೆ ಬೇರೆ ಆಗಿರುತ್ತದೆ. ಸ್ಥಳೀಯ ಸಮಸ್ಯೆಗಳನ್ನು ಒಳಗೊಂಡ ಪ್ರಣಾಳಿಕೆ ಇದಾಗಿರುತ್ತದೆ. ಮಲೆನಾಡಿನಲ್ಲಿ ಭೂಹಕ್ಕು, ಅರಣ್ಯ ಸಮಿತಿ ಬಗರ್ ಹುಕುಂ ಸಮಸ್ಯೆಯನ್ನು ಪ್ರಣಾಳಿಕೆಯಲ್ಲಿ‌ ಸೇರ್ಪಡೆ‌ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...