Friday, February 6, 2026
Friday, February 6, 2026

ಪಾರಂಪರಿಕ ಹಿನ್ನೆಲೆಯ ಸಾಗರ, ಭದ್ರಾವತಿ & ತೀರ್ಥಹಳ್ಳಿಯಲ್ಲಿ ಯೋಗದಿನಾಚರಣೆ

Date:

ಭಾರತ ಮತ್ತು ಕರ್ನಾಟಕ ಸರ್ಕಾರದ ಆಯುಷ್ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಕಚೇರಿ, ವಿವಿಧ ಯೋಗ ಸಂಸ್ಥೆಗಳು, ಎನ್‍ಎಸ್‍ಎಸ್ ಮತ್ತು ಎನ್‍ಸಿಸಿ ಘಟಕಗಳ ಸಹಯೋಗದಲ್ಲಿ ಶಿವಮೊಗ್ಗ ಜಿಲ್ಲೆಯ ಮೂರು ಪಾರಂಪರಿತ ತಾಣಗಳಾದ ಸಾಗರ ತಾಲ್ಲೂಕಿನ ಶ್ರೀ ಅಘೋರೇಶ್ವರ ದೇವಸ್ಥಾನ ಆವರಣ ಇಕ್ಕೇರಿ, ಶ್ರೀ ಲಕ್ಷ್ಮೀನರಸಿಂಹಸ್ವಾಮಿ ಆವರಣ ಭದ್ರಾವತಿ ಮತ್ತು ಕ್ಕೆ ಶ್ರೀ ರಾಮೇಶ್ವರ ದೇವಸ್ಥಾನ ಆವರಣ ತೀರ್ಥಹಳ್ಳಿ ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ನಡೆಸಲಾಯಿತು.

ಸಾಗರ ತಾಲ್ಲೂಕಿನ ಇಕ್ಕೇರಿಯ ಶ್ರೀ ಅಘೋರೇಶ್ವರ ದೇವಸ್ಥಾನ ಆವರಣದಲ್ಲಿ ಆಯೋಜಿಸಲಾಗಿದ್ದ ಯೋಗ ದಿನಾಚರಣೆಯನ್ನು ಶಾಸಕರಾದ ಹರತಾಳು ಉದ್ಘಾಟಿಸಿ, ಯೋಗಾಭ್ಯಾಸದಲ್ಲಿ ಪಾಲ್ಗೊಂಡರು. ನಂತರ ಮಾತನಾಡಿ, ಇಡೀ ವಿಶ್ವಕ್ಕೆ ಯೋಗ ಪರಿಚಯಿಸಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ಧನ್ಯವಾದಗಳು. ನಮ್ಮ ದೇಶದಲ್ಲಿ ರೈತರು ಮತ್ತು ಸೈನಿಕರು ನಿಜವಾದ ಯೋಗಿಗಳಾಗಿದ್ದು ಪ್ರತಿಯೊಬ್ಬರು ಪ್ರತಿನಿತ್ಯ ಯೋಗಾಭ್ಯಾಸ ಮಾಡಬೇಕು. ಇದರಿಂದ ಮನಸ್ಸು ಮತ್ತು ದೇಹಾರೋಗ್ಯ ಹೆಚ್ಚುತ್ತದೆ ಎಂದರು.

ಶ್ರೀ ಲಕ್ಷ್ಮೀನರಸಿಂಹಸ್ವಾಮಿ ಆವರಣ ಭದ್ರಾವತಿ ಇಲ್ಲಿ ಆಯೋಜಿಸಲಾಗಿದ್ದ ಯೋಗ ದಿನಾಚರಣೆಯನ್ನು ನಗರಸಭೆ ಅಧ್ಯಕ್ಷೆ ಗೀತಾ ರಾಜಕುಮಾರ್ ಉದ್ಘಾಟಿಸಿದರು. ಜಿ.ಪಂ ಸಿಇಓ ಎಂ.ಎಲ್.ವೈಶಾಲಿ ಮಾತನಾಡಿ, ಯೋಗಾಭ್ಯಾಸದ ಪ್ರಾಮುಖ್ಯತೆಯನ್ನು ಎಲ್ಲರೂ ತಿಳಿದುಕೊಂಡು ಪ್ರತಿ ಮನೆ ಮನೆಗಳಲ್ಲಿ ಯೋಗಾಭ್ಯಾಸ ಮಾಡಬೇಕೆಂದರು.

ಶ್ರೀ ರಾಮೇಶ್ವರ ದೇವಸ್ಥಾನ ಆವರಣ, ತೀರ್ಥಹಳ್ಳಿ ಇಲ್ಲಿ ಆಯೋಜಿಸಲಾಗಿದ್ದ ಯೋಗ ದಿನಾಚರಣೆಯನ್ನು
ಪ್ರಭಾರ ತಹಶೀಲ್ದಾರ್ ಮಂಜುಳ ಭಜಂತ್ರಿ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ಯೋಗ ಅತ್ಯಂತ ಅವಶ್ಯಕವಾಗಿದ್ದು, ಮಾನಸಿಕ ಸಮಯೋಲನ ಕಾಪಾಡಲು ಹಾಗೂ ದುಶ್ಚಟಗಳಿಂದ ದೂರವಿರಲು ಇದು ಸಹಕಾರಿ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು, ವಿವಿಧ ಯೋಗ ಸಂಸ್ಥೆಗಳ ಪ್ರತಿನಿಧಿಗಳು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Ambedkar Bhavan Shivamogga ಫೆಬ್ರವರಿ 14. ” ಹ್ಯಾಪಿ ಫೀಟ್- 2026″ ವಿಶೇಷ ನೃತ್ಯ ಪ್ರದರ್ಶನ

Ambedkar Bhavan Shivamogga ನೃತ್ಯಸಿರಿ ಡ್ಯಾನ್ಸ್ ಸ್ಟುಡಿಯೋ ವತಿಯಿಂದ “ಹ್ಯಾಪಿ ಫೀಟ್-2026”...

Dharmasthala Rural Development Project ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ವಾತ್ಸಲ್ಯ ಕಿಟ್ ವಿತರಣೆ

Dharmasthala Rural Development Project ಶಿವಮೊಗ್ಗ ತಾಲೂಕಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ...

ಕರವೇ ಜನಮನ ರಾಜ್ಯ ಸಂಘಟನೆಯ ಪದಾಧಿಕಾರಿಗಳ ಪ್ರಮಾಣವಚನ ಸ್ವೀಕಾರ

ಕನ್ನಡ ರಕ್ಷಣಾ ವೇದಿಕೆ ಜನಮನ ರಾಜ್ಯ ಸಂಘಟನೆಯ ಪದಾಧಿಕಾರಿಗಳ ಅಧಿಕಾರದ ಪ್ರಮಾಣ...