Sunday, May 17, 2026
Sunday, May 17, 2026

ರಕ್ಷಿತ್ ಸಿನಿಮಾ ಮೆಚ್ಚಿದ ಸೂಪರ್ ಸ್ಟಾರ್ ರಜನಿಕಾಂತ್

Date:

ಸ್ಯಾಂಡಲ್‌ವುಡ್‌ನ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ನಟನೆಯ 777 ಚಾರ್ಲಿ ಸಿನಿಮಾ ಎಲ್ಲೆಡೆ ಭರ್ಜರಿ ಪ್ರದರ್ಶನ ಕಾಣುತ್ತಿದೆ.

ಚಾರ್ಲಿ ಸಿನಿಮಾಗೆ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕನ್ನಡ ಮಾತ್ರವಲ್ಲದೆ ಬೇರೆ ಬೇರೆ ಭಾಷೆಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಸ್ಯಾಂಡಲ್‌ವುಡ್ ಮಾತ್ರವಲ್ಲದೇ ಪರಭಾಷೆಯ ಗಣ್ಯರು ಚಾರ್ಲಿಯನ್ನು ಮೆಚ್ಚಿಕೊಂಡಿದ್ದಾರೆ. ಧರ್ಮ ಮತ್ತು ಚಾರ್ಲಿಯ ಭಾವನಾತ್ಮಕ ಕಥೆಗೆ ಪ್ರತಿಯೊಬ್ಬರಿಗೂ ಇಷ್ಟವಾಗಿದೆ.
ಈಗಾಗ್ಲೆ 777 ಚಾರ್ಲಿ ಸಿನಿಮಾವನ್ನ ಸಿಎಂ ಬಸವರಾಜ ಬೊಮ್ಮಾಯಿ, ಸಂಸದ ತೇಜಸ್ವಿ ಸೂರ್ಯ ಸೇರಿದಂತೆ ಸಾಕಷ್ಟು ಮಂದಿ ವೀಕ್ಷಿಸಿದ್ದು ಮೆಚ್ಚುಗೆ ಸೂಚಿಸಿದ್ದಾರೆ.ಈ ಸಿನಿಮಾಗೆ ಎಲ್ಲಾ ಕಡೆಯಿಂದ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಸೂಪರ್ ಸ್ಟಾರ್ ರಜನಿಕಾಂತ್ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ.

ಈ ಬಗ್ಗೆ ರಕ್ಷಿತ್ ಶೆಟ್ಟಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. 777 ಚಾರ್ಲಿ ವೀಕ್ಷಿಸಿದ ಬಳಿಕ ಸೂಪರ್ ಸ್ಟಾರ್ ರಜನಿಕಾಂತ್ ರಕ್ಷಿತ್ ಶೆಟ್ಟಿಗೆ ಕರೆ ಮಾಡಿದ್ದು, ಸಿನಿಮಾದ ಬಗ್ಗೆ ಹಾಡಿಹೊಗಳಿದ್ದಾರೆ.
‘ಇವತ್ತಿನ ದಿನದ ಆರಂಭ ಅದ್ಭುತವಾಗಿತ್ತು. ರಜಿನಿಕಾಂತ್ ಅವರಿಂದ ಫೋನ್ ಬಂದಿತ್ತು. ನಿನ್ನೆ ರಾತ್ರಿ ರಜನಿಕಾಂತ್ 777 ಚಾರ್ಲಿ ಸಿನಿಮಾ ವೀಕ್ಷಿಸಿದ್ದಾರೆ. ಸಿನಿಮಾದ ಅದ್ಭುತ ಮೆಕಿಂಗ್ ಗುಣಮಟ್ಟದ ಬಗ್ಗೆ, ಸಿನಿಮಾದ ಆಳವಾದ ವೀನ್ಯಾಸದ ಬಗ್ಗೆ ಹೆಚ್ಚು ಮಾತನಾಡಿದರು. ಮತ್ತು ಕ್ಲೈಮ್ಯಾಕ್ಸ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಕೊನೆಯಲ್ಲಿ ಆಧ್ಯಾತ್ಮಿಕ ಮಾತಿನ ಮೂಲಕ ಮುಗಿಸಿದರು. ಅಂತಹ ಮಾತುಗಳನ್ನು ಸೂಪರ್ ಸ್ಟಾರ್ ಅವರಿಂದನೇ ಕೇಳುವುದು ಅದ್ಭುತವಾಗಿತ್ತು. ಧನ್ಯವಾದಗಳು ರಜನಿ ಸರ್’ ಎಂದು ಟ್ವಿಟ್ಟರ್‌ನಲ್ಲಿ ರಕ್ಷಿತ್ ಶೆಟ್ಟಿ ಬರೆದುಕೊಂಡಿದ್ದಾರೆ.

ರಕ್ಷಿತ್ ಶೆಟ್ಟಿ ಟ್ವೀಟ್‌ಗೆ ಅಭಿಮಾನಿಗಳಿಂದ ಮೆಚ್ಚುಗೆ ಕೇಳಿ ಬಂದಿದೆ. ಇದಕ್ಕೂ ಮೊದಲು ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್-2 ಸಿನಿಮಾವನ್ನು ವೀಕ್ಷಿಸಿದ್ದ ರಜನಿಕಾಂತ್ ಸಿನಿಮಾವನ್ನ ಹಾಡಿಹೊಗಳಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ಜಾವಳ್ಳಿ ಬಳಿ ಭೀಕರ ಅಪಘಾತ: ಸಹ ಪ್ರಾಧ್ಯಾಪಕ ಸ್ಥಳದಲ್ಲೇ ದುರ್ಮರಣ.

Breaking News ಶಿವಮೊಗ್ಗ ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಜಾವಳ್ಳಿ ಸಮೀಪ ಇಟ್ಟಿಗೆ...

MESCOM ಗಮನಿಸಿ! ಮೇ20 ರಂದು ಕೂಡ್ಲಿ,ಚಿಕ್ಕೂಡ್ಲಿ, ಭದ್ರಾಪುರ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ.

MESCOM ಶಿವಮೊಗ್ಗದ ಎಂ.ಆರ್.ಎಸ್ 220/11 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿರುವ 66 ಕೆವಿ...

S.N. Channabasappa ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ.ಶಾಸಕ ಚನ್ನಬಸಪ್ಪ‌ ಭೇಟಿ- ನೊಂದವರಿಗೆ ಸಾಂತ್ವನ.

S.N. Channabasappa ನಗರದ ಮಿಳಘಟ್ಟದ 1ನೇ ಕ್ರಾಸ್‌ನಲ್ಲಿರುವ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ...