Tuesday, August 25, 2026
Tuesday, August 25, 2026

ಮಾನಸಿಕ ಸ್ವಾಸ್ಥ್ಯಕ್ಕೆ ಯೋಗ ಸಹಕಾರಿ- ವೈಶಾಲಿ

Date:

ಪ್ರತಿಯೊಬ್ಬರ ಶರೀರ ಹಾಗೂ ಮಾನಸಿಕ ಸ್ವಾಸ್ತ್ಯ ಕಾಪಾಡಿಕೊಳ್ಳಲು ಪ್ರತಿ ನಿತ್ಯ ಯೋಗ ಅಭ್ಯಾಸ ರೂಢಿಸಿಕೊಳುವುದು ಅವಶ್ಯಕ ಎಂದು ಶಿವಮೊಗ್ಗ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಶ್ರೀಮತಿ ಎಂ.ವಿ.ವೈಶಾಲಿ ತಿಳಿಸಿದ್ದಾರೆ.

ಶಿವಮೊಗ್ಗದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಕುವೆಂಪು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಗಳು 8ನೇ ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಆಯೋಜಿಸಿದ್ದ ಒಂದು ದಿನದ ವಿಶ್ವವಿದ್ಯಾಲಯ ಮಟ್ಟದ ಯೋಗ ಕಾರ್ಯಾಗಾರ ಉದ್ಘಾಟಿಸಿ ಮಾತನಾಡುತ್ತಿದ್ದರು.

ಇಂದಿನ ಯುವ ಜನತೆ ಆಧುನಿಕ ತಂತ್ರಜ್ಞಾನ, ಸಾಮಾಜಿಕ ಜಾಲ ತಾಣಗಳಲ್ಲಿ ಹೆಚ್ಚನ ಸಮಯ ಕಳೆಯುತ್ತಿದ್ದಾರೆ. ಆ ಕಾರಣಕ್ಕೆ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮಗಳಾಗುತ್ತಿರುವುದನ್ನು ಕಾಣುತ್ತಿದ್ದೇವೆ. ಇದು ಅವರ ಭವಿಶ್ಯದ ಮೇಲೆ ದೀರ್ಘಾವಧಿ ಪರಿಣಾಮ ಬೀರುತ್ತದೆ. 20ರಿಂದ 30ರ ವಯಸ್ಸಿನ ಅವಧಿ ಅತ್ಯಂತ ಪ್ರಮುಖವಾದದ್ದು. ಅನಾರೋಗ್ಯ ಬರದಂತೆ ನೋಡಿಕೊಳ್ಳಲು, ಅದರಿಂದ ಪಾರಾಗಲು ಯೋಗಾಭ್ಯಾಸ ಅನಿಯಾರ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಶಿವಗಂಗಾ ಯೋಗ ಕೇಂದ್ರದ ಯೋಗ ಗುರುಗಳಾದ ರುದ್ರಾರಾಧ್ಯ ಮಾತನಾಡಿ ಯುವಕರು ಹೊರಗಿನ ಪ್ರಪಂಚಕ್ಕೆ ಮಾರುಹೋಗದೇ ತಮ್ಮ ಒಳ ಮನಸ್ಸಿನ ಪರಿಶುದ್ಧತೆಗೆ ಗಮನ ನೀಡಬೇಕು. ಉತ್ತಮ ಜೀವನ ಶೈಲಿಯತ್ತ ತಮ್ಮ ಚಿತ್ತ ಹರಿಸಬೇಕು. ಅದಕ್ಕೆ ಯೋಗಾಭ್ಯಾಸವೊಂದೇ ದಾರಿ ಎಂದು ಕಿವಿ ಮಾತು ಹೇಳಿದ್ದಾರೆ.

ಪರಿಸರ ನಾಗರಾಜ್, ಜಿಲ್ಲಾ ವಾಣಿಜ್ಯೋದ್ಯಮ ಸಂಘದ ಸಹ ಕಾರ್ಯದರ್ಶಿ ಜಿ.ವಿಜಯಕುಮಾರ, ಡಿವಿಎಸ್ ಕಾಲೇಜಿನ ಡಾ.ಕೆ.ಜಿ.ವೆಂಕಟೇಶ, ಯುವ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥಸ್ವಾಮಿ ಎಂ.ಟಿ. ಎಪಿಎಂಸಿ ಮಾಜಿ ಅಧ್ಯಕ್ಷರಾದ ಎಸ್.ಎಸ್.ಜ್ಯೋತಿಪ್ರಕಾಶ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...