Wednesday, April 22, 2026
Wednesday, April 22, 2026

ಸಿಎಂ ಆಗುವ ಗುರಿಗೆ ಬದಲು ನಮ್ಮದು ಭ್ರಷ್ಟಾಚಾರದ ವಿರುದ್ಧ ಬಂಡಾಯ- ಶಿಂಧೆ

Date:

ನಾನು ಮುಖ್ಯಮಂತ್ರಿಯಾಗಲು ಬಂಡಾಯವೆದ್ದಿರಲಿಲ್ಲ.

ಶಿವಸೇನೆ, ಕಾಂಗ್ರೆಸ್ ಮೈತ್ರಿ ಸರ್ಕಾರದ ಭ್ರಷ್ಟಾಚಾರ ಸಹಿಸಲಾಗದೇ ನಾವೆಲ್ಲರೂ ಹೊರಬಂದಿದ್ದೇವೆ ಎಂದು ಶಿವಸೇನೆಯ ಬಂಡಾಯ ಶಾಸಕ ಏಕನಾಥ್ ಶಿಂಧೆ ಸಮರ್ಥಿಸಿಕೊಂಡಿದ್ದಾರೆ.

ಮಹಾರಾಷ್ಟ್ರದ ಮುಂದಿನ ಸಿಎಂ ಏಕನಾಥ್​ ಶಿಂಧೆ ಎಂದು ಮಾಜಿ ಸಿಎಂ ದೇವೆಂದ್ರ ಫಡ್ನವಿಸ್​ ಘೋಷಿಸಿದ ಬೆನ್ನಲ್ಲೇ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ಶಿವಸೇನೆ ಮತ್ತು ಎನ್​ಸಿಪಿ ಸರ್ಕಾರದ ಭ್ರಷ್ಟಾಚಾರದಿಂದ ಸಾಕಾಗಿ ಹೋಗಿದ್ದೆವು ಎಂದು ಹೇಳಿದ್ದಾರೆ.

ಶಿವಸೇನೆ ಮತ್ತು ಎನ್​ಸಿಪಿ ಮೈತ್ರಿ ಬಾಳಾಸಾಹೇಬ್​ ಠಾಕ್ರೆ ಅವರ ತತ್ವ ಸಿದ್ಧಾಂತದ ವಿರುದ್ಧವಾಗಿತ್ತು. ಅದೆಲ್ಲವನ್ನೂ ತೊರೆದು ಮೈತ್ರಿ ಮಾಡಿಕೊಂಡಿದ್ದ ಸರ್ಕಾರದಲ್ಲಿ ಸಚಿವರಿಂದಲೇ ನಡೆಯುತ್ತಿದ್ದ ಭ್ರಷ್ಟಾರದಿಂದ ಬೇಸತ್ತು ನಾವು ಹೊರಬಂದಿದ್ದೇವೆ.1980ರ ದಶಕದಲ್ಲಿ ಶಿವಸೇನೆ ಮೂಲಕ ರಾಜಕೀಯಕ್ಕೆ ಪ್ರವೇಶಿಸಿದ ಶಿಂಧೆ ಬಾಳಾಠಾಕ್ರೆ ಅವರಿಂದ ಹಿಂದುತ್ವದ ರಾಜಕೀಯ ಕಲಿತು ಮಹಾರಾಷ್ಟ್ರದಲ್ಲಿ ತಮ್ಮದೇ ಛಾಪನ್ನು ಮೂಡಿಸಿದ್ದಾರೆ.

ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಲಿರುವ ಏಕನಾಥ್​ ಶಿಂಧೆ ಅವರು ಕಿಂಗ್ ಮೇಕರ್ ಅಲ್ಲ ಕಿಂಗ್​​, ಈ ಎಲ್ಲಾ ಬೆಳವಣಿಗೆಗಳಲ್ಲಿ ನಾನು ಯಾವ ಪಾತ್ರವನ್ನೂ ವಹಿಸಿಲ್ಲ, ಇದೆಲ್ಲಾ ಶ್ರೇಯಸ್ಸು ಶಿಂಧೆ ಅವರಿಗೆ ಸೇರಬೇಕಿದೆ. ಹಾಗಾಗಿ ಮುಖ್ಯಮಂತ್ರಿ ಸ್ಥಾನವನ್ನು ಅವರಿಗೆ ಬಿಟ್ಟುಕೊಡುವ ಮೂಲಕ ಬಾಳಾಠಾಕ್ರೆ ಅವರಿಗೆ ಗೌರವ ನೀಡುತ್ತಿದ್ದೇವೆ ಎಂದು ಮಾಜಿ ಸಿಎಂ ದೇವೇಂದ್ರ ಫಡ್ನವಿಸ್​ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಕ್ರಾಂತಿಕಾರಿ ಬಸವಣ್ಣನವರ ದಾರಿಯಲ್ಲಿ ಸಾಗುವ ಸಂಕಲ್ಪ ಮಾಡೋಣ- ಬಿ.ವೈ.ರಾಘವೇಂದ್ರ

B.Y. Raghavendra ಕಾಯಕ- ದಾಸೋಹ ಮತ್ತು ಸಾಮಾಜಿಕ ನ್ಯಾಯದ ತತ್ವಗಳನ್ನು ಸಾರಿದ...

Bharat Scouts and Guides ಕೃಷಿ ಕ್ಷೇತ್ರ ಮಾಹಿತಿಯಿಂದ ವಿದ್ಯಾರ್ಥಿಗಳು ಪರಿಪೂರ್ಣರಾಗಲು ಸಾಧ್ಯ- ಕೆ.ರವಿ

Bharat Scouts and Guides ಕೃಷಿ ಕ್ಷೇತ್ರದಲ್ಲಿ ಆಗುತ್ತಿರುವ ಪ್ರಗತಿಯ ಬಗ್ಗೆ...

Klive special Article “ಶಂಕರಂ ಲೋಕ ಶಂಕರಂ” ಎನ್.ಜಯಭೀಮ್ ಜೊಯ್ಸ್, ಶಿವಮೊಗ್ಗ

Klive special Article ಶ್ರೀಶಂಕರಾಚಾರ್ಯ ಗುರುಗಳು (ಶ್ರೀಶಂಕರಜಯಂತಿಯ ಸಂದರ್ಭದಲ್ಲಿ)ಪ್ರತಿವರ್ಷ ವೈಶಾಖಮಾಸದ...

RM Manjunath Gowda ಹುಲಿಕಲ್ ಘಾಟಿ ಪ್ರಕರಣ.ಇಂಜಿನಿಯರುಗಳೇ ಹೊಣೆ. ಎಫ್ ಐ ಆರ್ ದಾಖಲಿಸಲು ಎಸ್ ಪಿ.ಅವರಿಗೆ ಮನವಿ ಮಾಡುವೆ- ಆರ್.ಎಂ.ಮಂಜುನಾಥ ಗೌಡ.

RM Manjunath Gowda ಹುಲಿಕಲ್ ಘಾಟಿ ಪ್ರಕರಣದಲ್ಲಿ ಎಫ್ಐಆರ್ ದಾಖಲಾದ ಹಿನ್ನೆಲೆಯಲ್ಲಿ ಮಕೆನಾಡು...