Friday, March 14, 2025
Friday, March 14, 2025

ಜಿಎಸ್ ಟಿ ಸಮಿತಿಯು ಮೆಚ್ಚಿದ ಬೊಮ್ಮಾಯಿ ಅವರ ವರದಿ

Date:

ಕೆಳಮುಖ ತೆರಿಗೆ ರಚನೆಯಲ್ಲಿ ತಿದ್ದುಪಡಿ ಮತ್ತು ತೆರಿಗೆ ವಿನಾಯಿತಿಗಳನ್ನು ಕಡಿಮೆ ಮಾಡುವ ಶಿಫಾರಸುಗಳನ್ನು ಒಳಗೊಂಡ ಮಧ್ಯಂತರ ವರದಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯ ಸಚಿವರ ಸಮಿತಿಯು ಚಂಡೀಗಢದಲ್ಲಿ ನಡೆದ ಜಿಎಸ್‌ಟಿ ಕೌನ್ಸಿಲ್‌ ಸಭೆಯಲ್ಲಿ ಮಂಡಿಸಿದೆ. ಈ ಕಾರ್ಯಕ್ಕೆ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ.

ಬಸವರಾಜ ಬೊಮ್ಮಾಯಿ ಅವರು ಸಮಿತಿಯ ಅಧ್ಯಕ್ಷರಾಗಿದ್ದು, ಪಶ್ಚಿಮ ಬಂಗಾಳ, ಬಿಹಾರ, ಕೇರಳ, ರಾಜಸ್ತಾನ, ಉತ್ತರಪ್ರದೇಶ ಮತ್ತು ಗೋವಾ ರಾಜ್ಯಗಳ ಹಣಕಾಸು ಸಚಿವರು ಸದಸ್ಯರಾಗಿದ್ದಾರೆ.

ಕೌನ್ಸಿಲ್‌ ಸಭೆಯಲ್ಲಿ ಸಚಿವರ ಸಮಿತಿಯು ತೆರಿಗೆ ದರಗಳಲ್ಲಿನ ಪರಾಮರ್ಶೆಗೆ ಸಂಬಂಧಿಸಿದಂತೆ ಮಧ್ಯಂತರ ವರದಿಯನ್ನು ಸಲ್ಲಿಸಲಾಗಿದೆ. ಕೆಳಮುಖ ತೆರಿಗೆ ರಚನೆಯಲ್ಲಿ ತಿದ್ದುಪಡಿ, ತೆರಿಗೆ ವಿನಾಯಿತಿಯನ್ನು ಕಡಿಮೆ ಮಾಡುವಂತಹ ಎರಡು ಒತ್ತಾಯದ ಶಿಫಾರಸುಗಳನ್ನು ಒಳಗೊಂಡ ಮಧ್ಯಂತರ ವರದಿಯನ್ನು ಬಸವರಾಜ ಬೊಮ್ಮಾಯಿ ಅವರು ಜಿಎಸ್‌ಟಿ ಕೌನ್ಸಿಲ್‌ ಮುಂದೆ ಮಂಡಿಸಿದರು.

ಸಚಿವರ ಸಮಿತಿಯು ತನ್ನ ವರದಿಯಲ್ಲಿ ಮಂಡಿಸಿರುವ ವಿವರವಾದ ವಿಶ್ಲೇಷಣೆ ಕುರಿತು ಕೌನ್ಸಿಲ್‌ನ ಸದಸ್ಯರು ಪ್ರಶಂಸೆ ವ್ಯಕ್ತಪಡಿಸಿದರು.
ಸಮಿತಿಯ ಸಂಚಾಲಕರ ಪರಿಶ್ರಮವನ್ನು ಶ್ಲಾಘಿಸಿದ ದೆಹಲಿಯ ಸದಸ್ಯ ಮನೀಶ್‌ ಸಿಸೋಡಿಯಾ ಅವರು, ವರದಿಯಲ್ಲಿನ ಅಂಶಗಳ ವಿವರಗಳನ್ನು ಚರ್ಚಿಸದೆ, ವರದಿಯನ್ನು ಯಥಾವತ್ತಾಗಿ ಅಳವಡಿಸಬೇಕು ಎಂದು ಶಿಫಾರಸ್ಸು ಮಾಡಿದರು.

