Thursday, December 18, 2025
Thursday, December 18, 2025

ಕಾಶ್ಮೀರ ಈಗ ಎಲ್ಲರಿಗೂ ಬಾಗಿಲು ತೆರೆದಿದೆ :ಅಮಿತ್ ಶಾ

Date:

ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆಯನ್ನು ಸಂಪೂರ್ಣವಾಗಿ ಅಳಿಸಿ ಶಾಂತಿಭಂಗ ವನ್ನು ಕೊನೆಗಾಣಿಸುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೇಳಿದರು.
ಜಮ್ಮುವಿನಲ್ಲಿರುವ ಗುರುದ್ವಾರ ಡಿಗಿಯಾನಾದ ಆಶ್ರಮಕ್ಕೆ ಭೇಟಿ ನೀಡಿದ ಅಮಿತ್ ಶಾ ಅವರು, ಈ ಕೇಂದ್ರಾಡಳಿತ ಪ್ರದೇಶವು ಪ್ರಧಾನಿ ನರೇಂದ್ರ ಮೋದಿಯವರ ಹೃದಯದಲ್ಲಿ ಜಾಗ ಪಡೆದಿದೆ. ಇದರ ಶಾಂತಿ ಮತ್ತು ಅಭಿವೃದ್ಧಿಗೆ ಧಕ್ಕೆ ಉಂಟು ಮಾಡಲು ಯಾರಿಗೂ ಅವಕಾಶ ನೀಡುವುದಿಲ್ಲ ಎಂದರು.
70 ವರ್ಷದ ಬಳಿಕ ಜಮ್ಮು-ಕಾಶ್ಮೀರದಲ್ಲಿ ತಳಮಟ್ಟದ ಪ್ರಜಾಪ್ರಭುತ್ವ ಸ್ಥಾಪನೆಯ ಗೌರವವು ಬಿಜೆಪಿಗೆ ಸಲ್ಲಬೇಕು. ಈಗ ಯಾರು ಬೇಕಿದ್ದರೂ ಜಮ್ಮು-ಕಾಶ್ಮೀರದ ಮುಖ್ಯಮಂತ್ರಿಯಾಗಬಹುದು, ಸಚಿವರಾಗಬಹುದು. ಪಂಡಿತ ಸಮುದಾಯವನ್ನು ಮತ ಬ್ಯಾಂಕ್ ಆಗಿ ಮಾತ್ರ ನೋಡಲಾಗಿತ್ತು. ಈಗ ಅವರಿಗೂ ಪ್ರಾತಿನಿಧ್ಯವಿದೆ. ಅವರ ಪ್ರತಿನಿಧಿಗೂ ಮುಖ್ಯಮಂತ್ರಿ ಆಗುವ ಅವಕಾಶವೂ ಇದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಐಐಟಿ ಜಮ್ಮುವಿನ ಹೊಸ ಕ್ಯಾಂಪಸ್ ಅನ್ನು ಅಮಿತ್ ಶಾ ಅವರು ಉದ್ಘಾಟಿಸಿದರು. ಎರಡು 210 ರೂ. ಕೋಟಿ ವೆಚ್ಚದಲ್ಲಿ ಈ ಕ್ಯಾಂಪಸ್ ನಿರ್ಮಿಸಲಾಗಿದೆ. ಉನ್ನತ ಶಿಕ್ಷಣ ಕೇಂದ್ರದ ಜೊತೆಗೆ ಹಾಸ್ಟೆಲ್, ಜಿಮ್ ಹಾಗೂ ಮತ್ತಿತರ ಸೌಲಭ್ಯಗಳನ್ನು ಕ್ಯಾಂಪಸ್ ನಲ್ಲಿ ಅಭಿವೃದ್ಧಿಪಡಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Women and Child Development Department ಡಿಸೆಂಬರ್ 20. ಶಿವಮೊಗ್ಗದಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

Women and Child Development Department ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Madhu Bangappa ಯಾವುದೇ ಶಾಲೆ ಆದರೂ ಕನ್ನಡ ಕಲಿಸಬೇಕು ಅಂತ ಮುಚ್ಚಳಿಕೆ ಬರೆಸಿಕೊಳ್ಳುತ್ತೇವೆ- ಮಧು ಬಂಗಾರಪ್ಪ

Madhu Bangappa ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ...