Wednesday, April 22, 2026
Wednesday, April 22, 2026

ಕೋವಿಡ್ ಕಾರಣ ನಿಂತ ಎಲ್ಲಾ ರೈಲುಸೇವೆ ಆರಂಭಿಸಲು ಮನವಿ

Date:

ಕೊರೊನಾ ಪೂರ್ವದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ಎಲ್ಲಾ ರೈಲು ಸೇವೆಗಳನ್ನು ಪುನರ್‌ ಆರಂಭಿಸುವಂತೆ ವಿಭಾಗೀಯ ರೈಲ್ವೆ ಬಳಕೆದಾರರ ಸಲಹಾ ಸಮಿತಿ ಸದಸ್ಯರು ಸಲಹೆ ನೀಡಿದರು.

ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ಮೈಸೂರಿನ ವಿಭಾಗೀಯ ರೈಲ್ವೆ ವ್ಯವಸ್ಥಾಪಕರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮೈಸೂರು ವಿಭಾಗದ ವ್ಯಾಪ್ತಿಯಲ್ಲಿ ಬರುವ ಪ್ರಯಾಣಿಕರ ಸೇವೆಗಳ ಸುಧಾರಣೆಗೆ ಸಂಬಂಧಿಸಿದಂತೆ ಚರ್ಚೆ ನಡೆಸಲಾಯಿತು.

ಮೈಸೂರು-ಬೆಂಗಳೂರು ಮಧ್ಯೆ ಓಡಾಡುವ ಎಲ್ಲಾ ಸೂಪರ್‌ ಫಾಸ್ಟ್‌ ರೈಲುಗಳನ್ನು ಮತ್ತಷ್ಟು ವೇಗಗೊಳಿಸುವುದು. ಮೈಸೂರು ಮತ್ತು ಬೆಂಗಳೂರು ನಡುವೆ ಓಡುವ ಮಾಲ್ಗುಡಿ ಎಕ್ಸ್‌ಪ್ರೆಸ್‌ ನಲ್ಲಿ ಹವಾ ನಿಯಂತ್ರಿತ ಬೋಗಿ ಹೆಚ್ಚಿಸುವುದು. ಮೈಸೂರಿನಿಂದ ಹಾಸನ ಮತ್ತು ಮಂಗಳೂರು ಮೂಲಕ ಕರ್ನಾಟಕದ ಕರಾವಳಿ ಪ್ರದೇಶದೊಂದಿಗೆ ಸಂಪರ್ಕಿಸುವ ಹೊಸ ರೈಲು ಸೇವೆಗಳು, ತಾಳಗುಪ್ಪ, ಶಿವಮೊಗ್ಗ ಟೌನ್‌ನಿಂದ ಚೆನ್ನೈ ಮತ್ತು ಮೈಸೂರು ಕಡೆಗೆ
ಸಂಚರಿಸುವಂತೆ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ದಾವಣಗೆರೆ, ಹರಿಹರ ಮತ್ತು ಹಾವೇರಿ ರೈಲು ನಿಲ್ದಾಣಗಳಲ್ಲಿ ಪ್ರಯಾಣಿಕರ ಸೌಲಭ್ಯ ಹೆಚ್ಚಿಸುವುದು, ಮೈಸೂರಿನಿಂದ ದಾದರ್‌, ಅಜ್ಮಿರ್‌ ಮತ್ತು ನಿಜಾಮುದ್ದಿನ್‌ ನಿಲ್ದಾಣಗಳಿಗೆ ಈಗ ಇರುವ ಸಾಪ್ತಾಹಿಕ ಮತ್ತು ವಾರಕ್ಕೆ ಎರಡು ದಿನದ ಸೇವೆಯಿಂದ ವಾರಕ್ಕೆ ನಾಲ್ಕು ದಿನಗಳಿಗೆ ವಿಸ್ತರಿಸಲು ಸದಸ್ಯರು ಸಲಹೆ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಕ್ರಾಂತಿಕಾರಿ ಬಸವಣ್ಣನವರ ದಾರಿಯಲ್ಲಿ ಸಾಗುವ ಸಂಕಲ್ಪ ಮಾಡೋಣ- ಬಿ.ವೈ.ರಾಘವೇಂದ್ರ

B.Y. Raghavendra ಕಾಯಕ- ದಾಸೋಹ ಮತ್ತು ಸಾಮಾಜಿಕ ನ್ಯಾಯದ ತತ್ವಗಳನ್ನು ಸಾರಿದ...

Bharat Scouts and Guides ಕೃಷಿ ಕ್ಷೇತ್ರ ಮಾಹಿತಿಯಿಂದ ವಿದ್ಯಾರ್ಥಿಗಳು ಪರಿಪೂರ್ಣರಾಗಲು ಸಾಧ್ಯ- ಕೆ.ರವಿ

Bharat Scouts and Guides ಕೃಷಿ ಕ್ಷೇತ್ರದಲ್ಲಿ ಆಗುತ್ತಿರುವ ಪ್ರಗತಿಯ ಬಗ್ಗೆ...

Klive special Article “ಶಂಕರಂ ಲೋಕ ಶಂಕರಂ” ಎನ್.ಜಯಭೀಮ್ ಜೊಯ್ಸ್, ಶಿವಮೊಗ್ಗ

Klive special Article ಶ್ರೀಶಂಕರಾಚಾರ್ಯ ಗುರುಗಳು (ಶ್ರೀಶಂಕರಜಯಂತಿಯ ಸಂದರ್ಭದಲ್ಲಿ)ಪ್ರತಿವರ್ಷ ವೈಶಾಖಮಾಸದ...

RM Manjunath Gowda ಹುಲಿಕಲ್ ಘಾಟಿ ಪ್ರಕರಣ.ಇಂಜಿನಿಯರುಗಳೇ ಹೊಣೆ. ಎಫ್ ಐ ಆರ್ ದಾಖಲಿಸಲು ಎಸ್ ಪಿ.ಅವರಿಗೆ ಮನವಿ ಮಾಡುವೆ- ಆರ್.ಎಂ.ಮಂಜುನಾಥ ಗೌಡ.

RM Manjunath Gowda ಹುಲಿಕಲ್ ಘಾಟಿ ಪ್ರಕರಣದಲ್ಲಿ ಎಫ್ಐಆರ್ ದಾಖಲಾದ ಹಿನ್ನೆಲೆಯಲ್ಲಿ ಮಕೆನಾಡು...