Tuesday, October 1, 2024
Tuesday, October 1, 2024

ಬೊಕ್ಕಸಕ್ಕೆ ಭಾರವಾಗಿರುವ ನಿಗಮಗಳ ವಿಲೀನ

Date:

ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಲು ನಿರ್ಧರಿಸಿರುವ ರಾಜ್ಯ ಸರ್ಕಾರ ತನ್ನ ಬೊಕ್ಕಸಕ್ಕೆ ಭಾರವಾಗಿರುವ ನಿಗಮಗಳನ್ನು ವಿಲೀನಗೊಳಿಸಲು ತೀರ್ಮಾನಿಸಿದೆ.

ಈ ಕುರಿತು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾಹಿತಿ ಹಂಚಿಕೊಂಡ ಕಂದಾಯ ಸಚಿವ ಆರ್. ಅಶೋಕ್ ಅವರು

ಒಂದೊಂದು ಇಲಾಖೆಯಲ್ಲಿ ನಾಲ್ಕೈದು ನಿಗಮಗಳಿದ್ದು, ಬಹುತೇಕ ನಿಗಮಗಳಿಗೆ ಮಾಡಲು ಕೆಲಸವೇ ಇಲ್ಲ. ಇಂತಹ ನಿಗಮಗಳಿಗೆ ಹಲವು ಸಿಬ್ಬಂದಿ, ಅಧಿಕಾರಿಗಳಿದ್ದು, ವಿನಾಕಾರಣ ಕಾರುಗಳು ಬಳಕೆಯಾಗುತ್ತಿವೆ. ಅರಣ್ಯ ಇಲಾಖೆಯ ವ್ಯಾಪ್ತಿಯಲ್ಲಿ ಹಣ್ಣಿನ ರಸ ತೆಗೆಯಲು, ರಬ್ಬರ್ ರಸ ತೆಗೆಯಲು ಸಹ ನಿಗಮಗಳಿವೆ. ಇಂತಹ ನಿಗಮಗಳಿಂದ ಸರ್ಕಾರದ ಬೊಕ್ಕಸಕ್ಕೆ ಅನಗತ್ಯ ಭಾರ. ಈ ಭಾರವನ್ನು ಕಡಿಮೆ ಮಾಡಿಕೊಳ್ಳುವುದು ಅನಿವಾರ್ಯ ಎಂದರು.

ಸಮಾಜ ಕಲ್ಯಾಣ ಇಲಾಖೆಯಲ್ಲಿ ಹಲವು ನಿಗಮಗಳಿದ್ದರೂ, ಅಲ್ಲಿ ಬಹಳ ಕೆಲಸಗಳಿವೆ. ಹೀಗಾಗಿ ಸಮಾಜ ಕಲ್ಯಾಣ ಇಲಾಖೆಯಂತಹ ಪ್ರಮುಖ ಇಲಾಖೆಗಳಲ್ಲಿರುವ ನಿಗಮಗಳನ್ನು ಮುಟ್ಟಲು ಹೋಗುವುದಿಲ್ಲ. ಆದರೆ ಸರ್ಕಾರದ ಬಹುತೇಕ ಇಲಾಖೆಗಳಲ್ಲಿ ಒಂದು ನಿಗಮದ ಜಾಗದಲ್ಲಿ ಹಲವು ನಿಗಮಗಳಿದ್ದು, ಇವನ್ನು ವಿಲೀನಗೊಳಿಸಿ ಆಯಾ ಇಲಾಖೆಯಲ್ಲಿ ಒಂದೇ ನಿಗಮವಿರುವಂತೆ ನೋಡಿಕೊಳ್ಳಲಾಗುವುದು ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...