Sunday, December 7, 2025
Sunday, December 7, 2025

ಬೆಂಗಳೂರಿನ ಖಾಸಗಿ ಶಿಕ್ಷಣ ಸಂಸ್ಥೆ ಮೇಲೆ ಐಟಿ ಧಾಳಿ

Date:

ಇಂದು ಬೆಳಗ್ಗೆ ಬೆಂಗಳೂರಿನ ಹಲವು ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹುಣಸಮಾರಹಳ್ಳಿಯ ಕೃಷ್ಣದೇವರಾಯ ಇನ್ಸ್ಟಿಟ್ಯೂಷನ್ ಮೇಲೆ ಐಟಿ ದಾಳಿ ನಡೆಸಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.

ಆದಾಯ ತೆರಿಗೆಯಲ್ಲಿ ವಂಚನೆ ಆರೋಪದ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ. ಇದರ ಜತೆಗೆ ರಿಯಲ್ ಎಸ್ಟೇಟ್ ಬಿಲ್ಡರ್‌ಗಳ ಮನೆ ಮೇಲೂ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ದಾಳಿಗೆ ಪ್ರಮುಖವಾಗಿ ಮೂರು ವಿಚಾರಗಳು ಕಾರಣವಾಗಿವೆ.
1)ಸರ್ಕಾರದ ನಿಯಮಾವಳಿಗಳನ್ನ ಮೀರಿ ಪೇಮೆಂಟ್ ಕೋಟಾ ಸೀಟ್ ಗಳನ್ನ ಮ್ಯಾನೇಜ್ ಮೆಂಟ್ ಗಳು ಬ್ಲಾಂಕಿಂಗ್ ಮಾಡಿ ಹೆಚ್ಚಿಸಿರುವ ಆರೋಪ.

2)ವಿದೇಶಿ ವಿದ್ಯಾರ್ಥಿಗಳಿಂದ ನಿಗದಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಅಕ್ರಮ‌ ಶುಲ್ಕ ಸಂಗ್ರಹ ಆರೋಪ.

3)ಈ ಮೂಲಕ ಅಕ್ರಮವಾಗಿ ಸಂಗ್ರಹಿಸಲಾದ ಹಣದ ಮಾಹಿತಿ ಐಟಿ ಗೆ ಒದಗಿಸದೆ ತೆರಿಗೆ ವಂಚನೆ ಆರೋಪ
ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ ಐಟಿ ಅಧಿಕಾರಿಗಳ ತಂಡ. ಸೆರ್ಚ್ ವಾರೆಂಟ್ ಪಡೆದು ಮುಂಜಾನೆಯೇ ಐಟಿ ದಾಳಿ ನಡೆದಿದೆ. 20 ಕ್ಕೂ ಹೆಚ್ಚು ಕಡೆ 250 ಕ್ಕೂ ಹೆಚ್ಚು ಅಧಿಕಾರಿಗಳಿಂದ ಈ ದಾಳಿ ನಡೆಯುತ್ತಿದ್ದು, ದಾಖಲೆಗಳ ಪರಿಶೀಲನೆಯಲ್ಲಿ ಐಟಿ ಅಧಿಕಾರಿಗಳು ನಿರಂತರಾಗಿದ್ದಾರೆ.

ಆದಾಯ ತೆರಿಗೆ ವಂಚನೆ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸರ್ಚ್ ವಾರೆಂಟ್ ಪಡೆದು ಇಂದು ಬೆಳಿಗ್ಗೆ ಐಟಿ ದಾಳಿ ನಡೆಸಿದ್ದಾರೆ. 20 ಕ್ಕೂ ಹೆಚ್ಚು ಕಡೆ 250 ಕ್ಕೂ ಹೆಚ್ಚು ಅಧಿಕಾರಿಗಳಿಂದ ದಾಳಿ ನಡೆಸಲಾಗಿದೆ. ದಾಳಿ ನಡೆಸಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...