Wednesday, December 17, 2025
Wednesday, December 17, 2025

ಮಣ್ಣು ಉಳಿಸಿ ಕಾರ್ಯಕ್ಕೆ ಎಲ್ಲರೂ ಕೈಜೋಡಿಸಿ- ಯಡಿಯೂರಪ್ಪ

Date:

ಇಶಾ ಫೌಂಡೇಶನ್ ವತಿಯಿಂದ ಬೆಂಗಳೂರಿನ ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಮಣ್ಣು ಉಳಿಸಿ ಅಭಿಯಾನದ ಬೃಹತ್ ಸಮಾರಂಭ ಆಯೋಜಿಸಲಾಗಿತ್ತು.

ಈ ಕಾರ್ಯಕ್ರಮದ ವೇಳೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಸದ್ಗುರು ಜಗ್ಗಿ ವಾಸುದೇವ್ ಅವರ ನಡುವಿನ ಬಾಂಧವ್ಯ ನೆರೆದಿದ್ದವರ ಗಮನ ಸೆಳೆಯಿತು.

ಕಾರ್ಯಕ್ರಮದ ವೇದಿಕೆಯಲ್ಲಿ ಜಗ್ಗಿ ವಾಸುದೇವ್ ಅವರ ಕಾಲು ಮುಟ್ಟಿ ಯಡಿಯೂರಪ್ಪ ನಮಸ್ಕರಿಸಿದ್ದಾರೆ. ಅನಂತರ, ಯಡಿಯೂರಪ್ಪ ಭಾಷಣ ಮಾಡಲು ತೆರಳುವ ಸಂದರ್ಭದಲ್ಲಿಯೂ ಸದ್ಗುರು ಕಾಲಿಗೆ ನಮಸ್ಕರಿಸಿದ್ದಾರೆ.

ವೇದಿಕೆಯನ್ನು ಉದ್ದೇಶಿಸಿ ಮಾತನಾಡಿದ ಬಿ.ಎಸ್.ಯಡಿಯೂರಪ್ಪ ಅವರು, ಈ ಶತಮಾನದಲ್ಲಿ ನಾವು ಕಳವಳಕಾರಿ ಸನ್ನಿವೇಶದಲ್ಲಿ ಬದುಕುತ್ತಿದ್ದೇವೆ. ಪ್ರಪಂಚದಾದ್ಯಂತ ಪ್ರವಾಹ, ಅತಿವೃಷ್ಟಿ, ಪರಿಸರ ಅಸಮತೋಲನ ಹೆಚ್ಚಾಗುತ್ತಿದೆ. ನಾಗರಿಕತೆ ಹೆಚ್ಚಾಗುತ್ತಿದೆ. ಉಸಿರಾಟಕ್ಕೆ ಶುದ್ಧ ಗಾಳಿ, ನೀರೂ ಸಿಕ್ಕಿಲ್ಲ. ಗಾಳಿ, ನೀರಿಗೆ ಪರಿತಪಿಸುವ ಸನ್ನಿವೇಶ ಇದೆ ಎಂದು ವಿಷಾದಿಸಿದ್ದಾರೆ.

ಈ ಹಿಂದೆ ರಾಜರು ಸಾಮ್ರಾಜ್ಯಗಳಿಗಾಗಿ ಹೋರಾಡಿದ್ದರು. ಪೆಟ್ರೋಲ್, ಡೀಸೆಲ್, ನೀರಿಗಾಗಿ ಹೋರಾಟ ನಡೆಯುತ್ತಿದೆ.

ಈ ಸಂದರ್ಭದಲ್ಲಿ ಸದ್ಗುರು ಅವರ ಮಣ್ಣು ಉಳಿಸಿ ಅಭಿಯಾನದ ಅವಶ್ಯಕತೆ ಇದೆ. ಈ ಅಭಿಯಾನ ಸಮಯೋಚಿತವಾಗಿದೆ. ಇದಕ್ಕೆ ಎಲ್ಲರೂ ಕೈ ಜೋಡಿಸಿ ಮಣ್ಣು ಉಳಿಸುವ ಕಾರ್ಯದಲ್ಲಿ ಭಾಗಿಯಾಗಬೇಕು ಎಂದು ಮನವಿ ಮಾಡಿದ್ದಾರೆ.

ಭಾಷಣದ ಮಧ್ಯೆ ಯಡಿಯೂರಪ್ಪಗೆ ಕೆಮ್ಮು ಬಂದಾಗ ಸದ್ಗುರು ನೀರು ತಂದುಕೊಟ್ಟರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...

Karnataka Information Commission ಡಿಸೆಂಬರ್ 20. ರಾಜ್ಯ ಮಾಹಿತಿ ಆಯುಕ್ತರ ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಹಿತಿ

Karnataka Information Commission ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ...

B.Y. Raghavendra ವೈಯಕ್ತಿಕವಾಗಿ ಕುಟುಂಬದ ಹಿರಿಯರನ್ನ ಕಳೆದುಕೊಂಡಂತಾಗಿದೆ, ಶಾಮನೂರು ನಿಧನಕ್ಕೆ ಬಿ.ವೈ.ರಾಘವೇಂದ್ರ ಕಂಬನಿ

B.Y. Raghavendra ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ...