Sunday, May 24, 2026
Sunday, May 24, 2026

ಜಿಎಸ್ ಟಿ ಸಮಿತಿಯು ಮೆಚ್ಚಿದ ಬೊಮ್ಮಾಯಿ ಅವರ ವರದಿ

Date:

ಕೆಳಮುಖ ತೆರಿಗೆ ರಚನೆಯಲ್ಲಿ ತಿದ್ದುಪಡಿ ಮತ್ತು ತೆರಿಗೆ ವಿನಾಯಿತಿಗಳನ್ನು ಕಡಿಮೆ ಮಾಡುವ ಶಿಫಾರಸುಗಳನ್ನು ಒಳಗೊಂಡ ಮಧ್ಯಂತರ ವರದಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯ ಸಚಿವರ ಸಮಿತಿಯು ಚಂಡೀಗಢದಲ್ಲಿ ನಡೆದ ಜಿಎಸ್‌ಟಿ ಕೌನ್ಸಿಲ್‌ ಸಭೆಯಲ್ಲಿ ಮಂಡಿಸಿದೆ. ಈ ಕಾರ್ಯಕ್ಕೆ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ.

ಬಸವರಾಜ ಬೊಮ್ಮಾಯಿ ಅವರು ಸಮಿತಿಯ ಅಧ್ಯಕ್ಷರಾಗಿದ್ದು, ಪಶ್ಚಿಮ ಬಂಗಾಳ, ಬಿಹಾರ, ಕೇರಳ, ರಾಜಸ್ತಾನ, ಉತ್ತರಪ್ರದೇಶ ಮತ್ತು ಗೋವಾ ರಾಜ್ಯಗಳ ಹಣಕಾಸು ಸಚಿವರು ಸದಸ್ಯರಾಗಿದ್ದಾರೆ.

ಕೌನ್ಸಿಲ್‌ ಸಭೆಯಲ್ಲಿ ಸಚಿವರ ಸಮಿತಿಯು ತೆರಿಗೆ ದರಗಳಲ್ಲಿನ ಪರಾಮರ್ಶೆಗೆ ಸಂಬಂಧಿಸಿದಂತೆ ಮಧ್ಯಂತರ ವರದಿಯನ್ನು ಸಲ್ಲಿಸಲಾಗಿದೆ. ಕೆಳಮುಖ ತೆರಿಗೆ ರಚನೆಯಲ್ಲಿ ತಿದ್ದುಪಡಿ, ತೆರಿಗೆ ವಿನಾಯಿತಿಯನ್ನು ಕಡಿಮೆ ಮಾಡುವಂತಹ ಎರಡು ಒತ್ತಾಯದ ಶಿಫಾರಸುಗಳನ್ನು ಒಳಗೊಂಡ ಮಧ್ಯಂತರ ವರದಿಯನ್ನು ಬಸವರಾಜ ಬೊಮ್ಮಾಯಿ ಅವರು ಜಿಎಸ್‌ಟಿ ಕೌನ್ಸಿಲ್‌ ಮುಂದೆ ಮಂಡಿಸಿದರು.

ಸಚಿವರ ಸಮಿತಿಯು ತನ್ನ ವರದಿಯಲ್ಲಿ ಮಂಡಿಸಿರುವ ವಿವರವಾದ ವಿಶ್ಲೇಷಣೆ ಕುರಿತು ಕೌನ್ಸಿಲ್‌ನ ಸದಸ್ಯರು ಪ್ರಶಂಸೆ ವ್ಯಕ್ತಪಡಿಸಿದರು.
ಸಮಿತಿಯ ಸಂಚಾಲಕರ ಪರಿಶ್ರಮವನ್ನು ಶ್ಲಾಘಿಸಿದ ದೆಹಲಿಯ ಸದಸ್ಯ ಮನೀಶ್‌ ಸಿಸೋಡಿಯಾ ಅವರು, ವರದಿಯಲ್ಲಿನ ಅಂಶಗಳ ವಿವರಗಳನ್ನು ಚರ್ಚಿಸದೆ, ವರದಿಯನ್ನು ಯಥಾವತ್ತಾಗಿ ಅಳವಡಿಸಬೇಕು ಎಂದು ಶಿಫಾರಸ್ಸು ಮಾಡಿದರು.

