Thursday, September 17, 2026
Thursday, September 17, 2026

ಪೌರಕಾರ್ಮಿಕರ ವೇತನ ₹2000 ಹೆಚ್ಚಳ- ಬೊಮ್ಮಾಯಿ

Date:

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿನಿಂದ ಹೈದರಾಬಾದ್ ಗೆ ಪ್ರವಾಸ ಬೆಳೆಸಿದ್ದಾರೆ. ಅಲ್ಲಿ ಎರಡು ದಿನಗಳ ಕಾಲ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿದ್ದು ಅದರಲ್ಲಿ ಮುಖ್ಯಮಂತ್ರಿಗಳು ಭಾಗವಹಿಸಿ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ ಎಂದು ತಿಳಿದುಬಂದಿದೆ.

ಹೈದರಾಬಾದ್ ಗೆ ತೆರಳುವ ಮುನ್ನ ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ,ಹೈದರಾಬಾದ್ ನಲ್ಲಿ ನಡೆಯಲಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಜೆ ಪಿ ನಡ್ಡಾ ಸೇರಿದಂತೆ ಹಲವು ರಾಷ್ಟ್ರೀಯ ನಾಯಕರು, ರಾಜ್ಯಗಳ ನಾಯಕರು ಭಾಗಿಯಾಗಲಿದ್ದಾರೆ.
ರಾಜ್ಯದ ವಿವಿಧ ನಗರ ಪಾಲಿಕೆಗಳಲ್ಲಿ ನೇರ ಪಾವತಿ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರ ಸೇವೆಗಳನ್ನು ಕಾಯಂಗೊಳಿಸಲು ರಾಜ್ಯ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದೆ. ಕಾನೂನು ನಿಯಮಗಳಿಗೆ ಅನುಸಾರವಾಗಿ ಅನುಷ್ಠಾನಗೊಳಿಸಲು ಹಿರಿಯ ಅಧಿಕಾರಿಗಳು, ಕಾನೂನು ಇಲಾಖೆ ಅಧಿಕಾರಿಗಳು ಮತ್ತು ಪೌರಕಾರ್ಮಿಕರ ಪ್ರತಿನಿಧಿಗಳ ಸಮಿತಿಯನ್ನು ರಚಿಸಲಾಗುವುದು ಎಂದರು.

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಭಾಗವಹಿಸಲಿದ್ದು ಈ ಸಂದರ್ಭದಲ್ಲಿ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ಅವರನ್ನು ಸಾಂದರ್ಭಿಕವಾಗಿ ಭೇಟಿ ಮಾಡಿ ರಾಜ್ಯದ ಕುರಿತು ಮಾತುಕತೆ ನಡೆಸಲು ಪ್ರಯತ್ನಿಸುತ್ತೇನೆ ಎಂದರು.

ಪೌರಕಾರ್ಮಿಕರ ಸಮಸ್ಯೆಗಳ ಕುರಿತು ನಡೆಸಿದ ಸಭೆ ಕುರಿತು ಮಾತನಾಡಿದ ಬೊಮ್ಮಾಯಿ, ಪ್ರಸ್ತಾವಿತ ಸಮಿತಿಯು ಮೂರು ತಿಂಗಳೊಳಗೆ ವರದಿ ಸಲ್ಲಿಸಲಿದೆ. ಪೌರಕಾರ್ಮಿಕರು ಸಾಮಾಜಿಕ ಘನತೆ ಮತ್ತು ಭದ್ರತೆಗೆ ಅರ್ಹರು. ರಾಜ್ಯ ಸರಕಾರ ಮಾನವೀಯ ಧೋರಣೆಯೊಂದಿಗೆ ಅವರ ಸಂಕಷ್ಟಗಳಿಗೆ ಸ್ಪಂದಿಸಲಿದೆ. ಅವರ ಮಾಸಿಕ ಸಂಭಾವನೆಯನ್ನು 2,000 ರೂಪಾಯಿ ಹೆಚ್ಚಿಸಲಾಗಿದೆ ಎಂದು ಹೇಳಿದರು.

ಪೌರಕಾರ್ಮಿಕರ ನೇಮಕಾತಿಯನ್ನು ಸರಳಗೊಳಿಸಲು ವಿಶೇಷ ನೇಮಕಾತಿ ನಿಯಮಗಳನ್ನು ರೂಪಿಸಲಾಗುವುದು ಎಂದು ಕೂಡ ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...