Saturday, May 16, 2026
Saturday, May 16, 2026

ಪಾಪ್ಯುಲರ್ ಭಾರಧ್ವಾಜ್ ಒಂದು ನೆನಪು

Date:

ಶಿವಮೊಗ್ಗದ ಮನೆಮಾತು. ಒಂದು ರೀತಿ ಉದ್ಯಮಿಗಳ ಲೋಕದ ದಂತಕತೆ.
ಸಾಂಸ್ಕೃತಿಕ ಮನಸ್ಸು,
ದಣಿವರಿಯದ ಸಮಾಜ ಸೇವಕ …ಇಷ್ಟೆಲ್ಲಾ ಹೇಳಿದರೂ ಮತ್ತೂ ಇನ್ನೇನೋ ಹೇಳಬೇಕು ಅನಿಸುತ್ತದೆ ಹಿರಿಯ ಭಾರದ್ವಾಜ್ ಬಗ್ಗೆ. ಅವರು ಸಿಹಿಮೊಗೆಯ ಮರೆಯದ ಮಾಣಿಕ್ಯ.

ಇಡೀ ಶಿವಮೊಗ್ಗದ ವ್ಯವಹಾರ ಜಗತ್ತು , ಜಿಲ್ಲೆಯ ವ್ಯಾಪಾರ ವಹಿವಾಟುಗಳ ಬಗ್ಗೆ ಅತ್ಯಂತ ಕಾಳಜಿ ಹೊಂದಿದ್ದ ಮನುಷ್ಯ.
ಮೊನ್ನೆ ಮೊನ್ನೆಯವರೆಗೂ ಸ್ಥಳೀಯವಾಗಿ ಕೆಲ ಹೊತ್ತು ಅವರು ನಡೆದು ಹೋಗುತ್ತಿದ್ದನ್ನ ಕಂಡಿದ್ದೆ. ಇಷ್ಟು ವಯಸ್ಸಾದರೂ ನಡೆದಾಡುತ್ತಿದ್ದಾರೆ ಪರವಾಗಿಲ್ಲ ಎಂದು ಅಭಿಮಾನ ಉಕ್ಕುತ್ತಿತ್ತು.

ಅವರು ನನಗೆ ಬಹಳ ವರ್ಷಗಳಿಂದಲೂ ಪರಿಚಯ. ಭದ್ರಾವತಿ ಆಕಾಶವಾಣಿ ಕೇಂದ್ರಕ್ಕೆ ಭೇಟಿ ನೀಡುತ್ತಿದ್ದರು. ಶಿವಮೊಗ್ಗದಲ್ಲಿ ನಡೆದ ಹಲವಾರು ಸಭೆ ಸಮಾರಂಭಗಳಲ್ಲಿ ವೇದಿಕೆಯಲ್ಲಿರುತ್ತಿದ್ದರು.

ನೋಡಿ ಮಾತಾಡಿಸುತ್ತಿದ್ದರು.
ಒಮ್ಮೆ ಹಿರಿಯ ಸಂಗೀತಜ್ಞ ಡಾ.ಎಂ.ಬಾಲ ಮುರಳಿ ಕೃಷ್ಣ ಅವರ ಗಾಯನ ಕಚೇರಿಗೆ ನನ್ನನ್ನ ನಿರೂಪಣೆಗೆ ಕರೆಸಿದ್ದರು. ಕುವೆಂಪು ರಂಗ ಮಂದಿರದಲ್ಲಿ ಖ್ಯಾತ ಬಾಲಮುರಳಿಕೃಷ್ಣರಿಂದ ಸ್ಮರಣಿಕೆ ಸ್ವೀಕರಿಸಿದ ನೆನಪು ಹಸಿರಾಗಿದೆ.

ನಾನು ಜೊತೆಯಲ್ಲಿದ್ದಾಗ ಮಿಕ್ಕವರಿಗೆ ನಾನು ಸಂಕೋಚಪಡುವಷ್ಟು ಹೊಗಳಿ ಪರಿಚಯಿಸುತ್ತಿದ್ದರು.
ವಿವಿಧ ಸಂಘ ಸಂಸ್ಥೆಗಳಲ್ಲಿ ಅವರು ಪದಾಧಿಕಾರಿಗಳಾಗಿ
ಸೇವೆ ಸಲ್ಲಿಸಿದ್ದಾರೆ.
ಪ್ರಧಾನವಾಗಿ ಅವರು ಬೆಳೆಸಿದ ಶಿವಮೊಗ್ಗ ಚೇಂಬರ್ ಆಫ್ ಕಾಮರ್ಸ್ ಈಗ ತಿಲಕ ಪ್ರಾಯವಾಗಿ ನಿಂತಿದೆ.

ಶಿವಮೊಗ್ಗದ ಅಭಿವೃದ್ಧಿ ಬಗ್ಗೆ ಸದಾ ಚಿಂತಿಸುತ್ತಿದ್ದ ಮಾಗಿದ ಮನಸ್ಸಿನ ಚೇತನ
ಈಗ ನಮ್ಮನ್ನಗಲಿದ್ದಾರೆ.
ಅವರಿಗೆ ನಮ್ಮ ನುಡಿ ನಮನಗಳು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ.ಶಾಸಕ ಚನ್ನಬಸಪ್ಪ‌ ಭೇಟಿ- ನೊಂದವರಿಗೆ ಸಾಂತ್ವನ.

S.N. Channabasappa ನಗರದ ಮಿಳಘಟ್ಟದ 1ನೇ ಕ್ರಾಸ್‌ನಲ್ಲಿರುವ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ...

DC Shivamogga ತ್ಯಾಜ್ಯ ಉತ್ಪಾದನೆ ನಿಯಂತ್ರಿಸಿ, ವಿಲೇವಾರಿಗೆ ಅಧಿಕಾರಿಗಳು ವಿಶೇಷ ಗಮನ ಹರಿಸಿ, ಸಾರ್ವಜನಿಕರೂ ಸಹಕರಿಸಿ- ಪ್ರಭುಲಿಂಗ ಕವಳಿಕಟ್ಟಿ

DC Shivamogga ನಗರೀಕರಣ ಮತ್ತು ಕೈಗಾರಿಕೀಕರಣದಿಂದಾಗಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯದ ಪ್ರಮಾಣ ದಿನೇದಿನೇ...

MESCOM ಮೇ19. ಶಿವಮೊಗ್ಗದ ಚಿಕ್ಕಲ್ಲು,ಗುರುಪುರ, ಪುರಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಎಂ.ಆರ್.ಎಸ್. 110/11 ಕೆ.ವಿ. ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು,...