Wednesday, October 2, 2024
Wednesday, October 2, 2024

ಮಾದರಿ ಶಾಲೆ, ಶೈಕ್ಷಣಿಕ ಪ್ರಗತಿಗೆ ಮುನ್ನುಡಿ

Date:

ಕೋವಿಡ್ -19 ಪರಿಣಾಮದಿಂದ ಸುಮಾರು 2 ವರ್ಷಗಳಿಂದ ಶಿಕ್ಷಣ ವ್ಯವಸ್ಥೆಯ ಬಗ್ಗೆ ಪೋಷಕರಲ್ಲಿ ಆತಂಕ ಸೃಷ್ಟಿಯಾಗಿತ್ತು. ಅಲ್ಲದೆ ಗ್ರಾಮೀಣ ಭಾಗಗಳಲ್ಲಿ ಮಕ್ಕಳು ಕೂಲಿ ಕೆಲಸಕ್ಕೆ ಹೋಗುತ್ತಿರುವುದು ಸುದ್ದಿಯಾಗಿತ್ತು. ಈ ಬಗ್ಗೆ ಶಿಕ್ಷಣ ಹಾಗೂ ಆರೋಗ್ಯ ತಜ್ಞರ ಸಲಹೆಯಂತೆ ಸರ್ಕಾರ ಶಾಲೆಯನ್ನು ಆರಂಭಿಸಿದೆ.

ಸಾರ್ವಜನಿಕ ವಲಯದಿಂದ ಹಲವರು ಈ ನಿರ್ಧಾರದ ಬಗ್ಗೆ ಟೀಕೆ-ಟಿಪ್ಪಣಿಗಳು ಬಂದವು. ಪ್ರಸ್ತುತ ಶಾಲೆಯ ಆರಂಭವಾಗಿದ್ದು ಮಕ್ಕಳು ಮತ್ತು ಪೋಷಕರಲ್ಲಿ ಸಂತಸ ಮನೆಮಾಡಿದೆ. ಮಕ್ಕಳು ಶಾಲೆಗಳಿಗೆ ಉತ್ಸಾಹದಿಂದ ತೆರಳುತ್ತಿದ್ದಾರೆ.

ಗ್ರಾಮೀಣ ಭಾಗದ ಮಕ್ಕಳು ಶಾಲೆಗಳಲ್ಲಿ ಇಂದಿಗೂ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಸಮಸ್ಯೆಗಳಿಗೆ ಪರಿಹಾರ ನೀಡುವುದು ಸರ್ಕಾರದ ಹೊಣೆಯಾಗಿದೆ. ಈ ನಿಟ್ಟಿನಲ್ಲಿ ಪ್ರತಿ ಗ್ರಾಮಪಂಚಾಯತಿಗೆ ಒಂದು ಮಾದರಿ ಶಾಲೆ ನಿರ್ಮಾಣ ಮಾಡುವ ಬಗ್ಗೆ ಸರ್ಕಾರ ಚಿಂತನೆಯ ನಡೆಸಿದೆ. ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಶ್ರೀ ಬಿ.ಸಿ. ನಾಗೇಶ್ ಅವರು ಇತ್ತೀಚೆಗೆ ಶಿವಮೊಗ್ಗದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡರು.

ಮಾದರಿ ಶಾಲೆಯ ರೂಪರೇಷೆಗಳು ಹೇಗಿರಬೇಕು? ಅವುಗಳ ಆಯ್ಕೆ ಪ್ರಕ್ರಿಯೆಯ ಮಾನದಂಡಗಳೇನು? ಮುಂತಾದ ವಿಷಯಗಳನ್ನ ಸರ್ಕಾರವು ಒಂದು ಮಾರ್ಗ ಸೂಚಿಯಾಗಿ ಸಿದ್ಧಪಡಿಸಬೇಕಿದೆ. ಮಾದರಿ ಶಾಲೆ ಆಗುವಲ್ಲಿ ವೃಥಾ ಪೈಪೋಟಿಗೆ ಬಿಡದೆ ಗುಣಮಟ್ಟಕ್ಕೆ ಗಮನ ನೀಡುವಂತಾಗಬೇಕು. ಮಾದರಿ ಶಾಲೆಯ ಚಿಂತನೆ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವಲ್ಲಿ ಸಹಕಾರಿಯಾದರೆ ಸರ್ಕಾರದ ಶ್ರಮ ಸಾರ್ಥಕವಾಗುತ್ತದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...