Wednesday, August 26, 2026
Wednesday, August 26, 2026

ಸಾಲುಮರದ ತಿಮ್ಮಕ್ಕನವರಿಗೆ ಬಿಡಿಎ ನಿವೇಶನ ವಿತರಣೆ

Date:

ಪರಿಸರಪ್ರೇಮಿ ಸಾಲುಮರದ ತಿಮ್ಮಕ್ಕ ಅವರಿಗೆ ಬಿಡಿಎ ವತಿಯಿಂದ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ 50*80 ಅಳತೆಯ ನಿವೇಶನವನ್ನು ನೀಡಲಾಯಿತು. ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಮತ್ತು ಆಯುಕ್ತರಾದ ರಾಜೇಶ್ ಗೌಡ ಅವರು ನಿವೇಶನದ ನೋಂದಣಿ ಪತ್ರವನ್ನು ಹಸ್ತಾಂತರ ಮಾಡಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸೂಚನೆ ಮೇರೆಗೆ ಕೆಂಪೇಗೌಡ ಬಡಾವಣೆಯ 7 ನೇ ಬ್ಲಾಕ್ ನಲ್ಲಿರು ನಿವೇಶನದ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಯಿತು. ನಂತರ ಬಿಡಿಎ ಅಧ್ಯಕ್ಷರು ಮತ್ತು ಆಯುಕ್ತರು ಶತಾಯುಷಿ ತಿಮ್ಮಕ್ಕ ಅವರನ್ನು ಸನ್ಮಾನಿಸಿ ನಿವೇಶನದ ನೋಂದಣಿ ಪತ್ರವನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಾಲುಮರದ ತಿಮ್ಮಕ್ಕ, ನನಗೆ ಬಿಡಿಎ ವತಿಯಿಂದ ನಿವೇಶನವನ್ನು ನೀಡಿರುವುದಕ್ಕೆ ಸಂತಸವಾಗುತ್ತಿದೆ.ಎಲ್ಲರೂ ಪರಿಸರ ರಕ್ಷಣೆಯತ್ತ ಕಾಳಜಿ ವಹಿಸಬೇಕು ಮತ್ತು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ ಅವರಲ್ಲಿ ಪರಿಸರ ಕಾಳಜಿ ಮೂಡುವಂತೆ ಮಾಡಬೇಕೆಂದು ಹಾರೈಸಿದರು.

ಈ ಸಂದರ್ಭದಲ್ಲಿ ಕಾರ್ಯದರ್ಶಿ ಆನಂದ್, ಉಪಕಾರ್ಯದರ್ಶಿ ಡಾ.ಮಧು ಸೇರಿದಂತೆ ಇನ್ನಿತರೆ ಅಧಿಕಾರಿಗಳು ಇದ್ದರು.
ಬಿಡಿಎ ಅಧ್ಯಕ್ಷ ಎಸ್. ಆರ್.ವಿಶ್ವನಾಥ್ ಮತ್ತು ಆಯುಕ್ತ ರಾಜೇಶ್ ಗೌಡ ಅವರು ಬಿಡಿಎ ವತಿಯಿಂದ ನೀಡಲಾದ ನಿವೇಶನದ ನೋಂದಣಿ ಪತ್ರವನ್ನು ಶತಾಯುಷಿ ಸಾಲುಮರದ ತಿಮ್ಮಕ್ಕ ಅವರಿಗೆ ವಿತರಿಸಿದರು.

ಈ ಸಂದರ್ಭದಲ್ಲಿ ಕಾರ್ಯದರ್ಶಿ ಆನಂದ್, ಉಪಕಾರ್ಯದರ್ಶಿ ಡಾ.ಮಧು, ಸೇರಿದಂತೆ ಇನ್ನಿತರೆ ಅಧಿಕಾರಿಗಳು ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Club Shimoga ಇಂಟರಾಕ್ಟ್ ಕ್ಲಬ್ ಗಳು ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನಕ್ಕೆ ಅತ್ಯುತ್ತಮ ವೇದಿಕೆ: ಸುಮತಿ ಜಿ.ಕುಮಾರಸ್ವಾಮಿ

Rotary Club Shimoga ಇಂಟರಾಕ್ಟ್ ಕ್ಲಬ್‌ಗಳು ವಿದ್ಯಾರ್ಥಿಗಳಿಗೆ ಶಾಲಾ ಹಂತದಲ್ಲಿಯೇ ಸಾರ್ವಜನಿಕ...

S.N. Channabasappa “ಮನರಂಜನೆ” ಮನುಷ್ಯ ಜೀವನದ ಭಾಗ.ಆ ಸಾಂಸ್ಕೃತಿಕ ಸೊಬಗು ಜೀವನದಲ್ಲಿ ಅಡಕವಾಗಿರಬೇಕು- ಎಸ್.ಎನ್.ಚನ್ನಬಸಪ್ಪ

S.N. Channabasappa ಮಾರ್ನಾಮಿಬೈಲು ಎನ್ನುವುದು ಒಂದು ಇತಿಹಾಸ ಪ್ರಸಿದ್ದತೆ ಪಡೆದಿದೆ, ನಗರದ...

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...