Sunday, December 7, 2025
Sunday, December 7, 2025

ಸತತ ಇನ್ನು ತ್ರೈಮಾಸಿಕಗಳವರೆಗೆ ಹಣದುಬ್ಬರ ಇಳಿತ

Date:

ದೇಶದಲ್ಲಿ ಚಿಲ್ಲರೆ ಹಣದುಬ್ಬರ ಪ್ರಮಾಣವು ಸತತ ಮೂರು ತ್ರೈಮಾಸಿಕಗಳಲ್ಲಿ ಶೇಕಡ 6ಕ್ಕಿಂತ ಹೆಚ್ಚಿನ ಮಟ್ಟದಲ್ಲಿ ಇರುವ ಸಾಧ್ಯತೆ ಇದೆ ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌ನ (ಆರ್‌ಬಿಐ) ಡೆಪ್ಯುಟಿ ಗವರ್ನರ್ ಮೈಕೆಲ್‌ ಪಾತ್ರಾ ಹೇಳಿದ್ದಾರೆ.

ಹಣದುಬ್ಬರ ಪ್ರಮಾಣವು ಸತತ ಮೂರು ತ್ರೈಮಾಸಿಕಗಳವರೆಗೆ ಗರಿಷ್ಠ ಮಿತಿಗಿಂತ ಹೆಚ್ಚಿದ್ದರೆ, ಆರ್‌ಬಿಐ ಕೇಂದ್ರ ಸರ್ಕಾರಕ್ಕೆ ವರದಿಯೊಂದನ್ನು ಸಲ್ಲಿಸಬೇಕು ಎಂದು ಕಾಯ್ದೆ ಹೇಳುತ್ತದೆ. ಹಣದುಬ್ಬರವನ್ನು ನಿಯಂತ್ರಿಸಲು ಏಕೆ ಆಗಲಿಲ್ಲ ಎಂಬುದನ್ನು ಆರ್‌ಬಿಐ ಆ ವರದಿಯಲ್ಲಿ ಹೇಳಬೇಕಾಗುತ್ತದೆ. ಹಣದುಬ್ಬರವು ಸತತ ಮೂರು
ತ್ರೈಮಾಸಿಕಗಳವರೆಗೆ ಗರಿಷ್ಠ ಮಿತಿಗಿಂತ ಹೆಚ್ಚಿರುವ ಸಾಧ್ಯತೆ ಜಾಸ್ತಿ ಇದೆ’ ಎಂದು ಅವರು ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ.

ಏಪ್ರಿಲ್‌ ತಿಂಗಳಿನಲ್ಲಿ ಚಿಲ್ಲರೆ ಹಣದುಬ್ಬರ ಪ್ರಮಾಣವು ಶೇ 7.79ಕ್ಕೆ ತಲುಪಿತ್ತು. ಮೇ ತಿಂಗಳಿನಲ್ಲಿ ಅದು ತುಸು ಕಡಿಮೆ ಆಯಿತು. ಸತತ ಐದು ತಿಂಗಳುಗಳಿಂದ ಹಣದುಬ್ಬರವು ಶೇ 6ಕ್ಕಿಂತ ಹೆಚ್ಚಿನ ಮಟ್ಟದಲ್ಲಿದೆ.
ಜಾಗತಿಕ ಮಟ್ಟದಲ್ಲಿ ಹಣದ ಹರಿವಿನ ಮೇಲೆ ಕೈಗೊಂಡಿರುವ ಬಿಗಿ ಕ್ರಮಗಳಿಗೆ ಹೋಲಿಸಿದರೆ, ಆರ್‌ಬಿಐ ಇನ್ನು ಮುಂದೆ ಕೈಗೊಳ್ಳಲಿರುವ ಕ್ರಮಗಳು ಹೆಚ್ಚು ಸೌಮ್ಯವಾಗಿರಲಿವೆ ಎಂದು ಪಾತ್ರಾ ಅವರು ಅಭೌಪ್ರಾಯ ವ್ಯಕ್ತಪಡಿಸಿದ್ದಾರೆ.

ಹೆಚ್ಚಿನ ಹಣದುಬ್ಬರವು ರೂಪಾಯಿ ಮೌಲ್ಯದ ಮೇಲೆ ಕೂಡ ಕೆಟ್ಟ ಪರಿಣಾಮ ಬೀರಿದೆ. ರೂಪಾಯಿ ಮೌಲ್ಯವು ಅಮೆರಿಕದ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...