Thursday, March 26, 2026
Thursday, March 26, 2026

ಕಾಶಿಯಾತ್ರಿಕರ ಸುರಕ್ಷಿತ ವಾಪಸಾತಿ: ರಾಜ್ಯ ಸರ್ಕಾರದ ಸ್ತುತ್ಯರ್ಹ ಕ್ರಮ

Date:

ಉತ್ತರ ಭಾರತದ ಪ್ರಸಿದ್ಧ ಪುಣ್ಯಕ್ಷೇತ್ರಗಳಿಗೆ ತೆರಳಿದ್ದ ವೇಳೆ ಅಗ್ನಿಪಥ್‌ ವಿರುದ್ಧದ ಹೋರಾಟ ಹಿಂಸಾತ್ಮಕ ಸ್ವರೂಪ ಪಡೆದ ಪರಿಣಾಮ ದಿಕ್ಕೆಟ್ಟಿದ್ದ 164 ಮಂದಿ ರಾಜ್ಯದ ಪ್ರವಾಸಿಗರನ್ನು ಸುರಕ್ಷಿತವಾಗಿ ವಾಪಸು ಕರೆತರಲಾಗಿದೆ.

ರಾಮನಗರ ಮಂಡ್ಯ, ಸೇರಿದಂತೆ ವಿವಿಧ ಜಿಲ್ಲೆಗಳ 164 ಮಂದಿ, ಬೆಂಗಳೂರಿನ ಮಹಾಲಕ್ಷ್ಮೇ ಬಡಾವಣೆಯಲ್ಲಿರುವ ಸಚಿವ ಕೆ. ಗೋಪಾಲಯ್ಯ ಕಚೇರಿಗೆ ಆಗಮಿಸಿ ಅವರಿಗೆ ಕೃತಜ್ಞತೆ ಸಲ್ಲಿಸಿದರು.

ಗೋಪಾಲಯ್ಯ ಅವರು ಪ್ರವಾಸಿಗರ ಯೋಗಕ್ಷೇಮ ವಿಚಾರಿಸಿ ಬಸ್ಸು ವ್ಯವಸ್ಥೆ ಮಾಡಿ ಮನೆಗಳಿಗೆ ಕಳುಹಿಸಿಕೊಟ್ಟರು.
ಪ್ರವಾಸಿಗರು ಕಾಶಿಗೆ ತೆರಳಿದ್ದ ವೇಳೆ ಆ ಭಾಗದಲ್ಲಿ ಅಗ್ನಿಪಥ್‌ ವಿರುದ್ಧದ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದಿತ್ತು. ಹೀಗಾಗಿ ತಮ್ಮನ್ನು ಸುರಕ್ಷಿತವಾಗಿ ಕರೆ ತರುವಂತೆ ಪ್ರವಾಸಿಗರು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಅವರಿಗೆ ಮನವಿ ಮಾಡಿದ್ದರು ಎಂದು ತಿಳಿದುಬಂದಿದೆ.

ಗೋಪಾಲಯ್ಯ ಅವರು ಅಲ್ಲಿನ ಅಧಿಕಾರಿಗಳನ್ನು ಸಂಪರ್ಕಿಸಿ ಮೂರು ಪ್ರತ್ಯೇಕ ಬಸ್ಸುಗಳ ವ್ಯವಸ್ಥೆ ಮಾಡಿ ವಾಪಸು ಕರೆತಂದಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಗೋಪಾಲಯ್ಯ, ಪ್ರತಿಭಟನಾಕಾರರು ರೈಲುಗಳಿಗೆ ಬೆಂಕಿ ಹಚ್ಚುತ್ತಿದ್ದರಿಂದ ಪ್ರವಾಸಿಗರು ಅಲ್ಲಿಂದ ವಾಪಸು ಬರಲು ಆಗಿರಲಿಲ್ಲ. ಇವರೆಲ್ಲರೂ ರೈಲು ಪ್ರಯಾಣಕ್ಕಾಗಿ ತಲಾ 800 ರು. ಟಿಕೆಟ್‌ ಬುಕ್‌ ಮಾಡಿದ್ದರು. ಆದರೆ ಅನಿರೀಕ್ಷಿತ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಸಹಾಯ ಕೋರಿದ್ದರಿಂದ ಕೂಡಲೇ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಯಿತು ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Prabhuling Kavalikatti ಅಸ್ಪೃಶ್ಯತೆ ನಿರ್ಮೂಲನೆಗೆ ಒತ್ತು ಜೊತೆಗೆ ಕಾಯಿದೆಯಡಿ ಕಟ್ಟುನಿಟ್ಟಿನ ಕ್ರಮ- ಪ್ರಭುಲಿಂಗ ಕವಳಿಕಟ್ಟಿ.

Prabhuling Kavalikatti ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಮೇಲಿನ ದೌರ್ಜನ್ಯ ತಡೆ...

MESCOM ಮಾರ್ಚ್ 26. ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ.

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...

World Tuberculosis Day ಕ್ಷಯರೋಗಿಗಳು ದುಶ್ಚಟಗಳಿಂದ ದೂರವಿದ್ದು ,ಪೌಷ್ಠಿಕ ಆಹಾರ ಸೇವಿಸಿದರೆ ರೋಗ ವಾಸಿ- ಡಾ.ಕೆ.ಎಸ್.ನಟರಾಜ್.

World Tuberculosis Day ಸೂಕ್ತ ಚಿಕಿತ್ಸೆಯಿಂದ ಕ್ಷಯರೋಗದಿಂದ ಸಂಪೂರ್ಣರಾಗಿ ಗುಣಮುಖರಾಗಬಹುದಾಗಿದ್ದು, ಎಲ್ಲಾ...

Shimoga News ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ಬೆಳಿಸಿಕೊಳ್ಳಬೇಕು- ಎನ್.ಪ್ರಕಾಶ್

Shivamogga News ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಕೌಶಲ್ಯವನ್ನು ಹೆಚ್ಚಿಸಲು ಮತ್ತು ಉನ್ನತ...