Monday, February 2, 2026
Monday, February 2, 2026

ಶಾಲೆ ಎಂಬ ಗೂಡಿಗೆ ಹಾರಿ ಬಂದ ಹಕ್ಕಿಗಳು

Date:

ಸುಮಾರು ಒಂದುವರೆ ವರ್ಷಗಳವರೆಗೂ ಶಾಲಾ ವಾತಾವರಣ ಸ್ತಬ್ಧವಾಗಿತ್ತು. ಈಗ ಒಂದರಿಂದ ಐದನೇ ತರಗತಿಯವರೆಗೆ ಭೌತಿಕ ತರಗತಿಗಳು ನಿನ್ನೆಯಿಂದ ರಾಜ್ಯದ್ಯಂತ ಆರಂಭಗೊಂಡಿವೆ. ಬರಿದಾದ ಗೂಡಿಗೆ ಹಕ್ಕಿಗಳು ಹಾರಿಬಂದಂತೆ ಶಾಲಾ ವಾತಾವರಣದಲ್ಲಿ ಚಿಲಿಪಿಲಿ ಶುರುವಾಗಿದೆ.
ಶಾಲೆಗಳ ಆವರಣದಲ್ಲಿ ಮತ್ತೆ ಮಕ್ಕಳ ಕಲರವ ಶುರುವಾಗಿದೆ. ಹಲವು ಶಾಲೆಗಳಲ್ಲಿ ಪ್ರವೇಶದ್ವಾರವನ್ನು ತಳಿರು-ತೋರಣಗಳಿಂದ ಅಲಂಕೃತ ಗೊಳಿಸಲಾಗಿತ್ತು. ಬಣ್ಣ ಬಣ್ಣದ ಬಲೂನುಗಳು ಆಕಾಶದಲ್ಲಿ ಚಿಮ್ಮುತ್ತಿದ್ದವು. ಶಾಲೆಯ ಅಂಗಳದ ರಂಗೋಲಿಯಿಂದ ಶೋಭಿಸುತ್ತಿತ್ತು. ಉತ್ಸುಕತೆಯಿಂದ ಬಂದ ಮಕ್ಕಳಿಗೆ ಶಾಲಾವೃಂದವು ಹೂವು ಮತ್ತು ಸಿಹಿಯನ್ನು ನೀಡಿ ಬರಮಾಡಿಕೊಂಡಿತು.
ಮಕ್ಕಳ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಅರ್ಧ ದಿನ ಮಾತ್ರ ಭೌತಿಕ ತರಗತಿಗಳನ್ನು ನಡೆಸಲಾಯಿತು. ಮೊದಲ ದಿನ ಶೇ. 55 ರಷ್ಟು ವಿದ್ಯಾರ್ಥಿಗಳು ಹಾಜರಾಗಿದ್ದರು ಎಂದು ತಿಳಿದು ಬಂದಿದೆ.
ಕೋವಿಡ್, ಲಾಕ್ ಡೌನ್ ನಿಂದ ಹುಟ್ಟಿಕೊಂಡ ಆರ್ಥಿಕ ಸಂಕಷ್ಟದಿಂದ ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳ ಬದಲಿಗೆ ಸರ್ಕಾರಿ ಶಾಲೆಗೆ ಸೇರಿಸಲು ಒತ್ತು ನೀಡಿರುವುದು ಕಂಡುಬಂದಿದೆ. ಈ ವರ್ಷ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಒಂದರಿಂದ 10ನೇ ತರಗತಿಯಲ್ಲಿ ವಿದ್ಯಾರ್ಥಿಗಳ ದಾಖಲಾತಿ ಸಂಖ್ಯೆ 2.35 ಲಕ್ಷ (ಶೇ.5.36) ಏರಿಕೆಯಾಗಿದೆ ಎನ್ನಲಾಗುತ್ತಿದೆ.
ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಹೆಚ್ಚುತ್ತಿರುವುದು ಸಂತೋಷದ ವಿಷಯವಾದರೂ, ಸರ್ಕಾರಿ ಶಾಲೆಯಲ್ಲಿ ಶಿಕ್ಷಕರು ಮತ್ತು ಮೂಲ ಸೌಕರ್ಯಗಳ ಕೊರತೆಯನ್ನು ತುಂಬುವುದು ಸವಾಲಿನ ಕೆಲಸವೇ ಆಗಿದೆ. ಸರ್ಕಾರವು ಶೀಘ್ರವಾಗಿ ಶಾಲಾ ಕಟ್ಟಡ ನಿರ್ವಹಣೆ ಮತ್ತು ಶಿಕ್ಷಕರ ನೇಮಕಾತಿ ಬಗ್ಗೆ ಗಮನಹರಿಸಿ ಈಗಿರುವ ಕೊರತೆಯನ್ನು ನೀಗಿಸಲು ಕ್ರಮ ಕೈಗೊಳ್ಳಬೇಕಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...