Wednesday, August 26, 2026
Wednesday, August 26, 2026

ಚೀನಾಗೆ ತಡವಾಗಿ ಮನವರಿಕೆ: ಕಾದಾಟದ ಬದಲು ಸಹಕಾರವಿರಲಿ-ವಾಂಗ್

Date:

ಭಾರತೀಯ ರಾಯಭಾರಿ ಪ್ರದೀಪ್ ಕುಮಾರ್ ರಾವತ್ ಅವರು ಚೀನಾ ವಿದೇಶಾಂಗ ಸಚಿವ ವಾಂಗ್ ಯಿ ಅವರನ್ನು ಬೀಜಿಂಗ್‌ನಲ್ಲಿ ಭೇಟಿಯಾದರು.

ಈ ಭೇಟಿಯ ಕುರಿತು ಚೀನಾ ವಿದೇಶಾಂಗ ಸಚಿವಾಲಯ ಹೇಳಿಕೆ ಬಿಡುಗಡೆ ಮಾಡಿದೆ.
14ನೇ ಬ್ರಿಕ್ಸ್ ಶೃಂಗಸಭೆಗೂ ಮುನ್ನ ಹಾಗೂ ಪೂರ್ವ ಲಡಾಖ್‌ನಲ್ಲಿ ಕಳೆದ ಎರಡು ವರ್ಷಗಳ ಮಿಲಿಟರಿ ಬಿಕ್ಕಟ್ಟಿನ ಬಗ್ಗೆ ಇಬ್ಬರೂ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಚೀನಾ ಮತ್ತು ಭಾರತದ ಸಾಮಾನ್ಯ ಹಿತಾಸಕ್ತಿಗಳು ಭಿನ್ನಾಭಿಪ್ರಾಯಗಳನ್ನು ಮೀರಿಸುತ್ತವೆ ಎಂದು ವಾಂಗ್ ಹೇಳಿದ್ದಾರೆ. ಎರಡೂ ಕಡೆಯವರು ಪರಸ್ಪರರ ವಿರುದ್ಧ ಕಾವಲು ಕಾಯುವ ಬದಲು ಸಹಕಾರವನ್ನು ಬಲಪಡಿಸಬೇಕು ಮತ್ತು ಸುಧಾರಿಸಬೇಕು. ಒಬ್ಬರನ್ನೊಬ್ಬರು ಅನುಮಾನಿಸುವ ಬದಲು ಪರಸ್ಪರ ನಂಬಿಕೆಯಿಂದ ಇರಬೇಕು ಎಂದಿದ್ದಾರೆ ಎಂದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.

ಕಳೆದ ಮಾರ್ಚ್‌ನಲ್ಲಿ ವಾಂಗ್ ಭಾರತಕ್ಕೆ ಭೇಟಿ ನೀಡಿದ್ದು, ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಜೊತೆ ಮಾತುಕತೆ ನಡೆಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Club Shimoga ಇಂಟರಾಕ್ಟ್ ಕ್ಲಬ್ ಗಳು ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನಕ್ಕೆ ಅತ್ಯುತ್ತಮ ವೇದಿಕೆ: ಸುಮತಿ ಜಿ.ಕುಮಾರಸ್ವಾಮಿ

Rotary Club Shimoga ಇಂಟರಾಕ್ಟ್ ಕ್ಲಬ್‌ಗಳು ವಿದ್ಯಾರ್ಥಿಗಳಿಗೆ ಶಾಲಾ ಹಂತದಲ್ಲಿಯೇ ಸಾರ್ವಜನಿಕ...

S.N. Channabasappa ಮನುಷ್ಯ ಜೀವನದ ಭಾಗ.ಆ ಸಾಂಸ್ಕೃತಿಕ ಸೊಬಗು ಜೀವನದಲ್ಲಿ ಅಡಕವಾಗಿರಬೇಕು- ಎಸ್.ಎನ್.ಚನ್ನಬಸಪ್ಪ

S.N. Channabasappa ಮಾರ್ನಾಮಿಬೈಲು ಎನ್ನುವುದು ಒಂದು ಇತಿಹಾಸ ಪ್ರಸಿದ್ದತೆ ಪಡೆದಿದೆ, ನಗರದ...

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...