Friday, March 14, 2025
Friday, March 14, 2025

ರಷ್ಯಾದ ಬಲ ಕುಗ್ಗಿಸಲು ಜಿ 7 ಶೃಂಗಸಭೆಯಲ್ಲಿ ವಿಸ್ತೃತ ಯೋಜನೆ

Date:

ಕಳೆದ ನಾಲ್ಕು ತಿಂಗಳಿಂದ ಯೂಕ್ರೇನ್ ವಿರುದ್ಧ ಯುದ್ಧ ನಡೆಸುತ್ತಿರುವ ರಷ್ಯಾದ ಆರ್ಥಿಕತೆಗೆ ಪೆಟ್ಟು ನೀಡಲು ಜಗತ್ತಿನ ಏಳು ಶ್ರೀಮಂತ ದೇಶಗಳ ಕೂಟ ಜಿ7 ನಿರ್ಧರಿಸಿದ್ದು, ಅದಕ್ಕಾಗಿ ತಂತ್ರವನ್ನು ಹೆಣೆಯುತ್ತಿದೆ. ರಷ್ಯಾದಿಂದ ಆಮದು ಮಾಡಿಕೊಳ್ಳುವ ತೈಲದ ಪ್ರಮಾಣದ ಮೇಲೆ ಮಿತಿ ಹೇರುವುದು ಹಾಗೂ ಅದು ಆಮದು ಮಾಡಿಕೊಳ್ಳುವ ಸರಕುಗಳ ಮೇಲೆ ಸುಂಕ ಏರಿಸುವ ಮೂಲಕ ಅದರ ಆದಾಯದ ಬಲ ಕುಂದಿಸುವ ಬಗ್ಗೆ ಶೃಂಗ ಸಭೆಯಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಪ್ರಸ್ತಾಪಿಸಿದ್ದಾರೆ. ಇದಕ್ಕೆ ಬ್ರಿಟನ್ ಸಹಿತ ಹಲವು ದೇಶಗಳು ಅದಕ್ಕೆ ಬೆಂಬಲ ಸೂಚಿಸುವ ಸಾಧ್ಯತೆ ಇದೆ.

