Wednesday, December 17, 2025
Wednesday, December 17, 2025

ಆತಂಕ ಸೃಷ್ಟಿಸಿದ ಎವೈ 4.2 ವೈರಾಣು

Date:

ರಾಜ್ಯದಲ್ಲಿ ಬಹುತೇಕರು ಕೋವಿಡ್ ಲಸಿಕೆ ತೆಗೆದುಕೊಂಡಿರುವುದರಿಂದ ಎವೈ 4.2 ವೈರಾಣು ಬಗ್ಗೆ ಆತಂಕ ಪಡಬೇಕಾಗಿಲ್ಲ ಎಂದು
ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್ . ಅಶ್ವತ್ ನಾರಾಯಣ್ ಹೇಳಿದ್ದಾರೆ.
ವೈರಾಣುಗಳು ರೂಪಂತರ ಆಗುವುದನ್ನು ತಡೆಯಲು ಸಾಧ್ಯವಿಲ್ಲ. ಆದರೆ ರೋಗ ನಿರೋಧಕ ಲಸಿಕೆ ಪಡೆಯುವ ಮೂಲಕ ಕೋವಿಡ್ ನಿಯಂತ್ರಿಸಬಹುದು ಎಂದು ಹೇಳಿದರು.
ಸುಮಾರು ಎರಡು ವರ್ಷಗಳ ಹಿಂದೆ ಆರಂಭವಾದ ಕೋವಿಡ್-19 ಸಾಂಕ್ರಾಮಿಕ ರೋಗದ ಕಾಟ ಈಗ ಮತ್ತೊಮ್ಮೆ ಕಾಡುವ ಭೀತಿ ಆವರಿಸಿದೆ. ಬ್ರಿಟನ್, ರಷ್ಯಾ, ಯುರೋಪ್ ನ ಕೆಲವು ದೇಶಗಳಲ್ಲಿ ಪತ್ತೆಯಾಗಿರುವ ಕೋವಿಡ್ ನ ಹೊಸ ತಳಿಯ ವೈರಾಣು ಎವೈ 4.2 ರಾಜ್ಯಕ್ಕೂ ಕಾಲಿಟ್ಟಿದ್ದು, ಬೆಂಗಳೂರಿನಲ್ಲಿ ಮೂರು ಸೇರಿ ರಾಜ್ಯದಲ್ಲಿ ಒಟ್ಟು ಏಳು ಪ್ರಕರಣಗಳು ದೃಢಪಟ್ಟಿವೆ ಎಂದು ತಿಳಿದು ಬಂದಿದೆ.
ಕೆಲದಿನಗಳ ಹಿಂದೆ ಸೋಂಕಿತರ ಮಾಹಿತಿಯನ್ನು ಅನುಕ್ರಮಣಿಕೆ ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಎಲ್ಲಾ ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಮಾಹಿತಿ ದೊರೆತಿದೆ.
ಈ ವಿಚಾರವಾಗಿ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಮತ್ತು ಹಿರಿಯ ಅಧಿಕಾರಿಗಳ ಜೊತೆಗೆ ಆರೋಗ್ಯ ಸಚಿವ ಡಾಕ್ಟರ್ ಕೆ.ಸುಧಾಕರ್ ಸಭೆ ನಡೆಸಿದರು.
‘ಬ್ರಿಟನ್ ಮತ್ತು ರಷ್ಯಾದಲ್ಲಿ ಪತ್ತೆಯಾಗಿರುವ ಎವೈ 4.2 ವೈರಾಣು ಕುರಿತು ಅಧ್ಯಯನ ನಡೆಸಲಾಗುತ್ತಿದೆ. ಕೋವಿಡ್ ನ ಯಾವುದೇ ಹೊಸ ತಳಿ ಬಂದರೂ ಪ್ರಯೋಗಾಲಯಗಳಲ್ಲಿ ಪರೀಕ್ಷೆ ನಡೆಸಿ, ತಜ್ಞರ ಅಭಿಪ್ರಾಯವನ್ನು ಕೇಳಲಾಗುವುದು. ಎವೈ 4.2 ವೈರಾಣು ಎಷ್ಟರ ಮಟ್ಟಿಗೆ ಪರಿಣಾಮಕಾರಿ ಎಂಬುದನ್ನು ಗಮನಿಸಬೇಕಾಗಿದೆ ಎಂದು ಹೇಳಿದರು.
ಈ ಕುರಿತು ದೆಹಲಿಯ ವಂಶವಾಹಿ ಅಧ್ಯಯನ ಸಂಸ್ಥೆಯ ನಿರ್ದೇಶಕರಾದ ಅನುರಾಗ್ ಅಗರ್ವಾಲ್ ರವರು, “ಪ್ರಯೋಗಾಲಯದಲ್ಲಿ ಈ ಕೆಲವೇ ವೈರಾಣುವನ್ನು ನೋಡಿರುವುದಾಗಿಯೂ ಆದರೆ, ಅವುಗಳನ್ನು ವರ್ಗೀಕರಿಸುವುದು ಕ್ಲಿಷ್ಟಕರವಾಗಿದೆ” ಎಂದಿದ್ದಾರೆ. ಕೇಂದ್ರ ಆರೋಗ್ಯ ಸಚಿವ ಡಾ. ಮನ್ಸೂಖ್ ಮಾಂಡವಿಯಾ ಅವರು ಈ ಹೊಸ ವೈರಾಣುವಿನ ಬಗ್ಗೆ ತಜ್ಞರು ಅನ್ವೇಷಣೆ ಮಾಡುತ್ತಿದ್ದಾರೆ ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಡಿಸೆಂಬರ್ 18. ಶಿವಮೊಗ್ಗ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಶಿವಮೊಗ್ಗ ಮೆಸ್ಕಾಂ ಗ್ರಾಮೀಣ ಉಪವಿಭಾಗ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಛೇರಿ,...

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...