Thursday, February 5, 2026
Thursday, February 5, 2026

ವಿದ್ಯುತ್ ದರ ಏರಿಸಿ ರಾಜ್ಯದ ಜನತೆಗೆ ಶಾಕ್ ನೀಡಿದ ಸರ್ಕಾರ?

Date:

ದಿನಸಿ, ತರಕಾರಿ, ಅಡುಗೆ ಎಣ್ಣೆ, ಗ್ಯಾಸ್ , ಅಕ್ಕಿ , ಪೆಟ್ರೋಲ್, ಡೀಸೆಲ್, ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ ಜನರಿಗೆ ಜುಲೈ 1 ರಿಂದ ಮತ್ತೊಂದು ಹೊಡೆತ ಬೀಳಲಿದೆ.
ಜುಲೈ 1 ರಿಂದ ಪ್ರತಿ ತಿಂಗಳ ವಿದ್ಯುತ್ ದರ ಮತ್ತಷ್ಟು ಏರಿಕೆಯಾಗಲಿದೆ.

ಮಾಸಿಕ 100 ಯೂನಿಟ್ ವಿದ್ಯುತ್ ಬಳಸುವ ಗ್ರಾಹಕರು ಹೆಚ್ಚುವರಿಯಾಗಿ 19 ರಿಂದ 31 ರೂಪಾಯಿ ಪಾವತಿಸಬೇಕಿದೆ. ವಿದ್ಯುತ್ ವಿತರಣಾ ಕಂಪನಿಗಳ ಮೇಲೆ ಈ ದರ ಪರಿಷ್ಕರಣೆ ಅವಲಂಬಿತವಾಗಿರುತ್ತದೆ.
ಕಲ್ಲಿದ್ದಲು ದರ ಏರಿಕೆಯಾಗಿದ್ದು, ಇದರ ವೆಚ್ಚವನ್ನು ಗ್ರಾಹಕರಿಂದ ಭರಿಸಲು ಅವಕಾಶ ಕಲ್ಪಿಸುವಂತೆ ಎಸ್ಕಾಂಗಳಿಂದ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.

ಇಂಧನ ವೆಚ್ಚ ಹೊಂದಾಣಿಕೆ ಶುಲ್ಕ ಪ್ರತಿ ಯೂನಿಟ್ ಗೆ 38 ರಿಂದ 55 ರೂಪಾಯಿ ವಸೂಲಿ ಮಾಡಲು ಎಸ್ಕಾಂಗಳು ಕೋರಿವೆ.
ಈ ಪ್ರಸ್ತಾವನೆಗೆ ವಿದ್ಯುತ್ ನಿಯಂತ್ರಣ ಆಯೋಗ ಅನುಮೋದನೆ ನೀಡಿದ್ದರೂ, ಎಸ್ಕಾಂಗಳು ನಿಗದಿಪಡಿಸಿದ್ದ ದುಬಾರಿ ದರ ಕಡಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

ಗ್ರಾಹಕರಿಗೆ ದುಬಾರಿ ದರದಿಂದ ಹೊರೆಯಾಗುವ ಕಾರಣಕ್ಕೆ ಎಸ್ಕಾಂಗಳು ನಿಗದಿಪಡಿಸಿದ ದರ ಕಡಿತಗೊಳಿಸಲಾಗಿದೆ.
2022ರ ಜುಲೈ 1 ರಿಂದ ಡಿಸೆಂಬರ್ 31 ರವರೆಗೆ ಆರು ತಿಂಗಳ ಅವಧಿಗೆ ಇಂಧನ ವೆಚ್ಚ ಹೊಂದಾಣಿಕೆ ಶುಲ್ಕ ವಸೂಲು ಮಾಡುವ ಅವಕಾಶವನ್ನು ಕಲ್ಪಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಜುಲೈ 1 ರಿಂದ ಪ್ರತಿ ತಿಂಗಳ ವಿದ್ಯುತ್ ದರ ಮತ್ತಷ್ಟು ಹೆಚ್ಚಳವಾಗಲಿದೆ.
ಕಲ್ಲಿದ್ದಲು ಪೂರೈಕೆಯಲ್ಲಿ ಸಮಸ್ಯೆಯಾಗಿದ್ದರಿಂದ ಈ ಕ್ರಮ ಕೈಗೊಂಡಿದ್ದು, ಮತ್ತೆ ದರಗಳು ಯಥಾಸ್ಥಿತಿಗೆ ಬರಲಿವೆ ಎಂದು ಹೇಳಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...