Tuesday, August 25, 2026
Tuesday, August 25, 2026

ಯೋಗ ಒಲಂಪಿಯಾಡ್ ನಲ್ಲಿ ರಜತ ಪದಕ ಪಡೆದ ತೀರ್ಥಹಳ್ಳಿಯ ಪ್ರತಿಭೆ

Date:

ದೆಹಲಿಯಲ್ಲಿ ನಡೆದ ರಾಷ್ಟ್ರ ಮಟ್ಟದ ಯೋಗ ಒಲಂಪಿಯಾಡ್ ಸ್ಪರ್ಧೆಯಲ್ಲಿ ತೀರ್ಥಹಳ್ಳಿ ತಾ. ಹುಂಚದಕಟ್ಟೆ ಸರ್ಕಾರಿ ಪ್ರೌಢ ಶಾಲೆಯ ಹೆಮ್ಮೆಯ ವಿದ್ಯಾರ್ಥಿನಿ, ಗ್ರಾಮೀಣ ಪ್ರತಿಭೆ ಕು|| ಕಾವ್ಯ ಕೆ.ಎನ್. ಬೆಳ್ಳಿ ಪದಕ ಪಡೆದು ಶಾಲೆಗೆ, ತೀರ್ಥಹಳ್ಳಿ ತಾಲ್ಲೂಕಿಗೆ, ಶಿವಮೊಗ್ಗ ಜಿಲ್ಲೆಗೆ ಮತ್ತು ರಾಜ್ಯಕ್ಕೆ ಕೀರ್ತಿ ತಂದಿದ್ದಾಳೆ.
ದಿನಾಂಕ: 19/06/2022ರಂದು ದೆಹಲಿಯ ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ತು ಇಲ್ಲಿ ನಡೆದ 16 ವರ್ಷದೊಳಗಿನ ರಾಷ್ಟ್ರಮಟ್ಟದ ಯೋಗ ಒಲಂಪಿಯಾಡ್ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿ ಮೊದಲ ಬಾರಿಗೆ ರಾಜ್ಯಕ್ಕೆ ಬೆಳ್ಳಿ ಪದಕ ತಂದುಕೊಟ್ಟ ಈ ಪ್ರತಿಭಾನ್ವಿತೆ ಗರ್ತಿಕೆರೆ ಸಮೀಪದ ಎಣ್ಣೆನೋಡ್ಲು ಗ್ರಾಮದ ನಾಗರಾಜ್ ಮತ್ತು ಯಶೋಧಮ್ಮ ದಂಪತಿಗಳ ಪುತ್ರಿ. ಇವಳು ಪ್ರಾಥಮಿಕ ಶಿಕ್ಷಣವನ್ನು ಕರ್ನಾಟಕ ಪಬ್ಲಿಕ್ ಶಾಲೆ ಅಮೃತ ಹೊಸನಗರ ತಾ. ಇಲ್ಲಿ ಪಡೆದಿರುತ್ತಾಳೆ.

ಹೆಮ್ಮೆಯ ಪ್ರತಿಭಾನ್ವಿತ ವಿದ್ಯಾರ್ಥಿನಿ ಕು. ಕಾವ್ಯ ಕೆ.ಎನ್ ಇವಳಿಗೆ ಹುಂಚದಕಟ್ಟೆ ಸರ್ಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರು, ಉಪಾಧ್ಯಾಯರುಗಳು, ಸಿಬ್ಬಂದಿಗಳು ಹಾಗೂ ಸಹಪಾಠಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...