ರಷ್ಯಾದ ಸರಕುಗಳ ಮೇಲಿನ ಸುಂಕ ಹೆಚ್ಚಿಸುವುದು, ರಷ್ಯಾದ ನೂರಾರು ಅಧಿಕಾರಿಗಳ ಮೇಲೆ ನಿರ್ಬಂಧ ವಿಧಿಸುವುದು ಮುಂತಾದ ಕ್ರಮಗಳ ಮೂಲಕವೂ ಯೂಕ್ರೇನ್​ಗೆ ಬೆಂಬಲ ನೀಡುವ ಭಾಗವಾಗಿ ಈ ನಿರ್ಧಾರಕ್ಕೆ ಬರಲಾಗಿದೆ. ತೈಲ ಆಮದಿನ ಮಿತಿ ನಿಗದಿ ಪಡಿಸಿದರೆ ಅದರಿಂದ ರಷ್ಯಾದ ಆರ್ಥಿಕ ಪರಿಸ್ಥಿತಿ ಮೇಲೆ ಹೇಗೆ ಪರಿಣಾಮ ಬೀರಬಹುದು ಎಂಬ ವಿಸ್ತ್ರತವಾದ ಯೋಜನೆಯನ್ನು ಜಿ7 ರಾಷ್ಟ್ರಗಳ ಹಣಕಾಸು ಸಚಿವರು ಮುಂದಿನ ದಿನಗಳಲ್ಲಿ ರೂಪಿಸಲಿದ್ದಾರೆ. ರಷ್ಯಾದಿಂದ ತೈಲ ಆಮದು ಕಡಿತ ಮಾಡುವ ಜಿ 7 ಕೂಟದ ನಿರ್ಧಾರಕ್ಕೆ ಬದ್ಧವಾದರೆ ಭಾರತಕ್ಕೆ ನಷ್ಟವಾಗುವ ಸಂಭವವಿದೆ. ಯಾಕೆಂದರೆ, ಭಾರತದ ತೈಲ ಆಮದಿನಲ್ಲಿ ರಷ್ಯಾದ ಪಾಲೇ ಶೇ.10ರಷ್ಟಿದೆ. ಭಾರತ ಜಗತ್ತಿನ ಮೂರನೇ ಅತಿ ದೊಡ್ಡ ತೈಲ ಗ್ರಾಹಕ ದೇಶವಾಗಿದೆ. ಕಳೆದ 12 ತಿಂಗಳಲ್ಲಿ ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳುವ ಪ್ರಮಾಣ ಶೇ. 0.2ರಿಂದ 50 ಪಟ್ಟು ಹೆಚ್ಚಾಗಿದೆ ಎಂದು ಹಿರಿಯ ಸರ್ಕಾರಿ ಅಧಿಕಾರಿಗಳು ತಿಳಿಸಿದ್ದಾರೆ. ಮೇ ತಿಂಗಳಲ್ಲಿ ರಷ್ಯಾದಿಂದ 25 ಮಿಲಿಯ ಬ್ಯಾರೆಲ್ ತೈಲ ಆಮದು ಕೊಳ್ಳಲಾಗಿದೆ. ಪಾಶ್ಚಿಮಾತ್ಯ ದೇಶಗಳ ಒತ್ತಡವಿದ್ದರೂ ಭಾರತ ಹಾಗೂ ಚೀನಾ ದೇಶಗಳು ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳುವ ಪ್ರಮಾಣ ಗಣನೀಯವಾಗಿ ಹೆಚ್ಚಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿ ನ್ ಕೆಲ ದಿನಗಳ ಹಿಂದೆ ಹೇಳಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Legislative Council ಇಡೀ ರಾಷ್ಟ್ರವೇ ಮೆಚ್ಚುವ ‌ಕಾನೂನು ಶಿಕ್ಷಣ ಸಿಗಲಿ- ಮಾಜಿ ನ್ಯಾ.ಎಂ.ಎನ್.ವೆಂಕಟಾಚಲಯ್ಯ

Karnataka Legislative Council ಪ್ರವಾಹೋಪಾದಿಯಲ್ಲಿ ಸಾಧನೆ ಮಾಡುವ ಹಂಬಲ ಉಳ್ಳವರನ್ನು ತಡೆಯಲು...

District Consumer Disputes Redressal Commission ರೆಫ್ರಿಜಿರೇಟರ್ ಸೇವಾನ್ಯೂನತೆ. ಜಿಲ್ಲಾ ವ್ಯಾಜ್ಯ ಪರಿಹಾರ ಆಯೋಗದಿಂದ ಗ್ರಾಹಕರಿಗೆ ಸಿಕ್ಕಿತು ನ್ಯಾಯ

District Consumer Disputes Redressal Commission ದೂರುದಾರರಾದ ಎಸ್.ವಿ.ಲೋಹಿತಾಶ್ವ ಇವರು ಎದುರುದಾರರಾದ...

Senior Chamber International Organization ಪುಷ್ಪ ಎಸ್ ಶೆಟ್ಟಿಅವರಿಗೆ ‌ಸೀನಿಯರ್ ಚೇಂಬರ್ ಉನ್ನತ ಪ್ರಶಸ್ತಿ

Senior Chamber International Organization ಬ್ರಹ್ಮಾವರದಲ್ಲಿ ನಡೆದ ಸೀನಿಯರ್ ಚೇಂಬರ್ ಇಂಟರ್...

State Film Awards 2020 ನೇ ಸಾಲಿನ ಚಲನಚಿತ್ರ ಪ್ರಶಸ್ತಿ ಘೋಷಣೆ

State Film Awards 2020ನೇ ಸಾಲಿನ ಆಯ್ಕೆ ಸಮಿತಿಯು ಸಲ್ಲಿಸಿರುವ ವರದಿಯಲ್ಲಿ...