Friday, June 26, 2026
Friday, June 26, 2026

ದಿ.ನವೀನ್ ಕುಟುಂಬಸ್ಥರನ್ನ ಭೇಟಿಮಾಡಿದ ಪ್ರಧಾನಿ ಮೋದೀಜಿ

Date:

ಕೊಮ್ಮಘಟ್ಟದಲ್ಲಿ ನಡೆದ ಸಾರ್ವಜನಿಕ ಸಮಾವೇಶದ ವೇದಿಕೆಯ ಹಿಂಭಾಗದಲ್ಲಿ ಉಕ್ರೇನ್ ನಲ್ಲಿ ಮೃತಪಟ್ಟ ಎಂಬಿಬಿಎಸ್ ವಿದ್ಯಾರ್ಥಿ ನವೀನ್ ಗ್ಯಾನ ಗೌಡರ್ ಕುಟುಂಬ ಸದಸ್ಯರನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ನವೀನ್ ತಂದೆ ಶೇಖರ ಗೌಡ, ತಾಯಿ, ಸಹೋದರ ಪ್ರಧಾನಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ವೇಳೆ ಹಾಜರಿದ್ದರು.

ಖಾರ್ಕಿವ್ ನಲ್ಲಿ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ನವೀನ್ , ಮಾರ್ಚ್ 1 ರಂದು ಬೆಳಗ್ಗೆ ತಿಂಡಿ ತರಲೆಂದು ಹೊರಗೆ ಬಂದಿದ್ದ ವೇಳೆ ರಷ್ಯಾ ಪಡೆಗಳ ಶೆಲ್ ದಾಳಿಗೆ ಸಿಲುಕಿ ಮೃತಪಟ್ಟಿದ್ದ. 20 ದಿನಗಳ ನಂತರ ಕೇಂದ್ರ ಸರಕಾರ ಶತ ಪ್ರಯತ್ನಗಳನ್ನು ಮಾಡಿ ಮೃತ ದೇಹವನ್ನು ತಾಯ್ನಾಡಿಗೆ ತರಲಾಗಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರೈತರು ಬರಗಾಲ ಎದುರಿಸಲು ಅಧಿಕಾರಿಗಳು ನೆರವಾಗಿ: ಬಿ.ವೈ.ರಾಘವೇಂದ್ರ

B.Y. Raghavendra ಕಳೆದ ಏಪ್ರಿಲ್, ಮೇ ಮಾಹೆಯಲ್ಲಿ ಜಿಲ್ಲೆಯ ಆಯ್ದ ಸ್ಥಳಗಳಲ್ಲಿ...

ವ್ಯಕ್ತಿ ನಾಪತ್ತೆಯಾಗಿ 26ವರ್ಷದ ನಂತರ ಠಾಣೆಯಲ್ಲಿ ದಾಖಲೆಯಾದ ಪ್ರಕರಣದ ಮಾಹಿತಿ

ಮಾಳೂರು ಪೊಲೀಸ್ ಠಾಣೆಯಲ್ಲಿ ತಡವಾಗಿ ದಾಖಲಾದ ದೂರಿನ್ವಯ 26 ವರ್ಷಗಳ ಹಿಂದೆ...

Department of Social Welfare ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ‌ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯಿಂದ 2026-27 ನೇ ಸಾಲಿನಲ್ಲಿ ಭಾರತ ಸರ್ಕಾರದ ಪರಿಶಿಷ್ಟ...