ಸಮತೋಲನದ ದೃಷ್ಟಿಕೋನವನ್ನು ಪ್ರದರ್ಶಿಸುತ್ತ ಗ್ರಾಹಕರ ಸೂಕ್ಷ್ಮತೆಗಳಿಗೆ ಸಂವೇದಿಸುವ ವರದಿಯನ್ನು ಕರ್ನಾಟಕ ಮುಖ್ಯಮಂತ್ರಿಗಳ ನೇತೃತ್ವದ ಸಚಿವರ ಸಮಿತಿಯು ಹೊರತಂದಿರುತ್ತದೆ ಎಂದು ಉತ್ತರಪ್ರದೇಶ ಮತ್ತು ಬಿಹಾರ ರಾಜ್ಯಗಳ ಸದಸ್ಯರು ಹೇಳಿದರು.

ಅಪರೂಪದ ನಡೆಯಲ್ಲಿ ಪ್ರತ್ಯೇಕ ಅಂಶಗಳನ್ನು ಚರ್ಚಿಸದೆ ಸಚಿವರ ಸಮಿತಿಯ ಈ ವರದಿಯನ್ನು ಸಂಪೂರ್ಣವಾಗಿ ಜಿಎಸ್‌ಟಿ ಕೌನ್ಸಿಲ್‌ ಸರ್ವಾನುಮತದಿಂದ ಅಂಗೀಕರಿಸಿತು. ವರದಿಯ ಸಿದ್ದಪಡಿಸುವಲ್ಲಿ ಮುಖ್ಯವಾದ ಮತ್ತು ಪ್ರಸ್ತುತವಾದ ಅಂಶಗಳನ್ನು ಒದಗಿಸಿದಕ್ಕಾಗಿ ಎಲ್ಲಾ ರಾಜ್ಯಗಳ ಸದಸ್ಯರುಗಳಿಗೆ ಮುಖ್ಯಮಂತ್ರಿ ಬೊಮ್ಮಾಯಿ ಕೃತಜ್ಞತೆ ಸಲ್ಲಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DC Shivamogga ಶಾಂತಿ ಸೌಹಾರ್ದತೆಯಿಂದ ಬಕ್ರೀದ್ ಹಬ್ಬ ಆಚರಿಸೋಣ- ಪ್ರಭುಲಿಂಗ ಕವಳಿಕಟ್ಟಿ

DC Shivamogga ಮುಂಬರುವ ಬಕ್ರೀದ್ ಹಬ್ಬವನ್ನು ಜಿಲ್ಲೆಯಾದ್ಯಂತ ಅತ್ಯಂತ ಶಾಂತಿ, ಸೌಹಾರ್ದತೆ ಮತ್ತು...

B.Y. Raghavendra ಬೇಸೂರು ಅಣು ವಿದ್ಯುತ್ ಸ್ಥಾವರ : ಜನರು ಆತಂಕಪಡುವ ಅವಶ್ಯಕತೆಯಿಲ್ಲ- ಬಿ.ವೈ.ರಾಘವೇಂದ್ರ.

B.Y. Raghavendra "ಸಾಗರ ತಾಲ್ಲೂಕು ಬೇಸೂರು ಗ್ರಾಮದಲ್ಲಿ ಅಣು ವಿದ್ಯುತ್ ಸ್ಥಾವರ; ಜನರು...

Shimoga News ತಾತ್ಕಾಲಿಕ ನೇರ ನೇಮಕಾತಿ ಮೂಲಕಖಾಯಂ ಶಿಕ್ಷಕರ ನೇಮಕಾತಿವರೆಗೆ ಅತಿಥಿ ಶಿಕ್ಷಕರ ನೇಮಕ

Shimoga News 2026-27ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು...

Klive Special Article ನೇಪಾಳದಲ್ಲಿ ಶೃಂಗೇರಿ ಜಗದ್ಗುರುಗಳು.

ವಿಶೇಷ ವರದಿ: ಪ್ರಭಾಕರ ಕಾರಂತ Klive Special Article ಜಗದ್ಗುರು ಶ್ರೀ ವಿಧುಶೇಖರ ಭಾರತೀ...