Sunday, May 24, 2026
Sunday, May 24, 2026

ರಷ್ಯಾದ ಬಲ ಕುಗ್ಗಿಸಲು ಜಿ 7 ಶೃಂಗಸಭೆಯಲ್ಲಿ ವಿಸ್ತೃತ ಯೋಜನೆ

Date:

ಕಳೆದ ನಾಲ್ಕು ತಿಂಗಳಿಂದ ಯೂಕ್ರೇನ್ ವಿರುದ್ಧ ಯುದ್ಧ ನಡೆಸುತ್ತಿರುವ ರಷ್ಯಾದ ಆರ್ಥಿಕತೆಗೆ ಪೆಟ್ಟು ನೀಡಲು ಜಗತ್ತಿನ ಏಳು ಶ್ರೀಮಂತ ದೇಶಗಳ ಕೂಟ ಜಿ7 ನಿರ್ಧರಿಸಿದ್ದು, ಅದಕ್ಕಾಗಿ ತಂತ್ರವನ್ನು ಹೆಣೆಯುತ್ತಿದೆ. ರಷ್ಯಾದಿಂದ ಆಮದು ಮಾಡಿಕೊಳ್ಳುವ ತೈಲದ ಪ್ರಮಾಣದ ಮೇಲೆ ಮಿತಿ ಹೇರುವುದು ಹಾಗೂ ಅದು ಆಮದು ಮಾಡಿಕೊಳ್ಳುವ ಸರಕುಗಳ ಮೇಲೆ ಸುಂಕ ಏರಿಸುವ ಮೂಲಕ ಅದರ ಆದಾಯದ ಬಲ ಕುಂದಿಸುವ ಬಗ್ಗೆ ಶೃಂಗ ಸಭೆಯಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಪ್ರಸ್ತಾಪಿಸಿದ್ದಾರೆ. ಇದಕ್ಕೆ ಬ್ರಿಟನ್ ಸಹಿತ ಹಲವು ದೇಶಗಳು ಅದಕ್ಕೆ ಬೆಂಬಲ ಸೂಚಿಸುವ ಸಾಧ್ಯತೆ ಇದೆ.

ರಷ್ಯಾದ ಸರಕುಗಳ ಮೇಲಿನ ಸುಂಕ ಹೆಚ್ಚಿಸುವುದು, ರಷ್ಯಾದ ನೂರಾರು ಅಧಿಕಾರಿಗಳ ಮೇಲೆ ನಿರ್ಬಂಧ ವಿಧಿಸುವುದು ಮುಂತಾದ ಕ್ರಮಗಳ ಮೂಲಕವೂ ಯೂಕ್ರೇನ್​ಗೆ ಬೆಂಬಲ ನೀಡುವ ಭಾಗವಾಗಿ ಈ ನಿರ್ಧಾರಕ್ಕೆ ಬರಲಾಗಿದೆ. ತೈಲ ಆಮದಿನ ಮಿತಿ ನಿಗದಿ ಪಡಿಸಿದರೆ ಅದರಿಂದ ರಷ್ಯಾದ ಆರ್ಥಿಕ ಪರಿಸ್ಥಿತಿ ಮೇಲೆ ಹೇಗೆ ಪರಿಣಾಮ ಬೀರಬಹುದು ಎಂಬ ವಿಸ್ತ್ರತವಾದ ಯೋಜನೆಯನ್ನು ಜಿ7 ರಾಷ್ಟ್ರಗಳ ಹಣಕಾಸು ಸಚಿವರು ಮುಂದಿನ ದಿನಗಳಲ್ಲಿ ರೂಪಿಸಲಿದ್ದಾರೆ. ರಷ್ಯಾದಿಂದ ತೈಲ ಆಮದು ಕಡಿತ ಮಾಡುವ ಜಿ 7 ಕೂಟದ ನಿರ್ಧಾರಕ್ಕೆ ಬದ್ಧವಾದರೆ ಭಾರತಕ್ಕೆ ನಷ್ಟವಾಗುವ ಸಂಭವವಿದೆ. ಯಾಕೆಂದರೆ, ಭಾರತದ ತೈಲ ಆಮದಿನಲ್ಲಿ ರಷ್ಯಾದ ಪಾಲೇ ಶೇ.10ರಷ್ಟಿದೆ. ಭಾರತ ಜಗತ್ತಿನ ಮೂರನೇ ಅತಿ ದೊಡ್ಡ ತೈಲ ಗ್ರಾಹಕ ದೇಶವಾಗಿದೆ. ಕಳೆದ 12 ತಿಂಗಳಲ್ಲಿ ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳುವ ಪ್ರಮಾಣ ಶೇ. 0.2ರಿಂದ 50 ಪಟ್ಟು ಹೆಚ್ಚಾಗಿದೆ ಎಂದು ಹಿರಿಯ ಸರ್ಕಾರಿ ಅಧಿಕಾರಿಗಳು ತಿಳಿಸಿದ್ದಾರೆ. ಮೇ ತಿಂಗಳಲ್ಲಿ ರಷ್ಯಾದಿಂದ 25 ಮಿಲಿಯ ಬ್ಯಾರೆಲ್ ತೈಲ ಆಮದು ಕೊಳ್ಳಲಾಗಿದೆ. ಪಾಶ್ಚಿಮಾತ್ಯ ದೇಶಗಳ ಒತ್ತಡವಿದ್ದರೂ ಭಾರತ ಹಾಗೂ ಚೀನಾ ದೇಶಗಳು ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳುವ ಪ್ರಮಾಣ ಗಣನೀಯವಾಗಿ ಹೆಚ್ಚಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿ ನ್ ಕೆಲ ದಿನಗಳ ಹಿಂದೆ ಹೇಳಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ತಾತ್ಕಾಲಿಕ ನೇರ ನೇಮಕಾತಿ ಮೂಲಕಖಾಯಂ ಶಿಕ್ಷಕರ ನೇಮಕಾತಿವರೆಗೆ ಅತಿಥಿ ಶಿಕ್ಷಕರ ನೇಮಕ

Shimoga News 2026-27ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು...

Klive Special Article ನೇಪಾಳದಲ್ಲಿ ಶೃಂಗೇರಿ ಜಗದ್ಗುರುಗಳು.

ವಿಶೇಷ ವರದಿ: ಪ್ರಭಾಕರ ಕಾರಂತ Klive Special Article ಜಗದ್ಗುರು ಶ್ರೀ ವಿಧುಶೇಖರ ಭಾರತೀ...

Eshwara Khandre ಶ್ರಾವ್ಯಾ ಸಾಗರ್ ನಿರ್ಮಾಣದ ಸಾಕ್ಷ್ಯಚಿತ್ರಕ್ಕೆ ಜೀವವೈವಿಧ್ಯ ಪ್ರಶಸ್ತಿ.

Eshwara Khandre ಕರ್ನಾಟಕ ಸರ್ಕಾರದ ಜೀವವೈವಿದ್ಯ ಮಂಡಳಿ ಕೊಡಮಾಡುವ ೨೦೨೫-೨೬ನೇ ಸಾಲಿನ...