Friday, February 6, 2026
Friday, February 6, 2026

ವಿವಿಧ ಚಟುವಟಿಕೆಯಲ್ಲಿ ಭಾಗಿಯಾದ ಸಾಗರದ ಶಾಸಕ ಹರತಾಳು ಹಾಲಪ್ಪ

Date:

ಸಾಗರದ ಜೋಸೆಫ್ ನಗರದಲ್ಲಿನ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ (ಆವಿನಹಳ್ಳಿ) ವಿದ್ಯಾರ್ಥಿಗಳು ಇತ್ತೀಚೆಗೆ ಮೂಲಭೂತ ಸೌಕರ್ಯ ಹಾಗೂ ಅಧಿಕಾರಿಗಳ ವಿರುದ್ಧ ಹಾಸ್ಟೇಲ್ ತೊರೆದು ತಡರಾತ್ರಿ ಪ್ರತಿಭಟನೆ ನೆಡೆಸಿದ್ದರು.

ಈ ಹಿನ್ನೆಲೆಯಲ್ಲಿ ಶಾಸಕರಾದ ಹರತಾಳು ಹಾಲಪ್ಪನವರು ಸದರಿ ವಸತಿ ಶಾಲೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಪ್ರಾಂಶುಪಾಲರು ಮತ್ತು ಸಿಬ್ಬಂದಿಗಳ ಸಭೆ ನೆಡೆಸಿ, ವಿದ್ಯಾರ್ಥಿಗಳ ಕುಂದುಕೊರತೆ ವಿಚಾರಿಸಿದರು.

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕರ್ತವ್ಯ ಲೋಪವೆಸಗಿದ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಮೇಲೆ ಕ್ರಮ ಜರುಗಿಸಲು ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದ್ದು, ಮುಂದೆ ಇಂತಹ ಘಟನೆಗಳು ಮರುಕಳಿಸಿದರೆ ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಜರುಗಿಸುವ ಬಗ್ಗೆ ಎಚ್ಚರಿಸಿದರು.

ಸಾಗರ, ಶಂಕರಮಠದಲ್ಲಿ ಆಯೋಜಿಸಿದ್ದ, 8 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿದರು.
ಸಾಗರ, ವಾರ್ಡ್ ನಂ 24 ರ ಜನ್ನತ್ ನಗರದಲ್ಲಿ ನೂತನ ಹೈಮಾಸ್ಟ್ ಬೀದಿ ದೀಪ ಉದ್ಘಾಟನೆಯನ್ನು ನೆರವೇರಿಸಿದರು.

ಸಾಗರದ ವಾರ್ಡ್ ನಂ 30 ರ ಎಸ್.ಎನ್ ನಗರದ ಆಶ್ರಮ ಶಾಲೆ ಹಿಂಭಾಗದಲ್ಲಿ ನೂತನ ಹೈಮಾಸ್ಟ್ ಬೀದಿ ದೀಪ ಉದ್ಘಾಟನೆಯನ್ನು ಮಾಡಿದರು.

ವಾರ್ಡ್ ನಂ 10 ರ ಇಂದಿರಾನಗರದ ಬೆಥನಿ ಶಾಲೆ ಹತ್ತಿರ ನೂತನ ಹೈಮಾಸ್ಟ್ ಬೀದಿ ದೀಪ ಉದ್ಘಾಟನೆ ಕಾರ್ಯಕ್ರಮ ನಡೆಸಿದರು.
ವಾರ್ಡ್ ನಂ 09 ರ ಲೋಹಿಯಾ ನಗರದಲ್ಲಿ ನೂತನ ಹೈಮಾಸ್ಟ್ ಬೀದಿ ದೀಪ ಉದ್ಘಾಟನೆ ಕಾರ್ಯಕ್ರಮದಲ್ಲೂ ಭಾಗಿಯಾದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Ambedkar Bhavan Shivamogga ಫೆಬ್ರವರಿ 14. ” ಹ್ಯಾಪಿ ಫೀಟ್- 2026″ ವಿಶೇಷ ನೃತ್ಯ ಪ್ರದರ್ಶನ

Ambedkar Bhavan Shivamogga ನೃತ್ಯಸಿರಿ ಡ್ಯಾನ್ಸ್ ಸ್ಟುಡಿಯೋ ವತಿಯಿಂದ “ಹ್ಯಾಪಿ ಫೀಟ್-2026”...

Dharmasthala Rural Development Project ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ವಾತ್ಸಲ್ಯ ಕಿಟ್ ವಿತರಣೆ

Dharmasthala Rural Development Project ಶಿವಮೊಗ್ಗ ತಾಲೂಕಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ...

ಕರವೇ ಜನಮನ ರಾಜ್ಯ ಸಂಘಟನೆಯ ಪದಾಧಿಕಾರಿಗಳ ಪ್ರಮಾಣವಚನ ಸ್ವೀಕಾರ

ಕನ್ನಡ ರಕ್ಷಣಾ ವೇದಿಕೆ ಜನಮನ ರಾಜ್ಯ ಸಂಘಟನೆಯ ಪದಾಧಿಕಾರಿಗಳ ಅಧಿಕಾರದ ಪ್ರಮಾಣ...