Wednesday, March 12, 2025
Wednesday, March 12, 2025

ಪಕ್ಷ ನಿಷ್ಠೆಯಷ್ಟೇ ಸಮಾಜ ನಿಷ್ಠೆಯೂ ಅಗತ್ಯ

Date:

ರಾಜಕೀಯ ಅಧಿಕಾರ ಶಾಶ್ವತವಲ್ಲ. ಆದರೆ ಸಮುದಾಯದ ಮತಗಳು ಸೂರ್ಯ ಚಂದ್ರ ಇರುವವರೆಗೂ ಇರುತ್ತವೆ. ಸಮುದಾಯದವರು ಪಕ್ಷನಿಷ್ಠೆ ಜೊತೆಗೆ ಸಮಾಜಕ್ಕೆ ನಿಷ್ಠರಾಗಿರಬೇಕು. ಮಠದ ಕಾರ್ಯಗಳಿಗೆ ಸಮಾಜದವರು ಸಹಕರಿಸಬೇಕು ಎಂದು ಕನಕ ಗುರುಪೀಠ ಹೊಸದುರ್ಗ ಶಾಖಾ ಮಠದ ಪೀಠಾಧ್ಯಕ್ಷ ಈಶ್ವರಾನಂದಪುರಿ ಸ್ವಾಮೀಜಿ ಹೇಳಿದರು.
‘ನೂರು ದಿನ ಸಾವಿರ ಹಳ್ಳಿ’ ಕಾರ್ಯಕ್ರಮದ ಪ್ರಯುಕ್ತ ಶಿಕಾರಿಪುರದ ಕನಕ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಅವರು ಮಾತನಾಡಿದರು.
ಮಠದೊಂದಿಗೆ ಭಕ್ತರು ನಿರಂತರ ಸಂಪರ್ಕ ಹೊಂದಬೇಕು. ನಮ್ಮ ಮತಗಳಲ್ಲಿ ಅಭಿವೃದ್ಧಿ ಕಾರ್ಯಗಳು ಸಮರ್ಪಕವಾಗಿ ನಡೆಯಲು ಭಕ್ತರ ಸಹಕಾರ ಮುಖ್ಯವಾಗಿದೆ. ಪಕ್ಷ ರಾಜಕಾರಣಕ್ಕೆ ಸೀಮಿತರಾಗದೇ ಕುರುಬ ಸಮಾಜದ ಸಂಘಟನೆಗೆ ಪ್ರತಿಯೊಬ್ಬರೂ ಮುಂದಾಗಬೇಕು ಎಂದರು.
ಸಂಕ್ರಾಂತಿಯಿಂದ ಹೊಸದುರ್ಗ ಶಾಖಾ ಮಠದಿಂದ “ನೂರು ದಿನ ಸಾವಿರ ಹಳ್ಳಿ” ಕಾರ್ಯಕ್ರಮ ಆಯೋಜಿಸಿದ್ದು, ನೂರು ದಿನಗಳಲ್ಲಿ ಸಾವಿರ ಹಳ್ಳಿಗಳಿಗೆ ಭೇಟಿ ನೀಡಿ ಈ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ತಾಲೂಕು ಕುರುಬ ಸಮಾಜದ ಅಧ್ಯಕ್ಷ ಕಬಾಡಿ ರಾಜಪ್ಪ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕುರುಬ ಸಮಾಜ ಉಪಾಧ್ಯಕ್ಷ ಭದ್ರಾಪುರ ಹಾಲಪ್ಪ, ತಾಲೂಕು ಗೌರವಾಧ್ಯಕ್ಷ ನಗರದ ಮಹಾದೇವಪ್ಪ, ಉಪಾಧ್ಯಕ್ಷ ಗೋಣಿ ಮಾಲತೇಶ್, ಸಂಗೊಳ್ಳಿ ರಾಯಣ್ಣ ಅಭಿವೃದ್ಧಿ ಪ್ರಾಧಿಕಾರದ ನಿರ್ದೇಶಕ ಜೆ. ಸುಕೇಂದ್ರಪ್ಪ, ಸಂಚಾರಿ ಕುರಿಗಾರರ ಸಂಘ ರಾಜ್ಯ ಉಪಾಧ್ಯಕ್ಷ ಡಾ.ಪ್ರಶಾಂತ್, ರಾಜ್ಯ ಪ್ರದೇಶ ಕುರುಬರ ಸಂಘದ ಸಂಘಟನಾ ಕಾರ್ಯದರ್ಶಿ ಎಸ್.ಎಂ. ಶರತ್, ಹಾಗೂ ಚಂದ್ರಗುಪ್ತ ಮೌರ್ಯ ಸೊಸೈಟಿ ಅಧ್ಯಕ್ಷ ಸಕಲೇಶ್ ಹುಲ್ಮಾರ್, ಪುರಸಭೆ ಅಧ್ಯಕ್ಷೆ ಲಕ್ಷ್ಮಿ ಮಹಾಲಿಂಗಪ್ಪ, ಮತ್ತು ಇನ್ನಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

State Film Awards 2020 ನೇ ಸಾಲಿನ ಚಲನಚಿತ್ರ ಪ್ರಶಸ್ತಿ ಘೋಷಣೆ

State Film Awards 2020ನೇ ಸಾಲಿನ ಆಯ್ಕೆ ಸಮಿತಿಯು ಸಲ್ಲಿಸಿರುವ ವರದಿಯಲ್ಲಿ...

Klive Special ಹೆತ್ತವಳಿಗೊಂದು ಕವನ-ನಮನ

Klive Special ದೇವರ ಸ್ವರೂಪ ಗರ್ಭದಲ್ಲಿ ಹೊತ್ತುನವಮಾಸಕ್ಕೆ ಹೆತ್ತುಮೌಲ್ಯಗಳನ್ನೇ ಬಿತ್ತುಸಲಹಿದೆ ನೀಡಿ ಕೈತುತ್ತು ಅಮ್ಮ...

Guarantee Scheme ಸತ್ಯ & ಶುದ್ಧ ಮಾರ್ಗದಿಂದ ರಾಷ್ಟ್ರ ಕಟ್ಟಲು ಸಾಧ್ಯ- ಸಿ.ಎಸ್.ಚಂದ್ರಭೂಪಾಲ್

Guarantee Scheme ಅಂತರಂಗ ಮತ್ತು ಬಹಿರಂಗ ಶುದ್ದಿಯಿಂದ ಹಾಗೂ ಸತ್ಯದ ಮಾರ್ಗದಲ್ಲಿ...