Wednesday, August 26, 2026
Wednesday, August 26, 2026

ಕೊರೋನ ಹೆಚ್ಚಳ ಬೆಂಗಳೂರಿಗೆ ವಿಶೇಷ ಮಾರ್ಗಸೂಚಿ

Date:

ರಾಜ್ಯದಲ್ಲಿ ದಿನೇದಿನೆ ಕೊರೊನಾ ಪ್ರಕರಣ ಹೆಚ್ಚಳವಾಗುತ್ತಿದೆ.

ಈ ಹಿನ್ನೆಲೆ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಮಾರ್ಗಸೂಚಿಯಲ್ಲಿ ಬೆಂಗಳೂರು ನಗರ ಹಾಗೂ ಜಿಲ್ಲಾ ವ್ಯಾಪ್ತಿಯ ಸರ್ಕಾರಿ, ಖಾಸಗಿ ಕಛೇರಿ ಹಾಗೂ ಶಾಲಾ ಕಾಲೇಜುಗಳಿಗೆ ಹೊಸ ಮಾರ್ಗಸೂಚಿಯನ್ನು ಅನುಸರಿಸುವಂತೆ ತಿಳಿಸಿದೆ.

ಕೊವಿಡ್ ತಾಂತ್ರಿಕ ಸಲಹಾ ಸಮಿತಿಯ ಸಲಹೆ ಹಿನ್ನಲೆ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದೆ.
ಮಾರ್ಗಸೂಚಿಯಲ್ಲಿ ಒಳಗೊಂಡಿರುವ ಅಂಶಗಳು ಹೀಗಿವೆ.

ಶೀತ, ಕೆಮ್ಮು, ಜ್ವರ ಇದ್ದರೆ ಮಕ್ಕಳಿಗೆ ಕಡ್ಡಾಯವಾಗಿ ರಜೆ ನೀಡಬೇಕು.

ಶಾಲೆಗಳಲ್ಲಿ ಕೋವಿಡ್ ಲಕ್ಷಣಗಳಿದ್ದರೆ ರಜೆ ನೀಡಬೇಕು.

ಮಕ್ಕಳು ಜ್ವರ, ಶೀತ, ಕಡಿಮೆ ಆಗುವ ತನಕ ಶಾಲೆಗೆ ಬರುವುದು ಬೇಡ ಎಂದು ಆರೋಗ್ಯ ಇಲಾಖೆ ಸೂಚಿಸಿದೆ.

ಒಂದು ವೇಳೆ ಸೋಂಕು ದೃಢಪಟ್ಟರೆ ಶಾಲಾ ಕೊಠಡಿಯನ್ನ ಸ್ಯಾನಿಟೈಸ್ ಮಾಡಬೇಕು.

ಕೊರೋನಾ ಸೋಂಕು ದೃಢಪಟ್ಟಿರುವುದು ಶಾಲೆಗಳು ಮುಚ್ಚಿಡುವಂತಿಲ್ಲ.

ಒಂದು ವೇಳೆ ಆ ರೀತಿ ಮಾಡಿದರೆ ಶಾಲೆ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ‌ಇಲಾಖೆ ಆಯುಕ್ತ ಡಾ. ಡಿ. ರಂದೀಪ್ ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...