Friday, February 6, 2026
Friday, February 6, 2026

ಪಾರಂಪರಿಕ ಹಿನ್ನೆಲೆಯ ಸಾಗರ, ಭದ್ರಾವತಿ & ತೀರ್ಥಹಳ್ಳಿಯಲ್ಲಿ ಯೋಗದಿನಾಚರಣೆ

Date:

ಭಾರತ ಮತ್ತು ಕರ್ನಾಟಕ ಸರ್ಕಾರದ ಆಯುಷ್ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಕಚೇರಿ, ವಿವಿಧ ಯೋಗ ಸಂಸ್ಥೆಗಳು, ಎನ್‍ಎಸ್‍ಎಸ್ ಮತ್ತು ಎನ್‍ಸಿಸಿ ಘಟಕಗಳ ಸಹಯೋಗದಲ್ಲಿ ಶಿವಮೊಗ್ಗ ಜಿಲ್ಲೆಯ ಮೂರು ಪಾರಂಪರಿತ ತಾಣಗಳಾದ ಸಾಗರ ತಾಲ್ಲೂಕಿನ ಶ್ರೀ ಅಘೋರೇಶ್ವರ ದೇವಸ್ಥಾನ ಆವರಣ ಇಕ್ಕೇರಿ, ಶ್ರೀ ಲಕ್ಷ್ಮೀನರಸಿಂಹಸ್ವಾಮಿ ಆವರಣ ಭದ್ರಾವತಿ ಮತ್ತು ಕ್ಕೆ ಶ್ರೀ ರಾಮೇಶ್ವರ ದೇವಸ್ಥಾನ ಆವರಣ ತೀರ್ಥಹಳ್ಳಿ ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ನಡೆಸಲಾಯಿತು.

ಸಾಗರ ತಾಲ್ಲೂಕಿನ ಇಕ್ಕೇರಿಯ ಶ್ರೀ ಅಘೋರೇಶ್ವರ ದೇವಸ್ಥಾನ ಆವರಣದಲ್ಲಿ ಆಯೋಜಿಸಲಾಗಿದ್ದ ಯೋಗ ದಿನಾಚರಣೆಯನ್ನು ಶಾಸಕರಾದ ಹರತಾಳು ಉದ್ಘಾಟಿಸಿ, ಯೋಗಾಭ್ಯಾಸದಲ್ಲಿ ಪಾಲ್ಗೊಂಡರು. ನಂತರ ಮಾತನಾಡಿ, ಇಡೀ ವಿಶ್ವಕ್ಕೆ ಯೋಗ ಪರಿಚಯಿಸಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ಧನ್ಯವಾದಗಳು. ನಮ್ಮ ದೇಶದಲ್ಲಿ ರೈತರು ಮತ್ತು ಸೈನಿಕರು ನಿಜವಾದ ಯೋಗಿಗಳಾಗಿದ್ದು ಪ್ರತಿಯೊಬ್ಬರು ಪ್ರತಿನಿತ್ಯ ಯೋಗಾಭ್ಯಾಸ ಮಾಡಬೇಕು. ಇದರಿಂದ ಮನಸ್ಸು ಮತ್ತು ದೇಹಾರೋಗ್ಯ ಹೆಚ್ಚುತ್ತದೆ ಎಂದರು.

ಶ್ರೀ ಲಕ್ಷ್ಮೀನರಸಿಂಹಸ್ವಾಮಿ ಆವರಣ ಭದ್ರಾವತಿ ಇಲ್ಲಿ ಆಯೋಜಿಸಲಾಗಿದ್ದ ಯೋಗ ದಿನಾಚರಣೆಯನ್ನು ನಗರಸಭೆ ಅಧ್ಯಕ್ಷೆ ಗೀತಾ ರಾಜಕುಮಾರ್ ಉದ್ಘಾಟಿಸಿದರು. ಜಿ.ಪಂ ಸಿಇಓ ಎಂ.ಎಲ್.ವೈಶಾಲಿ ಮಾತನಾಡಿ, ಯೋಗಾಭ್ಯಾಸದ ಪ್ರಾಮುಖ್ಯತೆಯನ್ನು ಎಲ್ಲರೂ ತಿಳಿದುಕೊಂಡು ಪ್ರತಿ ಮನೆ ಮನೆಗಳಲ್ಲಿ ಯೋಗಾಭ್ಯಾಸ ಮಾಡಬೇಕೆಂದರು.

ಶ್ರೀ ರಾಮೇಶ್ವರ ದೇವಸ್ಥಾನ ಆವರಣ, ತೀರ್ಥಹಳ್ಳಿ ಇಲ್ಲಿ ಆಯೋಜಿಸಲಾಗಿದ್ದ ಯೋಗ ದಿನಾಚರಣೆಯನ್ನು
ಪ್ರಭಾರ ತಹಶೀಲ್ದಾರ್ ಮಂಜುಳ ಭಜಂತ್ರಿ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ಯೋಗ ಅತ್ಯಂತ ಅವಶ್ಯಕವಾಗಿದ್ದು, ಮಾನಸಿಕ ಸಮಯೋಲನ ಕಾಪಾಡಲು ಹಾಗೂ ದುಶ್ಚಟಗಳಿಂದ ದೂರವಿರಲು ಇದು ಸಹಕಾರಿ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು, ವಿವಿಧ ಯೋಗ ಸಂಸ್ಥೆಗಳ ಪ್ರತಿನಿಧಿಗಳು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...