Sunday, May 24, 2026
Sunday, May 24, 2026

ಟಿ 20 ಕ್ರಿಕೆಟ್ ಐರ್ಲೆಂಡ್ ವಿರುದ್ಧ ಭಾರತಕ್ಕೆ 4 ರನ್ ಗಳ ರೋಚಕ ಜಯ

Date:

ಮಧ್ಯಮ ಕ್ರಮಾಂಕದಲ್ಲಿ ದೀಪಕ್ ಹೂಡಾ ಸಿಡಿಸಿದ ಚೊಚ್ಚಲ ಶತಕ ಹಾಗೂ ಸಂಜು ಸ್ಯಾಮ್ಸನ್ ಅಬ್ಬರದ ಆಟದಿಂದ ಭಾರತ ತಂಡ ಎರಡನೇ ಟಿ-20 ಪಂದ್ಯದಲ್ಲಿ ಐರ್ಲೆಂಡ್ ತಂಡದ ವಿರುದ್ಧ 4 ರನ್ ಗಳ ರೋಚಕ ಜಯ ಸಾಧಿಸಿದೆ.

ಡಬ್ಲೀನ್ ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡ 20 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 225 ರನ್ ಗಳಿಸಿತು.

ಪಂದ್ಯದ ಕೊನೆಯ ಓವರ್ ನಲ್ಲಿ 17 ರನ್ ಗಳಿಸಬೇಕಿತ್ತು. ಆದರೆ ಐರ್ಲೆಂಡ್ 11 ರನ್ ಗಳಿಸಲಷ್ಟೇ ಶಕ್ತವಾಯಿತು. ತಂಡದ ಪರ ನಾಯಕ ಆಂಡೆ ಬಲರ್ಬೆನ್ (60), ಪಾಲ್ ಸ್ಟಿರ್ಲಿಂಗ್ (40) ಮೊದಲ ವಿಕೆಟ್ ಗೆ 72 ರನ್ ಜೊತೆಯಾಟ ನಿಭಾಯಿಸಿದರು.ಆದರೆ ಹೆರ್ರಿ ಟೆಕ್ಟರ್ (39), ಜಾರ್ಜ್ ಡಾಕ್ಟ್ರೆಲ್ (ಅಜೇಯ 34) ಮತ್ತು ಮಾರ್ಕ್ ಆದಿರ್ (ಅಜೇಯ 23) ಹೋರಾಟ ವ್ಯರ್ಥಗೊಂಡಿತು.

ಕಠಿಣ ಗುರಿ ಬೆಂಬತ್ತಿದ ಐರ್ಲೆಂಡ್ 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 221 ರನ್ ಗಳಿಸಲಷ್ಟೇ ಶಕ್ತವಾಯಿತು.

ಇದಕ್ಕೂ ಮುನ್ನ ಬ್ಯಾಟ್ ಮಾಡಿದ ಭಾರತ ತಂಡ ಇಶಾನ್ ಕಿಶನ್ ಅವರನ್ನು ಅಲ್ಪ ಮೊತ್ತಕ್ಕೆ ಕಳೆದುಕೊಂಡಿತು. ಆದರೆ ನಂತರ ಜೊತೆಯಾದ ದೀಪಕ್ ಹೂಡಾ ಮತ್ತು ಸಂಜು ಸ್ಯಾಮ್ಸನ್ ಎರಡನೇ ವಿಕೆಟ್ ಗೆ 176 ರನ್ ಜೊತೆಯಾಟದ ಮೂಲಕ ತಂಡವನ್ನು ಆಧರಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Dinesh Gundu Rao ಎಬೊಲಾ ಸೋಂಕು ಬಾರದಂತೆ ಆರೋಗ್ಯ ಇಲಾಖೆ ಅಗತ್ಯ ಕ್ರಮ.- ದಿನೇಶ್ ಗುಂಡೂರಾವ್

Dinesh Gundu Rao ಎಬೋಲಾ ಸೋಂಕು ಬಾರದಂತೆ ತಡೆಯಲು ಆರೋಗ್ಯ ಇಲಾಖೆಯಿಂದ...

Madhu Bangarappa ಶಿವಮೊಗ್ಗಕ್ಕೆ ಜೂನ್ 1 ರಂದು ಸೀಎಮನ ಭೇಟಿ: ಮಧು ಬಂಗಾರಪ್ಪ ಅವರಿಂದ ಪೂರ್ವಸಿದ್ಧತೆ ಪರಿಶೀಲನೆ

Madhu Bangarappa ಜೂನ್ 01 ರಂದು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ನೆರವೇರಿಸಲಿರುವ...

Madhu Bangarappa ಜಿಲ್ಲಾ ಪ್ರಗತಿ ಪರಿಶಿಲನಾ ಸಭೆ. ವಿವಿಧ ಸಮಸ್ಯೆಗಳ ಬಗ್ಗೆ ಪಕ್ಷಾತೀತ ನಿರ್ಣಯ- ಮಧು ಬಂಗಾರಪ್ಪ.

Madhu Bangarappa ಇಂದು ಶಿವಮೊಗ್ಗದ ಜಿಲ್ಲಾ ಪಂಚಾಯತ್‌ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ...

CM Siddharamaiah ಸಮಗ್ರ ಅಭಿವೃದ್ಧಿಗೆ ನಾವು ಮುಂದಡಿ ಇಟ್ಟಿದ್ದೇವೆ- ಸಿದ್ಧರಾಮಯ್ಯ

CM Siddharamaiah ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ,...