Monday, December 8, 2025
Monday, December 8, 2025

ಮಾದರಿ ಶಾಲೆ, ಶೈಕ್ಷಣಿಕ ಪ್ರಗತಿಗೆ ಮುನ್ನುಡಿ

Date:

ಕೋವಿಡ್ -19 ಪರಿಣಾಮದಿಂದ ಸುಮಾರು 2 ವರ್ಷಗಳಿಂದ ಶಿಕ್ಷಣ ವ್ಯವಸ್ಥೆಯ ಬಗ್ಗೆ ಪೋಷಕರಲ್ಲಿ ಆತಂಕ ಸೃಷ್ಟಿಯಾಗಿತ್ತು. ಅಲ್ಲದೆ ಗ್ರಾಮೀಣ ಭಾಗಗಳಲ್ಲಿ ಮಕ್ಕಳು ಕೂಲಿ ಕೆಲಸಕ್ಕೆ ಹೋಗುತ್ತಿರುವುದು ಸುದ್ದಿಯಾಗಿತ್ತು. ಈ ಬಗ್ಗೆ ಶಿಕ್ಷಣ ಹಾಗೂ ಆರೋಗ್ಯ ತಜ್ಞರ ಸಲಹೆಯಂತೆ ಸರ್ಕಾರ ಶಾಲೆಯನ್ನು ಆರಂಭಿಸಿದೆ.

ಸಾರ್ವಜನಿಕ ವಲಯದಿಂದ ಹಲವರು ಈ ನಿರ್ಧಾರದ ಬಗ್ಗೆ ಟೀಕೆ-ಟಿಪ್ಪಣಿಗಳು ಬಂದವು. ಪ್ರಸ್ತುತ ಶಾಲೆಯ ಆರಂಭವಾಗಿದ್ದು ಮಕ್ಕಳು ಮತ್ತು ಪೋಷಕರಲ್ಲಿ ಸಂತಸ ಮನೆಮಾಡಿದೆ. ಮಕ್ಕಳು ಶಾಲೆಗಳಿಗೆ ಉತ್ಸಾಹದಿಂದ ತೆರಳುತ್ತಿದ್ದಾರೆ.

ಗ್ರಾಮೀಣ ಭಾಗದ ಮಕ್ಕಳು ಶಾಲೆಗಳಲ್ಲಿ ಇಂದಿಗೂ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಸಮಸ್ಯೆಗಳಿಗೆ ಪರಿಹಾರ ನೀಡುವುದು ಸರ್ಕಾರದ ಹೊಣೆಯಾಗಿದೆ. ಈ ನಿಟ್ಟಿನಲ್ಲಿ ಪ್ರತಿ ಗ್ರಾಮಪಂಚಾಯತಿಗೆ ಒಂದು ಮಾದರಿ ಶಾಲೆ ನಿರ್ಮಾಣ ಮಾಡುವ ಬಗ್ಗೆ ಸರ್ಕಾರ ಚಿಂತನೆಯ ನಡೆಸಿದೆ. ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಶ್ರೀ ಬಿ.ಸಿ. ನಾಗೇಶ್ ಅವರು ಇತ್ತೀಚೆಗೆ ಶಿವಮೊಗ್ಗದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡರು.

ಮಾದರಿ ಶಾಲೆಯ ರೂಪರೇಷೆಗಳು ಹೇಗಿರಬೇಕು? ಅವುಗಳ ಆಯ್ಕೆ ಪ್ರಕ್ರಿಯೆಯ ಮಾನದಂಡಗಳೇನು? ಮುಂತಾದ ವಿಷಯಗಳನ್ನ ಸರ್ಕಾರವು ಒಂದು ಮಾರ್ಗ ಸೂಚಿಯಾಗಿ ಸಿದ್ಧಪಡಿಸಬೇಕಿದೆ. ಮಾದರಿ ಶಾಲೆ ಆಗುವಲ್ಲಿ ವೃಥಾ ಪೈಪೋಟಿಗೆ ಬಿಡದೆ ಗುಣಮಟ್ಟಕ್ಕೆ ಗಮನ ನೀಡುವಂತಾಗಬೇಕು. ಮಾದರಿ ಶಾಲೆಯ ಚಿಂತನೆ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವಲ್ಲಿ ಸಹಕಾರಿಯಾದರೆ ಸರ್ಕಾರದ ಶ್ರಮ ಸಾರ್ಥಕವಾಗುತ್ತದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddaramaiah ವಿಧಾನಸಭೆ ಚಳಿಗಾಲದ ಅಧಿವೇಶನಕ್ಕೆ ಬೆಳಗಾವಿ ಸಜ್ಜು.

CM Siddaramaiah ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಳಿಗಾಲದ ಅಧಿವೇಶನದ ಪ್ರಯುಕ್ತ ಸುವರ್ಣ...

Shimoga News ಜೀವರಕ್ಷಣಾ ಕೌಶಲ್ಯವನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕು- ಸೀಮಾ ಆನಂದ್

Shimoga News ಜೀವ ರಕ್ಷಿಸುವ ಕೌಶಲ್ಯವನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳುವುದು ಅತ್ಯಂತ...

Gurudutt Hegde ಧ್ವಜವಂತಿಗೆ ನೀಡುವ ಮೂಲಕ ನಿವೃತ್ತ ಸೈನಿಕರಿಗೆ & ಅವರ ಅವಲಂಬಿತರಿಗೆ ನೆರವಾಗೋಣ- ಗುರುದತ್ತ ಹೆಗಡೆ

Gurudutt Hegde ಸಶಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸಿದ ಸೈನಿಕರನ್ನು ಗೌರವಿಸುವ ಉದ್ದೇಶದಿಂದ...

D S Arun ರಾಜ್ಯ ಕ್ರಿಕೆಟ್ ಸಂಸ್ಥೆಯ ನಿರ್ದೇಶಕರಾಗಿ ಶಾಸಕ ಡಿ.ಎಸ್.ಅರುಣ್ ಆಯ್ಕೆ.

D S Arun ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಶಿವಮೊಗ್ಗ ವಲಯ...