Friday, August 14, 2026
Friday, August 14, 2026

ನೂಪುರ್ ಶರ್ಮ ಹೇಳಿಕೆ ವಿವಾದ: ಬಂಗಾಳ ವಿಧಾನ ಸಭೆ ಖಂಡನಾ ನಿರ್ಣಯ

Date:

ಪ್ರವಾದಿ ಮೊಹಮ್ಮದ್ ಪೈಗಂಬರ್‌ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿಯ ಮಾಜಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ಹೇಳಿಕೆಯನ್ನು ಖಂಡಿಸುವ ನಿರ್ಣಯವನ್ನು ಬಂಗಾಳ ವಿಧಾನಸಭೆ ಅಂಗೀಕರಿಸಿತು. ರಾಜ್ಯ ಸರ್ಕಾರ ನಿರ್ಣಯವನ್ನು ಅಂಗೀಕರಿಸಿದಾಗ ಬಿಜೆಪಿ ನಾಯಕರು ವಾಕ್ಸಮರ ನಡೆಸಿದರು.

ರಾಜ್ಯ ವಿಧಾನಸಭೆಯನ್ನು ಉದ್ದೇಶಿಸಿ ಮಾತನಾಡಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, “ಬಿಜೆಪಿ ಪ್ರಚೋದನೆ ಮತ್ತು ದ್ವೇಷದ ರಾಜಕೀಯವನ್ನು ಮಾಡುತ್ತಿದೆ. ರಾಜ್ಯದಲ್ಲಿ ಹಿಂಸಾಚಾರ ನಡೆದಾಗ ನಾವು ಕ್ರಮ ಕೈಗೊಂಡಿದ್ದೇವೆ. ಆದರೆ ಈ ಮಹಿಳೆಯನ್ನು (ನೂಪುರ್ ಶರ್ಮಾ) ಇನ್ನೂ ಬಂಧಿಸಲಾಗಿಲ್ಲ ಹೇಗೆ? ಆಕೆಯನ್ನು ಬಂಧಿಸುವುದಿಲ್ಲ ಎಂದು ನನಗೆ ತಿಳಿದಿದೆ” ಎಂದರು.

ನೂಪೂರ್‌ ಶರ್ಮಾ ಪ್ರವಾದಿ ಮುಹಮ್ಮದ್ ಅವರ ವಿವಾದಾತ್ಮಕ ಹೇಳಿಕೆಗಳ ಕುರಿತು ತಮ್ಮ ಜೀವ ಬೆದರಿಕೆಯ ಕಾರಣ ಕೋಲ್ಕತ್ತಾ ಪೊಲೀಸರ ಮುಂದೆ ಹಾಜರಾಗಲು ನಾಲ್ಕು ವಾರಗಳ ಕಾಲಾವಕಾಶವನ್ನು ಕೇಳಿದ್ದಾರೆ. ಅವರು ಸೋಮವಾರ ಪೊಲೀಸರ ಮುಂದೆ ಹಾಜರಾಗಬೇಕಿತ್ತು.
ದೇಶದಲ್ಲಿ ಬಿಜೆಪಿಯು ನಿರುದ್ಯೋಗದ ಪ್ರಮುಖ ಸಮಸ್ಯೆಯನ್ನು ಪರಿಹರಿಸುತ್ತಿಲ್ಲ. ಬಿಜೆಪಿಯು ಅಗ್ನಿಪಥ್ ಮೂಲಕ ಅವರ ಕಾರ್ಯಕರ್ತರ ಪಡೆಯನ್ನು ರಚಿಸಲು ಪ್ರಯತ್ನಿಸುತ್ತಿದೆ. ನಾವು ಸೇನಾ ಯೋಧರಿಗೆ ನಮಸ್ಕರಿಸುತ್ತೇವೆ. ಅವರು ರಕ್ಷಣೆಯಲ್ಲಿ ಕೆಲಸ ಮಾಡುತ್ತಾರೆ ಮತ್ತು ತರಬೇತಿಯ ಸಮಯದಲ್ಲಿ ಶಸ್ತ್ರಾಸ್ತ್ರಗಳನ್ನು ಬಳಸುವ ಕೌಶಲ್ಯವನ್ನು ಕಲಿಯುತ್ತಾರೆ.

ಆದರೆ ಯೋಜನೆಯಡಿ ನೇಮಕಗೊಳ್ಳುವವರು 4 ವರ್ಷಗಳ ನಂತರ, ಅವರು ಹೊರಗುಳಿಯುತ್ತಾರೆ ಎಂದು ಬ್ಯಾನರ್ಜಿ ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...