Wednesday, August 26, 2026
Wednesday, August 26, 2026

ವಿವಿಧ ಚಟುವಟಿಕೆಯಲ್ಲಿ ಭಾಗಿಯಾದ ಸಾಗರದ ಶಾಸಕ ಹರತಾಳು ಹಾಲಪ್ಪ

Date:

ಸಾಗರದ ಜೋಸೆಫ್ ನಗರದಲ್ಲಿನ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ (ಆವಿನಹಳ್ಳಿ) ವಿದ್ಯಾರ್ಥಿಗಳು ಇತ್ತೀಚೆಗೆ ಮೂಲಭೂತ ಸೌಕರ್ಯ ಹಾಗೂ ಅಧಿಕಾರಿಗಳ ವಿರುದ್ಧ ಹಾಸ್ಟೇಲ್ ತೊರೆದು ತಡರಾತ್ರಿ ಪ್ರತಿಭಟನೆ ನೆಡೆಸಿದ್ದರು.

ಈ ಹಿನ್ನೆಲೆಯಲ್ಲಿ ಶಾಸಕರಾದ ಹರತಾಳು ಹಾಲಪ್ಪನವರು ಸದರಿ ವಸತಿ ಶಾಲೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಪ್ರಾಂಶುಪಾಲರು ಮತ್ತು ಸಿಬ್ಬಂದಿಗಳ ಸಭೆ ನೆಡೆಸಿ, ವಿದ್ಯಾರ್ಥಿಗಳ ಕುಂದುಕೊರತೆ ವಿಚಾರಿಸಿದರು.

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕರ್ತವ್ಯ ಲೋಪವೆಸಗಿದ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಮೇಲೆ ಕ್ರಮ ಜರುಗಿಸಲು ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದ್ದು, ಮುಂದೆ ಇಂತಹ ಘಟನೆಗಳು ಮರುಕಳಿಸಿದರೆ ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಜರುಗಿಸುವ ಬಗ್ಗೆ ಎಚ್ಚರಿಸಿದರು.

ಸಾಗರ, ಶಂಕರಮಠದಲ್ಲಿ ಆಯೋಜಿಸಿದ್ದ, 8 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿದರು.
ಸಾಗರ, ವಾರ್ಡ್ ನಂ 24 ರ ಜನ್ನತ್ ನಗರದಲ್ಲಿ ನೂತನ ಹೈಮಾಸ್ಟ್ ಬೀದಿ ದೀಪ ಉದ್ಘಾಟನೆಯನ್ನು ನೆರವೇರಿಸಿದರು.

ಸಾಗರದ ವಾರ್ಡ್ ನಂ 30 ರ ಎಸ್.ಎನ್ ನಗರದ ಆಶ್ರಮ ಶಾಲೆ ಹಿಂಭಾಗದಲ್ಲಿ ನೂತನ ಹೈಮಾಸ್ಟ್ ಬೀದಿ ದೀಪ ಉದ್ಘಾಟನೆಯನ್ನು ಮಾಡಿದರು.

ವಾರ್ಡ್ ನಂ 10 ರ ಇಂದಿರಾನಗರದ ಬೆಥನಿ ಶಾಲೆ ಹತ್ತಿರ ನೂತನ ಹೈಮಾಸ್ಟ್ ಬೀದಿ ದೀಪ ಉದ್ಘಾಟನೆ ಕಾರ್ಯಕ್ರಮ ನಡೆಸಿದರು.
ವಾರ್ಡ್ ನಂ 09 ರ ಲೋಹಿಯಾ ನಗರದಲ್ಲಿ ನೂತನ ಹೈಮಾಸ್ಟ್ ಬೀದಿ ದೀಪ ಉದ್ಘಾಟನೆ ಕಾರ್ಯಕ್ರಮದಲ್ಲೂ ಭಾಗಿಯಾದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Club Shimoga ಇಂಟರಾಕ್ಟ್ ಕ್ಲಬ್ ಗಳು ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನಕ್ಕೆ ಅತ್ಯುತ್ತಮ ವೇದಿಕೆ: ಸುಮತಿ ಜಿ.ಕುಮಾರಸ್ವಾಮಿ

Rotary Club Shimoga ಇಂಟರಾಕ್ಟ್ ಕ್ಲಬ್‌ಗಳು ವಿದ್ಯಾರ್ಥಿಗಳಿಗೆ ಶಾಲಾ ಹಂತದಲ್ಲಿಯೇ ಸಾರ್ವಜನಿಕ...

S.N. Channabasappa ಮನುಷ್ಯ ಜೀವನದ ಭಾಗ.ಆ ಸಾಂಸ್ಕೃತಿಕ ಸೊಬಗು ಜೀವನದಲ್ಲಿ ಅಡಕವಾಗಿರಬೇಕು- ಎಸ್.ಎನ್.ಚನ್ನಬಸಪ್ಪ

S.N. Channabasappa ಮಾರ್ನಾಮಿಬೈಲು ಎನ್ನುವುದು ಒಂದು ಇತಿಹಾಸ ಪ್ರಸಿದ್ದತೆ ಪಡೆದಿದೆ, ನಗರದ...

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...