Wednesday, October 2, 2024
Wednesday, October 2, 2024

ಪಕ್ಷ ನಿಷ್ಠೆಯಷ್ಟೇ ಸಮಾಜ ನಿಷ್ಠೆಯೂ ಅಗತ್ಯ

Date:

ರಾಜಕೀಯ ಅಧಿಕಾರ ಶಾಶ್ವತವಲ್ಲ. ಆದರೆ ಸಮುದಾಯದ ಮತಗಳು ಸೂರ್ಯ ಚಂದ್ರ ಇರುವವರೆಗೂ ಇರುತ್ತವೆ. ಸಮುದಾಯದವರು ಪಕ್ಷನಿಷ್ಠೆ ಜೊತೆಗೆ ಸಮಾಜಕ್ಕೆ ನಿಷ್ಠರಾಗಿರಬೇಕು. ಮಠದ ಕಾರ್ಯಗಳಿಗೆ ಸಮಾಜದವರು ಸಹಕರಿಸಬೇಕು ಎಂದು ಕನಕ ಗುರುಪೀಠ ಹೊಸದುರ್ಗ ಶಾಖಾ ಮಠದ ಪೀಠಾಧ್ಯಕ್ಷ ಈಶ್ವರಾನಂದಪುರಿ ಸ್ವಾಮೀಜಿ ಹೇಳಿದರು.
‘ನೂರು ದಿನ ಸಾವಿರ ಹಳ್ಳಿ’ ಕಾರ್ಯಕ್ರಮದ ಪ್ರಯುಕ್ತ ಶಿಕಾರಿಪುರದ ಕನಕ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಅವರು ಮಾತನಾಡಿದರು.
ಮಠದೊಂದಿಗೆ ಭಕ್ತರು ನಿರಂತರ ಸಂಪರ್ಕ ಹೊಂದಬೇಕು. ನಮ್ಮ ಮತಗಳಲ್ಲಿ ಅಭಿವೃದ್ಧಿ ಕಾರ್ಯಗಳು ಸಮರ್ಪಕವಾಗಿ ನಡೆಯಲು ಭಕ್ತರ ಸಹಕಾರ ಮುಖ್ಯವಾಗಿದೆ. ಪಕ್ಷ ರಾಜಕಾರಣಕ್ಕೆ ಸೀಮಿತರಾಗದೇ ಕುರುಬ ಸಮಾಜದ ಸಂಘಟನೆಗೆ ಪ್ರತಿಯೊಬ್ಬರೂ ಮುಂದಾಗಬೇಕು ಎಂದರು.
ಸಂಕ್ರಾಂತಿಯಿಂದ ಹೊಸದುರ್ಗ ಶಾಖಾ ಮಠದಿಂದ “ನೂರು ದಿನ ಸಾವಿರ ಹಳ್ಳಿ” ಕಾರ್ಯಕ್ರಮ ಆಯೋಜಿಸಿದ್ದು, ನೂರು ದಿನಗಳಲ್ಲಿ ಸಾವಿರ ಹಳ್ಳಿಗಳಿಗೆ ಭೇಟಿ ನೀಡಿ ಈ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ತಾಲೂಕು ಕುರುಬ ಸಮಾಜದ ಅಧ್ಯಕ್ಷ ಕಬಾಡಿ ರಾಜಪ್ಪ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕುರುಬ ಸಮಾಜ ಉಪಾಧ್ಯಕ್ಷ ಭದ್ರಾಪುರ ಹಾಲಪ್ಪ, ತಾಲೂಕು ಗೌರವಾಧ್ಯಕ್ಷ ನಗರದ ಮಹಾದೇವಪ್ಪ, ಉಪಾಧ್ಯಕ್ಷ ಗೋಣಿ ಮಾಲತೇಶ್, ಸಂಗೊಳ್ಳಿ ರಾಯಣ್ಣ ಅಭಿವೃದ್ಧಿ ಪ್ರಾಧಿಕಾರದ ನಿರ್ದೇಶಕ ಜೆ. ಸುಕೇಂದ್ರಪ್ಪ, ಸಂಚಾರಿ ಕುರಿಗಾರರ ಸಂಘ ರಾಜ್ಯ ಉಪಾಧ್ಯಕ್ಷ ಡಾ.ಪ್ರಶಾಂತ್, ರಾಜ್ಯ ಪ್ರದೇಶ ಕುರುಬರ ಸಂಘದ ಸಂಘಟನಾ ಕಾರ್ಯದರ್ಶಿ ಎಸ್.ಎಂ. ಶರತ್, ಹಾಗೂ ಚಂದ್ರಗುಪ್ತ ಮೌರ್ಯ ಸೊಸೈಟಿ ಅಧ್ಯಕ್ಷ ಸಕಲೇಶ್ ಹುಲ್ಮಾರ್, ಪುರಸಭೆ ಅಧ್ಯಕ್ಷೆ ಲಕ್ಷ್ಮಿ ಮಹಾಲಿಂಗಪ್ಪ, ಮತ್ತು ಇನ್ನಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...