Wednesday, June 10, 2026
Wednesday, June 10, 2026

ಮೀನುಕೃಷಿಕರಿಗೂ ಈಗ ಕಿಸಾನ್ ಕಾರ್ಡ್

Date:

ಕಿಸಾನ್ ಕ್ರೆಡಿಟ್ ಕಾರ್ಡ್ ಅಡಿಯಲ್ಲಿನ ಎಲ್ಲಾ ಪ್ರಯೋಜನಗಳನ್ನು ಮೀನುಗಾರರಿಗೂ ನೀಡಲು ಪ್ರಮಾಣಿತ ಕಾರ್ಯಾಚರಣಾ ವಿಧಾನವನ್ನು ಸಿದ್ದಪಡಿಸಲಾಗುತ್ತಿದೆ ಎಂದು ಕೇಂದ್ರ ಸಚಿವ ಎಲ್ ಮುರುಗನ್ ತಿಳಿಸಿದ್ದಾರೆ.
ಕಿಸಾನ್ ಕ್ರೆಡಿಟ್ ಕಾರ್ಡ್ ಕೇಂದ್ರ ಸರ್ಕಾರ ರೈತರಿಗೆ ನೀಡಿರುವ ಯೋಜನೆಯಾಗಿದೆ. ಇದರ ಮೂಲಕ ರೈತರು ಸಕಾಲದಲ್ಲಿ ಸಾಲ ಪಡೆಯಲು ಸಾಧ್ಯವಾಗುತ್ತದೆ. ಈ ಯೋಜನೆಯನ್ನು 1998 ರಲ್ಲಿ ಪ್ರಾರಂಭಿಸಲಾಯಿತು. ರೈತರಿಗೆ ಸಕಾಲದಲ್ಲಿ ಅಲ್ಪಾವಧಿ ಸಾಲ ನೀಡುವುದು ಇದರ ಉದ್ದೇಶವಾಗಿದೆ. ಈಗ ಈ ಸೌಲಭ್ಯವನ್ನು ಶೀಘ್ರವೇ ಮೀನುಗಾರರಿಗೂ ವಿಸ್ತರಿಸಲಾಗುವುದು ಎಂದು ಕೇಂದ್ರ ಮೀನುಗಾರಿಕೆ ಮತ್ತು ಪಶು ಸಂಗೋಪನೆ ಖಾತೆ ಸಹಾಯಕ ಸಚಿವ ಎಲ್. ಮುರುಗನ್ ಹೇಳಿದ್ದಾರೆ.
ಎಲ್ಲ ರೈತರು ಅಥವಾ ಜಂಟಿ ರೈತರು, ಗುತ್ತಿಗೆ ರೈತರು, ಹತ್ತು ರೈತರು ಒಳಗೊಂಡಿರುವ ಜಂಟಿ ಹೊಣೆಗಾರಿಕೆ ಗುಂಪುಗಳು ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ ಸಾಲ ಪಡೆಯಬಹುದಾಗಿದೆ. ಇವರು ಒಂದು ಅವಧಿಯಲ್ಲಿ ಗರಿಷ್ಠ ಮೂರು ಲಕ್ಷ ರೂಪಾಯಿವರೆಗೆ ಸಾಲ ಪಡೆಯಬಹುದು. ಕೆಸಿಸಿ ಸಾಲ ಪಡೆದ ರೈತರ ಬೆಳೆಗಳಿಗೆ ಬೆಳೆ ವಿಮೆ ಕೂಡ ಲಭ್ಯವಿರುತ್ತದೆ. ಈಗ ಎಲ್ಲ ಸೌಲಭ್ಯಗಳನ್ನು ಮೀನುಗಾರರಿಗೂ ಕಲ್ಪಿಸಲಾಗುತ್ತದೆ ಎಂದು ಸಚಿವರು ತಿಳಿಸಿದರು.
“ಕಡಲ ಆಹಾರ ರಪ್ತು ಹೆಚ್ಚಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೇಶದ ಐದು ಪ್ರಮುಖ ಮೀನುಗಾರಿಕೆ ಬಂದರುಗಳನ್ನು ಅಂತರಾಷ್ಟ್ರೀಯ ಗುಣಮಟ್ಟ ಹಾಗೂ ಅತ್ಯಾಧುನಿಕ ಸಂಸ್ಕರಣಾ ಘಟಕಗಳೊಂದಿಗೆ ಮೇಲ್ದರ್ಜೆಗೆ ಏರಿಸಲು ತೀರ್ಮಾನಿಸಲಾಗಿದೆ” ಎಂದು ಸಚಿವರು ಮಾಹಿತಿ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shimoga ರೋಟರಿ ನಿರಂತರವಾಗಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಸೇವಾನಿರತ- ಕಿಶೋರ್ ಕುಮಾರ್

Rotary Shimoga ರೋಟರಿ ಸದಸ್ಯರು ಜನ್ಮದಿನದಂದು ವಿಶೇಷ ಸಮಾಜಮುಖಿ ಚಟುವಟಿಕೆಗಳನ್ನು ಆಯೋಜಿಸಿ...

Department of Posts ಜೂನ್ 23. ಶಿವಮೊಗ್ಗದಲ್ಲಿ ತ್ರೈಮಾಸಿಕ ” ಡಾಕ್ ಅದಾಲತ್ “

Department of Posts ಶಿವಮೊಗ್ಗ ಕೋಟೆ ರಸ್ತೆ ಅಂಚೆ ಇಲಾಖೆಯ ಅಂಚೆ...

Shivamogga Municipal Corporation ಅತಿವೃಷ್ಠಿ ತುರ್ತು ನಿರ್ವಹಣೆಗೆ ನಗರಪಾಲಿಕೆಯಿಂದ ಜನರ ಉಪಯೋಗಕ್ಕೆ ಸಹಾಯವಾಣಿ ಸೌಲಭ್ಯ.

Shivamogga Municipal Corporation ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾಗುವ ಸೂಕ್ಷ್ಮ...