Friday, March 20, 2026
Friday, March 20, 2026

ಕಾಶ್ಮೀರ ಈಗ ಎಲ್ಲರಿಗೂ ಬಾಗಿಲು ತೆರೆದಿದೆ :ಅಮಿತ್ ಶಾ

Date:

ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆಯನ್ನು ಸಂಪೂರ್ಣವಾಗಿ ಅಳಿಸಿ ಶಾಂತಿಭಂಗ ವನ್ನು ಕೊನೆಗಾಣಿಸುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೇಳಿದರು.
ಜಮ್ಮುವಿನಲ್ಲಿರುವ ಗುರುದ್ವಾರ ಡಿಗಿಯಾನಾದ ಆಶ್ರಮಕ್ಕೆ ಭೇಟಿ ನೀಡಿದ ಅಮಿತ್ ಶಾ ಅವರು, ಈ ಕೇಂದ್ರಾಡಳಿತ ಪ್ರದೇಶವು ಪ್ರಧಾನಿ ನರೇಂದ್ರ ಮೋದಿಯವರ ಹೃದಯದಲ್ಲಿ ಜಾಗ ಪಡೆದಿದೆ. ಇದರ ಶಾಂತಿ ಮತ್ತು ಅಭಿವೃದ್ಧಿಗೆ ಧಕ್ಕೆ ಉಂಟು ಮಾಡಲು ಯಾರಿಗೂ ಅವಕಾಶ ನೀಡುವುದಿಲ್ಲ ಎಂದರು.
70 ವರ್ಷದ ಬಳಿಕ ಜಮ್ಮು-ಕಾಶ್ಮೀರದಲ್ಲಿ ತಳಮಟ್ಟದ ಪ್ರಜಾಪ್ರಭುತ್ವ ಸ್ಥಾಪನೆಯ ಗೌರವವು ಬಿಜೆಪಿಗೆ ಸಲ್ಲಬೇಕು. ಈಗ ಯಾರು ಬೇಕಿದ್ದರೂ ಜಮ್ಮು-ಕಾಶ್ಮೀರದ ಮುಖ್ಯಮಂತ್ರಿಯಾಗಬಹುದು, ಸಚಿವರಾಗಬಹುದು. ಪಂಡಿತ ಸಮುದಾಯವನ್ನು ಮತ ಬ್ಯಾಂಕ್ ಆಗಿ ಮಾತ್ರ ನೋಡಲಾಗಿತ್ತು. ಈಗ ಅವರಿಗೂ ಪ್ರಾತಿನಿಧ್ಯವಿದೆ. ಅವರ ಪ್ರತಿನಿಧಿಗೂ ಮುಖ್ಯಮಂತ್ರಿ ಆಗುವ ಅವಕಾಶವೂ ಇದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಐಐಟಿ ಜಮ್ಮುವಿನ ಹೊಸ ಕ್ಯಾಂಪಸ್ ಅನ್ನು ಅಮಿತ್ ಶಾ ಅವರು ಉದ್ಘಾಟಿಸಿದರು. ಎರಡು 210 ರೂ. ಕೋಟಿ ವೆಚ್ಚದಲ್ಲಿ ಈ ಕ್ಯಾಂಪಸ್ ನಿರ್ಮಿಸಲಾಗಿದೆ. ಉನ್ನತ ಶಿಕ್ಷಣ ಕೇಂದ್ರದ ಜೊತೆಗೆ ಹಾಸ್ಟೆಲ್, ಜಿಮ್ ಹಾಗೂ ಮತ್ತಿತರ ಸೌಲಭ್ಯಗಳನ್ನು ಕ್ಯಾಂಪಸ್ ನಲ್ಲಿ ಅಭಿವೃದ್ಧಿಪಡಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga News ಶಿವಮೊಗ್ಗದಿಂದ ದಂಪತಿ ನಾಪತ್ತೆ. ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆ ಪ್ರಕಟಣೆಮ

Shivamogga News ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಭಾರತಿ ಕಾಲೋನಿ 2ನೇ...

Shivamogga News ಪಂಚಾಂಗ ಶ್ರವಣವು ಪುಣ್ಯಪ್ರದ. ಕೆಟ್ಟಸ್ವಪ್ನವನ್ನು ದೂರಮಾಡುತ್ತದೆ- “ಕಗ್ಗ” ಜಿ.ಎಸ್.ನಟೇಶ್.

Shivamogga News ಪಂಚಾಂಗ ಶ್ರವಣದಿಂದ ಪುಣ್ಯ ಪ್ರಾಪ್ತಿ ಆಗುತ್ತದೆ. ನಮ್ಮ ಎಲ್ಲಾ...

Rangayana, Shivamogga ಚಿಣ್ಣರ ಸಿಹಿಮೊಗೆ ಬೇಸಿಗೆ ಶಿಬಿರದಲ್ಲಿ ನಾಟಕ ನಿರ್ದೇಶಕ ಮತ್ತು ಜನಸಹಾಯಕ ನಿರ್ದೇಶಕರ ಆಯ್ಕೆ ಪ್ರಕ್ರಿಯೆಗೆ ಅರ್ಜಿಗಳ ಆಹ್ವಾನ.

Rangayana ಶಿವಮೊಗ್ಗ ರಂಗಾಯಣವು ಏ.14 ರಿಂದ ಮೇ.03ರವರೆಗೆ ಆಯೋಜಿಸುತ್ತಿರುವ ಚಿಣ್ಣರ ಸಿಹಿಮೊಗ್ಗೆ-ಮಕ್ಕಳ...