Wednesday, March 25, 2026
Wednesday, March 25, 2026

ಮಾನಸಿಕ ಸ್ವಾಸ್ಥ್ಯಕ್ಕೆ ಯೋಗ ಸಹಕಾರಿ- ವೈಶಾಲಿ

Date:

ಪ್ರತಿಯೊಬ್ಬರ ಶರೀರ ಹಾಗೂ ಮಾನಸಿಕ ಸ್ವಾಸ್ತ್ಯ ಕಾಪಾಡಿಕೊಳ್ಳಲು ಪ್ರತಿ ನಿತ್ಯ ಯೋಗ ಅಭ್ಯಾಸ ರೂಢಿಸಿಕೊಳುವುದು ಅವಶ್ಯಕ ಎಂದು ಶಿವಮೊಗ್ಗ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಶ್ರೀಮತಿ ಎಂ.ವಿ.ವೈಶಾಲಿ ತಿಳಿಸಿದ್ದಾರೆ.

ಶಿವಮೊಗ್ಗದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಕುವೆಂಪು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಗಳು 8ನೇ ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಆಯೋಜಿಸಿದ್ದ ಒಂದು ದಿನದ ವಿಶ್ವವಿದ್ಯಾಲಯ ಮಟ್ಟದ ಯೋಗ ಕಾರ್ಯಾಗಾರ ಉದ್ಘಾಟಿಸಿ ಮಾತನಾಡುತ್ತಿದ್ದರು.

ಇಂದಿನ ಯುವ ಜನತೆ ಆಧುನಿಕ ತಂತ್ರಜ್ಞಾನ, ಸಾಮಾಜಿಕ ಜಾಲ ತಾಣಗಳಲ್ಲಿ ಹೆಚ್ಚನ ಸಮಯ ಕಳೆಯುತ್ತಿದ್ದಾರೆ. ಆ ಕಾರಣಕ್ಕೆ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮಗಳಾಗುತ್ತಿರುವುದನ್ನು ಕಾಣುತ್ತಿದ್ದೇವೆ. ಇದು ಅವರ ಭವಿಶ್ಯದ ಮೇಲೆ ದೀರ್ಘಾವಧಿ ಪರಿಣಾಮ ಬೀರುತ್ತದೆ. 20ರಿಂದ 30ರ ವಯಸ್ಸಿನ ಅವಧಿ ಅತ್ಯಂತ ಪ್ರಮುಖವಾದದ್ದು. ಅನಾರೋಗ್ಯ ಬರದಂತೆ ನೋಡಿಕೊಳ್ಳಲು, ಅದರಿಂದ ಪಾರಾಗಲು ಯೋಗಾಭ್ಯಾಸ ಅನಿಯಾರ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಶಿವಗಂಗಾ ಯೋಗ ಕೇಂದ್ರದ ಯೋಗ ಗುರುಗಳಾದ ರುದ್ರಾರಾಧ್ಯ ಮಾತನಾಡಿ ಯುವಕರು ಹೊರಗಿನ ಪ್ರಪಂಚಕ್ಕೆ ಮಾರುಹೋಗದೇ ತಮ್ಮ ಒಳ ಮನಸ್ಸಿನ ಪರಿಶುದ್ಧತೆಗೆ ಗಮನ ನೀಡಬೇಕು. ಉತ್ತಮ ಜೀವನ ಶೈಲಿಯತ್ತ ತಮ್ಮ ಚಿತ್ತ ಹರಿಸಬೇಕು. ಅದಕ್ಕೆ ಯೋಗಾಭ್ಯಾಸವೊಂದೇ ದಾರಿ ಎಂದು ಕಿವಿ ಮಾತು ಹೇಳಿದ್ದಾರೆ.

ಪರಿಸರ ನಾಗರಾಜ್, ಜಿಲ್ಲಾ ವಾಣಿಜ್ಯೋದ್ಯಮ ಸಂಘದ ಸಹ ಕಾರ್ಯದರ್ಶಿ ಜಿ.ವಿಜಯಕುಮಾರ, ಡಿವಿಎಸ್ ಕಾಲೇಜಿನ ಡಾ.ಕೆ.ಜಿ.ವೆಂಕಟೇಶ, ಯುವ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥಸ್ವಾಮಿ ಎಂ.ಟಿ. ಎಪಿಎಂಸಿ ಮಾಜಿ ಅಧ್ಯಕ್ಷರಾದ ಎಸ್.ಎಸ್.ಜ್ಯೋತಿಪ್ರಕಾಶ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಬಿಜೆಪಿ ಒಡ್ಡುವ ಆಸೆ ಆಮಿಷಗಳಿಗೆ ಒಳಗಾಗಬೇಡಿ- ಸಿದ್ಧರಾಮಯ್ಯ

CM Siddharamaih ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ...

National Horticulture Mission Scheme ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ. ಜಾ./ ಪ. ಪಂ. ರೈತರಿಂದ ಅರ್ಜಿ ಅಹ್ವಾನ

National Horticulture Mission Scheme 2025-26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್...

S.N. Channabasappa ಮತಪತ್ರ ಪದ್ಧತಿ ಜಾರಿಗೆ ತರುತ್ತಿರುವ ಸರ್ಕಾರದ ನಿರ್ಧಾರಕ್ಕೆ ಸದನದಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ ತೀವ್ರ ವಿರೋಧ

S.N. Channabasappa ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಮತ್ತಷ್ಟು ಡಿಜಿಟಲೀಕರಣಗೊಳಿಸುವ...

MESCOM ಸಾಗರ : ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...