Wednesday, July 8, 2026
Wednesday, July 8, 2026

ಪ್ರಿ ಪೆಯ್ಡ್ ಗ್ರಾಹಕರಿಗೆ ಬಿಎನ್ ಎಲ್ ಬೃಹತ್ ಕೊಡುಗೆ?

Date:

ಬಿಎಸ್‌ಎನ್‌ಎಲ್ ಮತ್ತೊಂದು ಭರ್ಜರಿ ಕೂಡುಗೆ ಘೋಷಿಸಿದೆ. ಪ್ರೀ ಪೇಯ್ಡ್ ಗ್ರಾಹಕರಿಗೆ ವಾರ್ಷಿಕ ಪ್ಲಾನ್ ಘೋಷಿಸಿದೆ. ಈ ಪ್ಲಾನ್ ಅಡಿಯಲ್ಲಿ ಒಂದು ವರ್ಷದ ವರೆಗೆ ಉಚಿತ ಕರೆ ಹಾಗೂ 600 ಜಿಬಿ ಉಚಿತ ಡೇಟಾ ಸಿಗಲಿದೆ. 365 ದಿನಗಳ ವರೆಗೆ ಯಾವುದೇ ವ್ಯಾಲಿಟಿಡಿ, ರಿಚಾರ್ಜ್ ತಲೆನೋವು ದೂರವಾಗಲಿದೆ.

ಈ ವಾರ್ಷಿಕ ಪ್ಲಾನ್‌ನಲ್ಲಿ ಹಲವು ಸೌಲಭ್ಯಗಳಿವೆ. ಗ್ರಾಹಕರು 1,999 ರೂಪಾಯಿ ರೀಚಾರ್ಜ್ ಮಾಡಿದರೆ ಬಿಎಸ್‌ಎನ್‌ಎಲ್ ವಾರ್ಷಿಕ ಪ್ಲಾನ್ ಆಯಕ್ಟೀವೇಟ್ ಆಗಲಿದೆ. 365 ದಿನ ಅನ್‌ಲಿಮಿಟೆಡ್ ಕಾಲ್, ಉಚಿತ 100 ಎಸ್‌ಎಂಎಸ್, ಹಾಗೂ 600 ಜಿಬಿ ಉಚಿತ ಡೇಟಾಸಿಗಲಿದೆ.
ಹಲವು ಆಫರ್‌ಗಳಲ್ಲಿ ಪ್ರತಿ ದಿನ 1, 1.5 ಅಥವಾ 3 ಜಿಬಿ ಗರಿಷ್ಠ ಬಳಕೆಗೆ ಅವಕಾಶವಿರುತ್ತದೆ. ಹೆಚ್ಚುವರಿ ಡೇಟಾಗೆ ಮತ್ತೆ ಹೆಚ್ಚುವರಿ ರೀಚಾರ್ಜ್ ಮಾಡಿಕೊಳ್ಳಬೇಕು. ಆದರೆ ಬಿಎಸ್‌ಎನ್‌ಎಲ್ ವಾರ್ಷಿಕ ಪ್ಲಾನ್ ರಿಚಾರ್ಜ್ ಮಾಡಿದರೆ ಗ್ರಾಹಕರು 600 ಜಿಬಿ ಡೇಟಾವನ್ನು ಹೇಗೆ ಬೇಕಾದರು ಉಪಯೋಗಿಸಿಕೊಳ್ಳಬಹುದು.
ಸ್ವದೇಶಿ 4ಜಿ ನೆಟ್‌ವರ್ಕ್ ಸೇವೆ ಬಿಎಸ್‌ಎನ್‌ಎಲ್‌ ಮೂಲಕ ಆರಂಭವಾಗಲಿದೆ.

ಆಗಸ್ಟ್ 15 ರಂದು ಬಿಎಸ್‌ಎನ್‌ಎಲ್ 4ಜಿ ಸೇವೆ ಆರಂಭಿಸಲು ಸರ್ಕಾರ ಮುಂದಾಗಿದೆ. ಇದಕ್ಕಾಗಿ ದೇಶಾದ್ಯಂತ 2343 ಟವರ್‌ಗಳಿಗೆ (ಸೈಟ್ಸ್‌) ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್‌, ಮಾಹಿತಿ ತಂತ್ರಜ್ಞಾನ ಮತ್ತು ಸಂಹವನ ಸಚಿವ ಅಶ್ವಿನಿ ವೈಷ್ಣವ್‌ ತಿಳಿಸಿದ್ದಾರೆ.
ಭಾರತೀಯ ಎಂಜಿನಿಯರ್‌ಗಳು ಮತ್ತು ವಿಜ್ಞಾನಿಗಳಿಂದಲೇ ಅಭಿವೃದ್ಧಿಪಡಿಸಲಾಗಿರುವ ದೇಶೀಯ 4ಜಿ ನೆಟ್‌ವರ್ಕ್ ಸೇವೆ ಇನ್ನು ಕೆಲವೇ ವಾರಗಳಲ್ಲಿ ಆರಂಭವಾಗಲಿದೆ.

ಬಿಎಸ್‌ಎನ್‌ಎಲ್‌ ಮೂಲಕ ದೇಶದ ಜನರಿಗೆ ಈ ಸೇವೆ ಲಭ್ಯವಾಗಲಿದೆ. ಇದಕ್ಕಾಗಿ ವಿವಿಧ ರಾಜ್ಯಗಳಲ್ಲಿ ಮೊದಲ ಹಂತದಲ್ಲಿ 2400 ಕೋಟಿ ರು.ಗೂ ಹೆಚ್ಚು ಮೊತ್ತದಲ್ಲಿ ಒಟ್ಟು 2343 ಟವರ್‌ಗಳನ್ನು 4ಜಿಗೆ ಉನ್ನತೀಕರಿಸಲಾಗುತ್ತಿದೆ. ಇದಕ್ಕೆ ಸ್ಥಳಾವಕಾಶವನ್ನೂ ಅಂತಿಮಗೊಳಿಸಲಾಗಿದೆ ಎಂದು ತಿಳಿಸಿದರು.

600 ಜಿಜಿ ಡೆಟಾ ಬದಲಾಗಿ 670 ಜಿಬಿ ಡೆಟಾ ಸೌಲಭ್ಯ ನೀಡಿದ್ದಲ್ಲಿ ಬಿಎಸ್ ಎನ್ ಎಲ್ ಉಳಿದ ಎಲ್ಲಾ ಕಂಪನಿಗಳನ್ನೂ ಸೈಡ್ ಹೊಡೆಯಬಹುದೆನೋ?…

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...