Sunday, December 7, 2025
Sunday, December 7, 2025

ಮಹಿಳೆಯರಿಗೆ ಸ್ವ ಉದ್ಯೋಗ ಆರಂಭಿಸಲು ಅರ್ಜಿ ಆಹ್ವಾನ

Date:

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನಲ್ಲಿ ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ ಸ್ವ-ಉದ್ಯೋಗ ಹಮ್ಮಿಕೊಳ್ಳಲು ಉದ್ಯೋಗಿನಿ, ಕಿರುಸಾಲ, ಚೇತನಾ, ಧನಶ್ರೀ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಯಡಿ ಅರ್ಹ ಮಹಿಳೆಯರು ಮತ್ತು ಸ್ತ್ರೀಶಕ್ತಿ ಗುಂಪುಗಳಿಗೆ ಬ್ಯಾಂಕ್ ಸಾಲ ಹಾಗೂ ನಿಗಮದ ಸಹಾಯಧನದೊಂದಿಗೆ ಸೌಲಭ್ಯ ನೀಡಲು ಅರ್ಹ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.

2022-23 ನೇ ಸಾಲಿನಲ್ಲಿ ಉದ್ಯೋಗಿನಿ ಯೋಜನೆಯಡಿ ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ ಸ್ವ-ಉದ್ಯೋಗ ಹಮ್ಮಿಕೊಳ್ಳಲು ಉದ್ಯೋಗಿನಿ ಯೋಜನೆಯಡಿ ವಿವಿಧ ಬ್ಯಾಂಕುಗಳ ಮೂಲಕ ಸಾಲ ಸೌಲಭ್ಯ ಪಡೆದು ಕೃಷಿ, ಹಾಗೂ ಕೃಷಿಯೇತರ ಚಟುವಟಿಕೆಗಳ(ಹಂದಿ ಸಾಕಾಣಿಕೆ, ಆಡು ಸಾಕಾಣಿಕೆ, ಕೋಳಿ ಸಾಕಾಣಿಕೆ, ನರ್ಸರಿ, ಬ್ಯೂಟಿಪಾರ್ಲರ್, ಟೈಲರಿಂಗ್, ವ್ಯಾಪಾರ, ಮತ್ತಿತರ) ಮೂಲಕ ಆರ್ಥಿಕ ಸ್ವಾವಲಂಬನೆ ಸಾಧಿಸಲು 18 ರಿಂದ 55 ವರ್ಷ ವಯೋಮಿತಿಗೆ ಒಳಪಟ್ಟು ಬಡತನ ರೇಖೆಯ ಒಳಪಡುವ ಪಡಿತರ ಚೀಟಿ ಹೊಂದಿದ ಮಹಿಳೆಯರಿಗೆ ಅವಕಾಶವಿದೆ.

18 ರಿಂದ 55 ವರ್ಷದೊಳಗಿನ ಮಹಿಳೆಯರಿಗೆ ಆಧ್ಯತೆ ನೀಡಲಾಗುವುದು. ಪರಿಶಿಷ್ಟ ಜಾತಿ/ ಪಂಗಡದ ಮಹಿಳೆಯರಿಗೆ ಘಟಕ ವೆಚ್ಚ 1 ಲಕ್ಷ ರೂ.ನಿಂದ 3 ಲಕ್ಷ ರೂ. ಹಾಗೂ ಶೇ.50 ಸಹಾಯಧನ ನೀಡಲಾಗುವುದು ಮತ್ತು ಕುಟುಂಬದ ವಾರ್ಷಿಕ ಆದಾಯ 2 ಲಕ್ಷ ರೂ.ಮೀರಬಾರದು.

ಜಾತಿ ಪ್ರಮಾಣ ಪತ್ರ, ಆದಾಯ ದೃಡೀಕರಣ ಪತ್ರ, ಚುನಾವಣಾ ಗುರುತಿನ ಚೀಟಿ. ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ಬಿಪಿಎಲ್ ಕಾರ್ಡ್, ಪಾಸ್ ಪೋರ್ಟ್ ಸೈಜ್ ಪೋಟೋ ಇರಬೇಕು.

ಕಿರುಸಾಲ ಯೋಜನೆಯಡಿ ಸ್ತ್ರೀಶಕ್ತಿ, ಸ್ವ-ಸಹಾಯ ಗುಂಪಿನ (ಇತರೆ ವರ್ಗ) ಸದಸ್ಯರುಗಳಿಗೆ ಆರ್ಥಿಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು ಪ್ರತಿ ಗುಂಪಿಗೆ 2 ಲಕ್ಷ ರೂ. ಬಡ್ಡಿ ರಹಿತ ಸಾಲವನ್ನಾಗಿ ನೀಡಲಾಗುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...