ಸಮತೋಲನದ ದೃಷ್ಟಿಕೋನವನ್ನು ಪ್ರದರ್ಶಿಸುತ್ತ ಗ್ರಾಹಕರ ಸೂಕ್ಷ್ಮತೆಗಳಿಗೆ ಸಂವೇದಿಸುವ ವರದಿಯನ್ನು ಕರ್ನಾಟಕ ಮುಖ್ಯಮಂತ್ರಿಗಳ ನೇತೃತ್ವದ ಸಚಿವರ ಸಮಿತಿಯು ಹೊರತಂದಿರುತ್ತದೆ ಎಂದು ಉತ್ತರಪ್ರದೇಶ ಮತ್ತು ಬಿಹಾರ ರಾಜ್ಯಗಳ ಸದಸ್ಯರು ಹೇಳಿದರು.

ಅಪರೂಪದ ನಡೆಯಲ್ಲಿ ಪ್ರತ್ಯೇಕ ಅಂಶಗಳನ್ನು ಚರ್ಚಿಸದೆ ಸಚಿವರ ಸಮಿತಿಯ ಈ ವರದಿಯನ್ನು ಸಂಪೂರ್ಣವಾಗಿ ಜಿಎಸ್‌ಟಿ ಕೌನ್ಸಿಲ್‌ ಸರ್ವಾನುಮತದಿಂದ ಅಂಗೀಕರಿಸಿತು. ವರದಿಯ ಸಿದ್ದಪಡಿಸುವಲ್ಲಿ ಮುಖ್ಯವಾದ ಮತ್ತು ಪ್ರಸ್ತುತವಾದ ಅಂಶಗಳನ್ನು ಒದಗಿಸಿದಕ್ಕಾಗಿ ಎಲ್ಲಾ ರಾಜ್ಯಗಳ ಸದಸ್ಯರುಗಳಿಗೆ ಮುಖ್ಯಮಂತ್ರಿ ಬೊಮ್ಮಾಯಿ ಕೃತಜ್ಞತೆ ಸಲ್ಲಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Legislative Council ಇಡೀ ರಾಷ್ಟ್ರವೇ ಮೆಚ್ಚುವ ‌ಕಾನೂನು ಶಿಕ್ಷಣ ಸಿಗಲಿ- ಮಾಜಿ ನ್ಯಾ.ಎಂ.ಎನ್.ವೆಂಕಟಾಚಲಯ್ಯ

Karnataka Legislative Council ಪ್ರವಾಹೋಪಾದಿಯಲ್ಲಿ ಸಾಧನೆ ಮಾಡುವ ಹಂಬಲ ಉಳ್ಳವರನ್ನು ತಡೆಯಲು...

District Consumer Disputes Redressal Commission ರೆಫ್ರಿಜಿರೇಟರ್ ಸೇವಾನ್ಯೂನತೆ. ಜಿಲ್ಲಾ ವ್ಯಾಜ್ಯ ಪರಿಹಾರ ಆಯೋಗದಿಂದ ಗ್ರಾಹಕರಿಗೆ ಸಿಕ್ಕಿತು ನ್ಯಾಯ

District Consumer Disputes Redressal Commission ದೂರುದಾರರಾದ ಎಸ್.ವಿ.ಲೋಹಿತಾಶ್ವ ಇವರು ಎದುರುದಾರರಾದ...

Senior Chamber International Organization ಪುಷ್ಪ ಎಸ್ ಶೆಟ್ಟಿಅವರಿಗೆ ‌ಸೀನಿಯರ್ ಚೇಂಬರ್ ಉನ್ನತ ಪ್ರಶಸ್ತಿ

Senior Chamber International Organization ಬ್ರಹ್ಮಾವರದಲ್ಲಿ ನಡೆದ ಸೀನಿಯರ್ ಚೇಂಬರ್ ಇಂಟರ್...

State Film Awards 2020 ನೇ ಸಾಲಿನ ಚಲನಚಿತ್ರ ಪ್ರಶಸ್ತಿ ಘೋಷಣೆ

State Film Awards 2020ನೇ ಸಾಲಿನ ಆಯ್ಕೆ ಸಮಿತಿಯು ಸಲ್ಲಿಸಿರುವ ವರದಿಯಲ್ಲಿ...